Sign In

By signing in or creating an account, you agree with Associated Broadcasting Company's Terms & Conditions and Privacy Policy.

Telangana Lockdown: ತೆಲಂಗಾಣದಲ್ಲಿ ಇನ್ನೂ 10 ದಿನಗಳ ಅವಧಿಗೆ ಲಾಕ್​ಡೌನ್ ವಿಸ್ತರಣೆ

ನಿರ್ಬಂಧ ಸಡಿಲಿಕೆ ಅವಧಿಯನ್ನು ಸಂಜೆ 5 ಗಂಟೆಯವರೆಗೆ ವಿಸ್ತರಿಸಲಾಗಿದೆ. ಜನರು ಮನೆಗಳಿಗೆ ಹಿಂದಿರುಗಲು ಅವಕಾಶ ನೀಡಲು ಮತ್ತೂ ಒಂದು ಗಂಟೆಯ ವಿನಾಯ್ತಿ ನೀಡಲಾಗಿದೆ. ಸಂಜೆ 6 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯದಲ್ಲಿ ಕಟ್ಟುನಿಟ್ಟಿನ ಲಾಕ್​ಡೌನ್ ಇರುತ್ತದೆ.

Telangana Lockdown: ತೆಲಂಗಾಣದಲ್ಲಿ ಇನ್ನೂ 10 ದಿನಗಳ ಅವಧಿಗೆ ಲಾಕ್​ಡೌನ್ ವಿಸ್ತರಣೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 08, 2021 | 9:28 PM

ಹೈದರಾಬಾದ್: ತೆಲಂಗಾಣ ಸರ್ಕಾರವು ಜೂನ್ 10ರಿಂದ ಇನ್ನೂ 10 ದಿನಗಳ ಅವಧಿಗೆ ಲಾಕ್​ಡೌನ್ ವಿಸ್ತರಿಸಲು ನಿರ್ಧರಿಸಿದೆ. ನಿರ್ಬಂಧ ಸಡಿಲಿಕೆ ಅವಧಿಯನ್ನು ಸಂಜೆ 5 ಗಂಟೆಯವರೆಗೆ ವಿಸ್ತರಿಸಲಾಗಿದೆ. ಜನರು ಮನೆಗಳಿಗೆ ಹಿಂದಿರುಗಲು ಅವಕಾಶ ನೀಡಲು ಮತ್ತೂ ಒಂದು ಗಂಟೆಯ ವಿನಾಯ್ತಿ ನೀಡಲಾಗಿದೆ. ಸಂಜೆ 6 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯದಲ್ಲಿ ಕಟ್ಟುನಿಟ್ಟಿನ ಲಾಕ್​ಡೌನ್ ಇರುತ್ತದೆ.

ನಗರದಲ್ಲಿ ಸಂಜೆ 3 ಗಂಟೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಿಸ್ತೃತ ಮಾರ್ಗಸೂಚಿಯನ್ನು ಶೀಘ್ರ ಪ್ರಕಟಿಸಲಾಗುವುದು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ತೆಲಂಗಾಣದ ಸತ್ತುಪಲ್ಲಿ, ಮದಿರ, ನಲ್ಗೊಂಡ, ನಾಗಾರ್ಜುನ ಸಾಗರ, ದೇವರಕೊಂಡ, ಮುನುಗೋಡು ಮತ್ತು ಮಿರ್ಯಾಲಗೂಡ ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಿಗ್ಗೆ 6ರಿಂದ ಮಧ್ಯಾಹ್ನ 1ರವರೆಗೆ ಈಗಿರುವಂತೆಯೇ ಲಾಕ್​ಡೌನ್​ ವಿಸ್ತರಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಈ ಕ್ಷೇತ್ರಗಳಲ್ಲಿ ಇನ್ನೂ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಬಂದಿಲ್ಲ.

ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್​ ಅಧ್ಯಕ್ಷತೆಯಲ್ಲಿ ನಡೆದ ಸುದೀರ್ಘ ಸಚಿವ ಸಂಪುಟ ಸಭೆಯಲ್ಲಿ ಲಾಕ್​ಡೌನ್, ಲಸಿಕೆ ಅಭಿಯಾನ, ರಾಜ್ಯದ ಆರ್ಥಿಕ ಸ್ಥಿತಿಗತಿ, ಕೃಷಿ ಚಟುವಟಿಕೆ, ವೇತನ ಪರಿಷ್ಕರಣ ಆಯೋಗದ ವರದಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಿತು.

ತೆಲಂಗಾಣದಲ್ಲಿ ಮೇ 12ರಿಂದ ಲಾಕ್​ಡೌನ್ ಜಾರಿಯಲ್ಲಿದೆ. ಬೆಳಿಗ್ಗೆ 6ರಿಂದ 1 ಗಂಟೆಯವರೆಗೆ ಅತ್ಯವಶ್ಯಕ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಲಾಕ್​ಡೌನ್ ವಿಸ್ತರಿಸಬಾರದ ಎಂದು ಎಐಎಂಐಎಂ ರಾಜ್ಯ ಸರ್ಕಾರವನ್ನು ಒತ್ತಾಯಿಸಿತ್ತು. ಲಾಕ್​ಡೌನ್ ಜಾರಿಗೂ ಮೊದಲು ರಾಜ್ಯದಲ್ಲಿ ಕೇವಲ ರಾತ್ರಿ ಕರ್ಫ್ಯೂ ಮಾತ್ರ ಇತ್ತು. ಕೊರೊನಾ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಹೆಚ್ಚಾದ ಕಾರಣ ರಾಜ್ಯದ ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್​ ಲಾಕ್​ಡೌನ್ ವಿಧಿಸಬೇಕೆಂದು ಪ್ರತಿಪಾದಿಸಿದ್ದರು.

(Telangana Lockdown Extended for Another 10 Days)

ಇದನ್ನೂ ಓದಿ: ಭೂಕಬಳಿಕೆ ಆರೋಪ ಎದುರಿಸುತ್ತಿರುವ ತೆಲಂಗಾಣ ಮಾಜಿ ಸಚಿವ ಎಟೆಲಾ ರಾಜೇಂದರ್​ ರಾಜೀನಾಮೆ; ಶೀಘ್ರವೇ ಬಿಜೆಪಿ ಸೇರ್ಪಡೆ?

ಇದನ್ನೂ ಓದಿ: ತೆಲಂಗಾಣದ 135 ವರ್ಷ ಹಳೆಯ ಜೈಲು ಖಾಲಿ, ಇಲ್ಲಿ ತಲೆ ಎತ್ತಲಿದೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ

Published On - 9:24 pm, Tue, 8 June 21

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ