AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ : ಬುರ್ಖಾ ಧರಿಸಿ ಪರೀಕ್ಷೆ ಬರೆಯಲು ಅನುಮತಿ ಕೊಟ್ಟ ಕಾಲೇಜು ಸಿಬ್ಬಂದಿ, ಮಂಗಳಸೂತ್ರ ತೆಗೆಸಿದ್ದಕ್ಕೆ ಆಕ್ಷೇಪ

Telangana : ಅಕ್ಟೋಬರ್ 16ರಂದು ಆದಿಲಾಬಾದಿನಲ್ಲಿ ತೆಲಂಗಾಣ ಲೋಕಸೇವಾ ಆಯೋಗವು ನಡೆಸಿದ ಗ್ರೂಪ್-1 ಪೂರ್ವಭಾವಿ ಪರೀಕ್ಷೆಯಲ್ಲಿ ಈ ಘಟನೆ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ಪಕ್ಷಗಳ ಮುಖಂಡರುಗಳು ಪರಸ್ಪರ ಟೀಕಾಪ್ರಹಾರಕ್ಕಿಳಿದಿದ್ದಾರೆ.

ತೆಲಂಗಾಣ : ಬುರ್ಖಾ ಧರಿಸಿ ಪರೀಕ್ಷೆ ಬರೆಯಲು ಅನುಮತಿ ಕೊಟ್ಟ ಕಾಲೇಜು ಸಿಬ್ಬಂದಿ, ಮಂಗಳಸೂತ್ರ ತೆಗೆಸಿದ್ದಕ್ಕೆ ಆಕ್ಷೇಪ
ಸಾಂದರ್ಭಿಕ ಚಿತ್ರ
TV9 Web
| Updated By: ಶ್ರೀದೇವಿ ಕಳಸದ|

Updated on:Oct 19, 2022 | 1:46 PM

Share

Viral Video : ಕರ್ನಾಟಕದ ಹಿಜಾಬ್ ವಿವಾದವು ಸುಪ್ರೀಂ ಕೋರ್ಟ್​ನ ಮೆಟ್ಟಿಲೇರಿರುವಾಗ, ತೆಲಂಗಾಣದಲ್ಲಿ ಈ ಕುರಿತಾದ ವಿವಾದವು ಬಿರುಸು ಪಡೆದುಕೊಳ್ಳುವ ಲಕ್ಷಣ ತೋರುತ್ತಿದೆ. ತೆಲಂಗಾಣದ ಪರೀಕ್ಷಾ ಕೇಂದ್ರವೊಂದರಲ್ಲಿ ಭದ್ರತಾ ಸಿಬ್ಬಂದಿಯು ಹಿಂದೂ ಹೆಣ್ಣುಮಕ್ಕಳಿಗೆ ಮಂಗಳಸೂತ್ರ, ಬಳೆ, ಕಾಲುಚೈನು ತೆಗೆದಿಟ್ಟು ಕೊಠಡಿ ಪ್ರವೇಶಿಸಬೇಕೆಂದು ಕೇಳಿಕೊಂಡಿದೆ. ಆದರೆ, ಮುಸ್ಲಿಮ್ ಹೆಣ್ಣುಮಕ್ಕಳಿಗೆ ಬುರ್ಖಾ ಧರಿಸಿ ಪ್ರವೇಶಿಸಲು ಅವಕಾಶ ನೀಡಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ. ರಾಜಕೀಯ ಪಕ್ಷಗಳ ಮುಖಂಡರುಗಳು ಪರಸ್ಪರ ಟೀಕಾಪ್ರಹಾರ ಮಾಡಿದ್ದಾರೆ.

ಅಕ್ಟೋಬರ್ 16ರಂದು ಆದಿಲಾಬಾದ್‌ನ ವಿದ್ಯಾರ್ಥಿ ಜ್ಯೂನಿಯರ್ ಮತ್ತು ಡಿಗ್ರಿ ಕಾಲೇಜಿನಲ್ಲಿ ತೆಲಂಗಾಣ ಲೋಕಸೇವಾ ಆಯೋಗವು (TSPSC) ನಡೆಸಿದ ಗ್ರೂಪ್-1 ಪೂರ್ವಭಾವಿ ಪರೀಕ್ಷೆಯಲ್ಲಿ ಈ ಘಟನೆ ನಡೆದಿದೆ. ಆದಿಲಾಬಾದ್‌ನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಕೊಠಡಿ ಪ್ರವೇಶಿಸುವ ಮುನ್ನ ಹಿಂದೂ ಅಭ್ಯರ್ಥಿಗಳು ಮಾಂಗಲ್ಯ, ಕಿವಿಯೋಲೆ, ಕಾಲುಂಗುರ, ಕಾಲುಚೈನು ತೆಗೆಯಬೇಕೆಂದು ಭದ್ರತಾ ಸಿಬ್ಬಂದಿಯು ಮನವಿ ಮಾಡಿಕೊಂಡಿದೆ. ಆ ಪ್ರಕಾರ ಎಲ್ಲರೂ ಆಭರಣಗಳನ್ನು ಬಿಚ್ಚಿಟ್ಟಿದ್ದಾರೆ. ಆದರೆ, ಮುಸ್ಲಿಂ ಹೆಣ್ಣುಮಕ್ಕಳಿಗೆ ಬುರ್ಖಾ ಧರಿಸಿಯೇ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

‘ಮುಸ್ಲಿಂ ಮಹಿಳೆಯರಿಗೆ ಬುರ್ಖಾ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಆದರೆ ಹಿಂದೂ ಹೆಣ್ಣುಮಕ್ಕಳಿಗೆ ಮಾತ್ರ ಗೆಜ್ಜೆ, ಮಾಂಗಲ್ಯ, ಕಿವಿಯೋಲೆ, ಬಳೆ ತೆಗೆದು ಪರೀಕ್ಷಾ ಕೊಠಡಿ ಪ್ರವೇಶಿಸಲು ತಿಳಿಸಿದೆ. ಇದು ನಾಚಿಕೇಗೇಡು ಸಂಗತಿ’ ಎಂದು ಬಿಜಿಪಿ ನಾಯಕಿ ಪ್ರೀತಿ ಗಾಂಧಿ ಪ್ರಸ್ತುತ  ವಿಡಿಯೋಗೆ ಒಕ್ಕಣೆ ಬರೆದು ಟ್ವೀಟ್ ಮಾಡಿದ್ದಾರೆ.

ತೆಲಂಗಾಣ ರಾಷ್ಟ್ರ ಸಮಿತಿ (TRS)ಯು ಅಲ್ಪಸಂಖ್ಯಾತರನ್ನು ಓಲೈಸುತ್ತಿದೆ ಎಂದು ರಾಜ್ಯದ ಇತರೇ ಬಿಜೆಪಿ ನಾಯಕರು ಟ್ವಿಟರ್​ನಲ್ಲಿ ವಾಗ್ದಾಳಿ ನಡೆಸಿದ್ದಾರೆ. ಟಿಆರ್‌ಎಸ್ ನಾಯಕ ಕೃಷನ್ ಬುರ್ಖಾ ಧರಿಸಿದ ಮಹಿಳೆಯನ್ನು ತಪಾಸಣೆ ಮಾಡುತ್ತಿರುವ ವಿಡಿಯೋ ಟ್ವೀಟ್ ಮಾಡಿ, ‘ಇನ್ನೊಂದು ಪರೀಕ್ಷಾ ಕೇಂದ್ರದಲ್ಲಿ, ಸರ್ಕಾರದ ಪರೀಕ್ಷಾ ನಿಯಮಾವಳಿ ಪ್ರಕಾರ ಎಲ್ಲರಿಗೂ ಒಂದೇರೀತಿಯ ತಪಾಸಣೆ ಮಾಡಲಾಗಿದೆ. ಆದರೆ ಅಧಿಕಾರಿಗಳು ಬುರ್ಖಾ ತೆಗೆಯಲು ಮುಸ್ಲಿಂ ಮಹಿಳೆಯರಿಗೆ ಕೇಳಿಕೊಂಡಿಲ್ಲ. ಹಾಗಾಗಿ ಅವರು ಹಾಗೆಯೇ ಪರೀಕ್ಷಾ ಕೊಠಡಿ ಪ್ರವೇಶಿಸಿದ್ದಾರೆ. ಇದೆಲ್ಲವನ್ನೂ ಗಮನಿಸಿದಾಗ, ಬಿಜೆಪಿಯು ಶಾಂತಿ ಕದಡಲು ಪ್ರಯತ್ನಿಸುತ್ತಿದೆ ಎನ್ನಿಸುತ್ತಿದೆ’ ಎಂದಿದ್ದಾರೆ.

ಗ್ರೂಪ್ 1 ಪರೀಕ್ಷೆ ನಡೆದ ಕೇಂದ್ರವೊಂದರಲ್ಲಿ ಮಾತ್ರ ಪೊಲೀಸರು ನಿಷ್ಪಕ್ಷಪಾತವಾಗಿ ನಡೆದುಕೊಂಡಿದ್ದಾರೆ. ಭಾರತ ಸರ್ಕಾರದ ಸ್ಪರ್ಧಾತ್ಮಕ ಪರೀಕ್ಷೆಗಳ ಮಾರ್ಗಸೂಚಿಯನ್ನು ಅನುಸರಿಸಿದ್ದಾರೆ. ಆದರೆ ತೆಲಂಗಾಣದ ಸೌಹಾರ್ದತೆಯನ್ನು ಕದಡಲು ಬಿಜೆಪಿಯು ಇಂಥ ಕೆಲವು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.

ಆದಿಲಾಬಾದ್​ನ ಎಸ್​ಪಿ ಡಿ. ಉದಯ್ ಕುಮಾರ್ ರೆಡ್ಡಿ, ‘ಹಿಂದೂ ಮಹಿಳೆಯರಿಗೆ ಉಳಿದ ಆಭರಣಗಳೊಂದಿಗೆ ಮಂಗಳಸೂತ್ರವನ್ನೂ ತೆಗೆದಿರಿಸಲು ಹೇಳಿದ್ದರಲ್ಲಿ ತಪ್ಪಿದೆ. ಅದನ್ನು ನಂತರ ಸರಿಪಡಿಸಿಕೊಳ್ಳಲಾಗಿದೆ. ಮಂಡಲ್ ಕಂದಾಯ ಅಧಿಕಾರಿಯ ತಪ್ಪಿನಿಂದ ಆರಂಭದಲ್ಲಿ ಇದೆಲ್ಲ ಘಟಿಸಿದೆ. ಆದರೆ ನಮಗೆ ಈ ವಿಷಯ ತಿಳಿಯುತ್ತಿದ್ದಂತೆ ಹಿಂದೂ ಮಹಿಳೆಯರಿಗೆ ಮಂಗಳಸೂತ್ರ ಧರಿಸಿ ಪರೀಕ್ಷಾ ಕೊಠಡಿ ಪ್ರವೇಶಿಸಲು ಅನುವು ಮಾಡಿಕೊಡಲಾಗಿದೆ.’  ಎಂದಿದ್ದಾರೆ.

ಇನ್ನಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:31 pm, Wed, 19 October 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್