AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Telangana Lockdown: ತೆಲಂಗಾಣದಲ್ಲಿ ಇನ್ನೂ 10 ದಿನಗಳ ಅವಧಿಗೆ ಲಾಕ್​ಡೌನ್ ವಿಸ್ತರಣೆ

ನಿರ್ಬಂಧ ಸಡಿಲಿಕೆ ಅವಧಿಯನ್ನು ಸಂಜೆ 5 ಗಂಟೆಯವರೆಗೆ ವಿಸ್ತರಿಸಲಾಗಿದೆ. ಜನರು ಮನೆಗಳಿಗೆ ಹಿಂದಿರುಗಲು ಅವಕಾಶ ನೀಡಲು ಮತ್ತೂ ಒಂದು ಗಂಟೆಯ ವಿನಾಯ್ತಿ ನೀಡಲಾಗಿದೆ. ಸಂಜೆ 6 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯದಲ್ಲಿ ಕಟ್ಟುನಿಟ್ಟಿನ ಲಾಕ್​ಡೌನ್ ಇರುತ್ತದೆ.

Telangana Lockdown: ತೆಲಂಗಾಣದಲ್ಲಿ ಇನ್ನೂ 10 ದಿನಗಳ ಅವಧಿಗೆ ಲಾಕ್​ಡೌನ್ ವಿಸ್ತರಣೆ
ಪ್ರಾತಿನಿಧಿಕ ಚಿತ್ರ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jun 08, 2021 | 9:28 PM

Share

ಹೈದರಾಬಾದ್: ತೆಲಂಗಾಣ ಸರ್ಕಾರವು ಜೂನ್ 10ರಿಂದ ಇನ್ನೂ 10 ದಿನಗಳ ಅವಧಿಗೆ ಲಾಕ್​ಡೌನ್ ವಿಸ್ತರಿಸಲು ನಿರ್ಧರಿಸಿದೆ. ನಿರ್ಬಂಧ ಸಡಿಲಿಕೆ ಅವಧಿಯನ್ನು ಸಂಜೆ 5 ಗಂಟೆಯವರೆಗೆ ವಿಸ್ತರಿಸಲಾಗಿದೆ. ಜನರು ಮನೆಗಳಿಗೆ ಹಿಂದಿರುಗಲು ಅವಕಾಶ ನೀಡಲು ಮತ್ತೂ ಒಂದು ಗಂಟೆಯ ವಿನಾಯ್ತಿ ನೀಡಲಾಗಿದೆ. ಸಂಜೆ 6 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯದಲ್ಲಿ ಕಟ್ಟುನಿಟ್ಟಿನ ಲಾಕ್​ಡೌನ್ ಇರುತ್ತದೆ.

ನಗರದಲ್ಲಿ ಸಂಜೆ 3 ಗಂಟೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಿಸ್ತೃತ ಮಾರ್ಗಸೂಚಿಯನ್ನು ಶೀಘ್ರ ಪ್ರಕಟಿಸಲಾಗುವುದು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ತೆಲಂಗಾಣದ ಸತ್ತುಪಲ್ಲಿ, ಮದಿರ, ನಲ್ಗೊಂಡ, ನಾಗಾರ್ಜುನ ಸಾಗರ, ದೇವರಕೊಂಡ, ಮುನುಗೋಡು ಮತ್ತು ಮಿರ್ಯಾಲಗೂಡ ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಿಗ್ಗೆ 6ರಿಂದ ಮಧ್ಯಾಹ್ನ 1ರವರೆಗೆ ಈಗಿರುವಂತೆಯೇ ಲಾಕ್​ಡೌನ್​ ವಿಸ್ತರಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಈ ಕ್ಷೇತ್ರಗಳಲ್ಲಿ ಇನ್ನೂ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಬಂದಿಲ್ಲ.

ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್​ ಅಧ್ಯಕ್ಷತೆಯಲ್ಲಿ ನಡೆದ ಸುದೀರ್ಘ ಸಚಿವ ಸಂಪುಟ ಸಭೆಯಲ್ಲಿ ಲಾಕ್​ಡೌನ್, ಲಸಿಕೆ ಅಭಿಯಾನ, ರಾಜ್ಯದ ಆರ್ಥಿಕ ಸ್ಥಿತಿಗತಿ, ಕೃಷಿ ಚಟುವಟಿಕೆ, ವೇತನ ಪರಿಷ್ಕರಣ ಆಯೋಗದ ವರದಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಿತು.

ತೆಲಂಗಾಣದಲ್ಲಿ ಮೇ 12ರಿಂದ ಲಾಕ್​ಡೌನ್ ಜಾರಿಯಲ್ಲಿದೆ. ಬೆಳಿಗ್ಗೆ 6ರಿಂದ 1 ಗಂಟೆಯವರೆಗೆ ಅತ್ಯವಶ್ಯಕ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಲಾಕ್​ಡೌನ್ ವಿಸ್ತರಿಸಬಾರದ ಎಂದು ಎಐಎಂಐಎಂ ರಾಜ್ಯ ಸರ್ಕಾರವನ್ನು ಒತ್ತಾಯಿಸಿತ್ತು. ಲಾಕ್​ಡೌನ್ ಜಾರಿಗೂ ಮೊದಲು ರಾಜ್ಯದಲ್ಲಿ ಕೇವಲ ರಾತ್ರಿ ಕರ್ಫ್ಯೂ ಮಾತ್ರ ಇತ್ತು. ಕೊರೊನಾ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಹೆಚ್ಚಾದ ಕಾರಣ ರಾಜ್ಯದ ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್​ ಲಾಕ್​ಡೌನ್ ವಿಧಿಸಬೇಕೆಂದು ಪ್ರತಿಪಾದಿಸಿದ್ದರು.

(Telangana Lockdown Extended for Another 10 Days)

ಇದನ್ನೂ ಓದಿ: ಭೂಕಬಳಿಕೆ ಆರೋಪ ಎದುರಿಸುತ್ತಿರುವ ತೆಲಂಗಾಣ ಮಾಜಿ ಸಚಿವ ಎಟೆಲಾ ರಾಜೇಂದರ್​ ರಾಜೀನಾಮೆ; ಶೀಘ್ರವೇ ಬಿಜೆಪಿ ಸೇರ್ಪಡೆ?

ಇದನ್ನೂ ಓದಿ: ತೆಲಂಗಾಣದ 135 ವರ್ಷ ಹಳೆಯ ಜೈಲು ಖಾಲಿ, ಇಲ್ಲಿ ತಲೆ ಎತ್ತಲಿದೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ

Published On - 9:24 pm, Tue, 8 June 21

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?