AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Telangana Lockdown: ತೆಲಂಗಾಣದಲ್ಲಿ ಇನ್ನೂ 10 ದಿನಗಳ ಅವಧಿಗೆ ಲಾಕ್​ಡೌನ್ ವಿಸ್ತರಣೆ

ನಿರ್ಬಂಧ ಸಡಿಲಿಕೆ ಅವಧಿಯನ್ನು ಸಂಜೆ 5 ಗಂಟೆಯವರೆಗೆ ವಿಸ್ತರಿಸಲಾಗಿದೆ. ಜನರು ಮನೆಗಳಿಗೆ ಹಿಂದಿರುಗಲು ಅವಕಾಶ ನೀಡಲು ಮತ್ತೂ ಒಂದು ಗಂಟೆಯ ವಿನಾಯ್ತಿ ನೀಡಲಾಗಿದೆ. ಸಂಜೆ 6 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯದಲ್ಲಿ ಕಟ್ಟುನಿಟ್ಟಿನ ಲಾಕ್​ಡೌನ್ ಇರುತ್ತದೆ.

Telangana Lockdown: ತೆಲಂಗಾಣದಲ್ಲಿ ಇನ್ನೂ 10 ದಿನಗಳ ಅವಧಿಗೆ ಲಾಕ್​ಡೌನ್ ವಿಸ್ತರಣೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 08, 2021 | 9:28 PM

Share

ಹೈದರಾಬಾದ್: ತೆಲಂಗಾಣ ಸರ್ಕಾರವು ಜೂನ್ 10ರಿಂದ ಇನ್ನೂ 10 ದಿನಗಳ ಅವಧಿಗೆ ಲಾಕ್​ಡೌನ್ ವಿಸ್ತರಿಸಲು ನಿರ್ಧರಿಸಿದೆ. ನಿರ್ಬಂಧ ಸಡಿಲಿಕೆ ಅವಧಿಯನ್ನು ಸಂಜೆ 5 ಗಂಟೆಯವರೆಗೆ ವಿಸ್ತರಿಸಲಾಗಿದೆ. ಜನರು ಮನೆಗಳಿಗೆ ಹಿಂದಿರುಗಲು ಅವಕಾಶ ನೀಡಲು ಮತ್ತೂ ಒಂದು ಗಂಟೆಯ ವಿನಾಯ್ತಿ ನೀಡಲಾಗಿದೆ. ಸಂಜೆ 6 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯದಲ್ಲಿ ಕಟ್ಟುನಿಟ್ಟಿನ ಲಾಕ್​ಡೌನ್ ಇರುತ್ತದೆ.

ನಗರದಲ್ಲಿ ಸಂಜೆ 3 ಗಂಟೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಿಸ್ತೃತ ಮಾರ್ಗಸೂಚಿಯನ್ನು ಶೀಘ್ರ ಪ್ರಕಟಿಸಲಾಗುವುದು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ತೆಲಂಗಾಣದ ಸತ್ತುಪಲ್ಲಿ, ಮದಿರ, ನಲ್ಗೊಂಡ, ನಾಗಾರ್ಜುನ ಸಾಗರ, ದೇವರಕೊಂಡ, ಮುನುಗೋಡು ಮತ್ತು ಮಿರ್ಯಾಲಗೂಡ ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಿಗ್ಗೆ 6ರಿಂದ ಮಧ್ಯಾಹ್ನ 1ರವರೆಗೆ ಈಗಿರುವಂತೆಯೇ ಲಾಕ್​ಡೌನ್​ ವಿಸ್ತರಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಈ ಕ್ಷೇತ್ರಗಳಲ್ಲಿ ಇನ್ನೂ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಬಂದಿಲ್ಲ.

ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್​ ಅಧ್ಯಕ್ಷತೆಯಲ್ಲಿ ನಡೆದ ಸುದೀರ್ಘ ಸಚಿವ ಸಂಪುಟ ಸಭೆಯಲ್ಲಿ ಲಾಕ್​ಡೌನ್, ಲಸಿಕೆ ಅಭಿಯಾನ, ರಾಜ್ಯದ ಆರ್ಥಿಕ ಸ್ಥಿತಿಗತಿ, ಕೃಷಿ ಚಟುವಟಿಕೆ, ವೇತನ ಪರಿಷ್ಕರಣ ಆಯೋಗದ ವರದಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಿತು.

ತೆಲಂಗಾಣದಲ್ಲಿ ಮೇ 12ರಿಂದ ಲಾಕ್​ಡೌನ್ ಜಾರಿಯಲ್ಲಿದೆ. ಬೆಳಿಗ್ಗೆ 6ರಿಂದ 1 ಗಂಟೆಯವರೆಗೆ ಅತ್ಯವಶ್ಯಕ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಲಾಕ್​ಡೌನ್ ವಿಸ್ತರಿಸಬಾರದ ಎಂದು ಎಐಎಂಐಎಂ ರಾಜ್ಯ ಸರ್ಕಾರವನ್ನು ಒತ್ತಾಯಿಸಿತ್ತು. ಲಾಕ್​ಡೌನ್ ಜಾರಿಗೂ ಮೊದಲು ರಾಜ್ಯದಲ್ಲಿ ಕೇವಲ ರಾತ್ರಿ ಕರ್ಫ್ಯೂ ಮಾತ್ರ ಇತ್ತು. ಕೊರೊನಾ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಹೆಚ್ಚಾದ ಕಾರಣ ರಾಜ್ಯದ ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್​ ಲಾಕ್​ಡೌನ್ ವಿಧಿಸಬೇಕೆಂದು ಪ್ರತಿಪಾದಿಸಿದ್ದರು.

(Telangana Lockdown Extended for Another 10 Days)

ಇದನ್ನೂ ಓದಿ: ಭೂಕಬಳಿಕೆ ಆರೋಪ ಎದುರಿಸುತ್ತಿರುವ ತೆಲಂಗಾಣ ಮಾಜಿ ಸಚಿವ ಎಟೆಲಾ ರಾಜೇಂದರ್​ ರಾಜೀನಾಮೆ; ಶೀಘ್ರವೇ ಬಿಜೆಪಿ ಸೇರ್ಪಡೆ?

ಇದನ್ನೂ ಓದಿ: ತೆಲಂಗಾಣದ 135 ವರ್ಷ ಹಳೆಯ ಜೈಲು ಖಾಲಿ, ಇಲ್ಲಿ ತಲೆ ಎತ್ತಲಿದೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ

Published On - 9:24 pm, Tue, 8 June 21

Follow Us
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ