AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲೂ ಪಟಾಕಿ ನಿಷೇಧ ಆಯ್ತು.. ಅಲ್ಲಿನ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ ಹೇಳಿದ್ದೇನು?

ತೆಲಂಗಾಣ: ದೀಪಾವಳಿ‌ ಹಬ್ಬ ಸನಿಹವಾಗುತ್ತಿರುವ ಹಿನ್ನೆಲೆಯಿಂದಾಗಿ ಪಟಾಕಿಗಳಿಂದ ಹೊರಬರುವ ಮಾಲಿನ್ಯಕಾರಕ ಹೊಗೆ ಜನರಿಗೆ ತೊಂದರೆಯುನ್ನುಂಟು ಮಾಡುತ್ತವೆ. ಅಲ್ಲದೆ ದೇಶದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿರುವುದನ್ನು ಗಮನಿಸಿದ ಕೆಲವೊಂದು ರಾಜ್ಯ ಸರ್ಕಾರಗಳು ತಮ್ಮ ರಾಜ್ಯದಲ್ಲಿ ಪಟಾಕಿ ಮಾರಾಟ ಮತ್ತು ಸಿಡಿಸುವುದನ್ನು ನಿಷೇಧ ಮಾಡಿವೆ. ಈಗ ತೆಲಂಗಾಣ ಹೈಕೋರ್ಟ್​ ಸಹ ರಾಜ್ಯದಲ್ಲಿ ಪಟಾಕಿ ನಿಷೇದ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. ನ್ಯಾಯವಾದಿ ಇಂದ್ರಪ್ರಕಾಶ ಅವರು ದೀಪಾವಳಿಯಲ್ಲಿ‌ ಪಟಾಕಿ‌ ಹೊಡೆಯದಂತೆ ಹೈಕೋರ್ಟ್​ನಲ್ಲಿ ಪಿಟಿಷನ್ ಹೂಡಿದ್ದರು.​ ತೆಲಂಗಾಣದಲ್ಲಿ ಇನ್ನೂ ಕೂಡ ಕೊರೊನಾ ಹಾವಳಿ […]

ಅಲ್ಲೂ ಪಟಾಕಿ ನಿಷೇಧ ಆಯ್ತು.. ಅಲ್ಲಿನ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ ಹೇಳಿದ್ದೇನು?
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​|

Updated on: Nov 12, 2020 | 4:28 PM

Share

ತೆಲಂಗಾಣ: ದೀಪಾವಳಿ‌ ಹಬ್ಬ ಸನಿಹವಾಗುತ್ತಿರುವ ಹಿನ್ನೆಲೆಯಿಂದಾಗಿ ಪಟಾಕಿಗಳಿಂದ ಹೊರಬರುವ ಮಾಲಿನ್ಯಕಾರಕ ಹೊಗೆ ಜನರಿಗೆ ತೊಂದರೆಯುನ್ನುಂಟು ಮಾಡುತ್ತವೆ. ಅಲ್ಲದೆ ದೇಶದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿರುವುದನ್ನು ಗಮನಿಸಿದ ಕೆಲವೊಂದು ರಾಜ್ಯ ಸರ್ಕಾರಗಳು ತಮ್ಮ ರಾಜ್ಯದಲ್ಲಿ ಪಟಾಕಿ ಮಾರಾಟ ಮತ್ತು ಸಿಡಿಸುವುದನ್ನು ನಿಷೇಧ ಮಾಡಿವೆ.

ಈಗ ತೆಲಂಗಾಣ ಹೈಕೋರ್ಟ್​ ಸಹ ರಾಜ್ಯದಲ್ಲಿ ಪಟಾಕಿ ನಿಷೇದ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. ನ್ಯಾಯವಾದಿ ಇಂದ್ರಪ್ರಕಾಶ ಅವರು ದೀಪಾವಳಿಯಲ್ಲಿ‌ ಪಟಾಕಿ‌ ಹೊಡೆಯದಂತೆ ಹೈಕೋರ್ಟ್​ನಲ್ಲಿ ಪಿಟಿಷನ್ ಹೂಡಿದ್ದರು.​ ತೆಲಂಗಾಣದಲ್ಲಿ ಇನ್ನೂ ಕೂಡ ಕೊರೊನಾ ಹಾವಳಿ ಇದೆ. ಹೀಗಾಗಿ ಪಟಾಕಿ‌ ಹೊಡೆಯುವದರಿಂದ ಜನರು‌ ಶ್ವಾಸಕೋಶದ ಸಮಸ್ಯೆಗೆ ಈಡಾಗುತ್ತಾರೆ. ಆದ್ದರಿಂದ ಪ್ರಸ್ತುತ ಪರಿಸ್ಥಿತಿಯಲ್ಲಿ ಪಟಾಕಿ ಹೊಡೆಯುವುದು ಸರಿ ಅಲ್ಲ ಎಂದು ನ್ಯಾಯವಾದಿ ಇಂದ್ರಪ್ರಕಾಶ ವಾದ ಮಂಡಿಸಿದರು. ಜೊತೆಗೆ ಪಟಾಕಿ‌‌ಯನ್ನು ಬ್ಯಾನ್‌ ಮಾಡುವಂತೆ ಮನವಿ ಮಾಡಿದ್ದರು. ವಾದವನ್ನು ಪುರಸ್ಕರಿಸಿದ ಹೈಕೋರ್ಟ್​ ಪಟಾಕಿ ಬ್ಯಾನ್ ಮಾಡುವಂತೆ ಸರ್ಕಾರಕ್ಕೆ ಆದೇಶ ನೀಡಿದೆ.

ಅಲ್ಲದೆ ಮಾಧ್ಯಮಗಳ ಮೂಲಕ ಈ ಬಗ್ಗೆ ಪ್ರಚಾರ ಮಾಡಿ ಪಟಾಕಿ‌ ಹೊಡೆಯದಂತೆ ಪ್ರಜೆಗಳಲ್ಲಿ‌ ಜಾಗೃತಿ ಮೂಡಿಸಲು ಸರಕಾರಕ್ಕೆ ಆದೇಶ ನೀಡಿದೆ. ಜೊತೆಗೆ ಪಟಾಕಿ ಹೊಡೆದವರ ಮೇಲೆ ಪ್ರಕರಣ ದಾಖಲಿಸಲು ಸಹ ಸೂಚನೆ ನೀಡಿದೆ. ಹಾಗೂ ಇದೇ 19 ರಂದು ಈ‌ ಬಗ್ಗೆ ತೆಗೆದುಕೊಂಡ ಕ್ರಮದ ಬಗ್ಗೆ ವರದಿ ನೀಡಲು ಹೇಳಿದೆ.

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್