AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Telangana Lockdown: ತೆಲಂಗಾಣದಲ್ಲಿ ಇನ್ನೂ 10 ದಿನಗಳ ಅವಧಿಗೆ ಲಾಕ್​ಡೌನ್ ವಿಸ್ತರಣೆ

ನಿರ್ಬಂಧ ಸಡಿಲಿಕೆ ಅವಧಿಯನ್ನು ಸಂಜೆ 5 ಗಂಟೆಯವರೆಗೆ ವಿಸ್ತರಿಸಲಾಗಿದೆ. ಜನರು ಮನೆಗಳಿಗೆ ಹಿಂದಿರುಗಲು ಅವಕಾಶ ನೀಡಲು ಮತ್ತೂ ಒಂದು ಗಂಟೆಯ ವಿನಾಯ್ತಿ ನೀಡಲಾಗಿದೆ. ಸಂಜೆ 6 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯದಲ್ಲಿ ಕಟ್ಟುನಿಟ್ಟಿನ ಲಾಕ್​ಡೌನ್ ಇರುತ್ತದೆ.

Telangana Lockdown: ತೆಲಂಗಾಣದಲ್ಲಿ ಇನ್ನೂ 10 ದಿನಗಳ ಅವಧಿಗೆ ಲಾಕ್​ಡೌನ್ ವಿಸ್ತರಣೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 08, 2021 | 9:28 PM

Share

ಹೈದರಾಬಾದ್: ತೆಲಂಗಾಣ ಸರ್ಕಾರವು ಜೂನ್ 10ರಿಂದ ಇನ್ನೂ 10 ದಿನಗಳ ಅವಧಿಗೆ ಲಾಕ್​ಡೌನ್ ವಿಸ್ತರಿಸಲು ನಿರ್ಧರಿಸಿದೆ. ನಿರ್ಬಂಧ ಸಡಿಲಿಕೆ ಅವಧಿಯನ್ನು ಸಂಜೆ 5 ಗಂಟೆಯವರೆಗೆ ವಿಸ್ತರಿಸಲಾಗಿದೆ. ಜನರು ಮನೆಗಳಿಗೆ ಹಿಂದಿರುಗಲು ಅವಕಾಶ ನೀಡಲು ಮತ್ತೂ ಒಂದು ಗಂಟೆಯ ವಿನಾಯ್ತಿ ನೀಡಲಾಗಿದೆ. ಸಂಜೆ 6 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯದಲ್ಲಿ ಕಟ್ಟುನಿಟ್ಟಿನ ಲಾಕ್​ಡೌನ್ ಇರುತ್ತದೆ.

ನಗರದಲ್ಲಿ ಸಂಜೆ 3 ಗಂಟೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಿಸ್ತೃತ ಮಾರ್ಗಸೂಚಿಯನ್ನು ಶೀಘ್ರ ಪ್ರಕಟಿಸಲಾಗುವುದು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ತೆಲಂಗಾಣದ ಸತ್ತುಪಲ್ಲಿ, ಮದಿರ, ನಲ್ಗೊಂಡ, ನಾಗಾರ್ಜುನ ಸಾಗರ, ದೇವರಕೊಂಡ, ಮುನುಗೋಡು ಮತ್ತು ಮಿರ್ಯಾಲಗೂಡ ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಿಗ್ಗೆ 6ರಿಂದ ಮಧ್ಯಾಹ್ನ 1ರವರೆಗೆ ಈಗಿರುವಂತೆಯೇ ಲಾಕ್​ಡೌನ್​ ವಿಸ್ತರಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಈ ಕ್ಷೇತ್ರಗಳಲ್ಲಿ ಇನ್ನೂ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಬಂದಿಲ್ಲ.

ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್​ ಅಧ್ಯಕ್ಷತೆಯಲ್ಲಿ ನಡೆದ ಸುದೀರ್ಘ ಸಚಿವ ಸಂಪುಟ ಸಭೆಯಲ್ಲಿ ಲಾಕ್​ಡೌನ್, ಲಸಿಕೆ ಅಭಿಯಾನ, ರಾಜ್ಯದ ಆರ್ಥಿಕ ಸ್ಥಿತಿಗತಿ, ಕೃಷಿ ಚಟುವಟಿಕೆ, ವೇತನ ಪರಿಷ್ಕರಣ ಆಯೋಗದ ವರದಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಿತು.

ತೆಲಂಗಾಣದಲ್ಲಿ ಮೇ 12ರಿಂದ ಲಾಕ್​ಡೌನ್ ಜಾರಿಯಲ್ಲಿದೆ. ಬೆಳಿಗ್ಗೆ 6ರಿಂದ 1 ಗಂಟೆಯವರೆಗೆ ಅತ್ಯವಶ್ಯಕ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಲಾಕ್​ಡೌನ್ ವಿಸ್ತರಿಸಬಾರದ ಎಂದು ಎಐಎಂಐಎಂ ರಾಜ್ಯ ಸರ್ಕಾರವನ್ನು ಒತ್ತಾಯಿಸಿತ್ತು. ಲಾಕ್​ಡೌನ್ ಜಾರಿಗೂ ಮೊದಲು ರಾಜ್ಯದಲ್ಲಿ ಕೇವಲ ರಾತ್ರಿ ಕರ್ಫ್ಯೂ ಮಾತ್ರ ಇತ್ತು. ಕೊರೊನಾ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಹೆಚ್ಚಾದ ಕಾರಣ ರಾಜ್ಯದ ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್​ ಲಾಕ್​ಡೌನ್ ವಿಧಿಸಬೇಕೆಂದು ಪ್ರತಿಪಾದಿಸಿದ್ದರು.

(Telangana Lockdown Extended for Another 10 Days)

ಇದನ್ನೂ ಓದಿ: ಭೂಕಬಳಿಕೆ ಆರೋಪ ಎದುರಿಸುತ್ತಿರುವ ತೆಲಂಗಾಣ ಮಾಜಿ ಸಚಿವ ಎಟೆಲಾ ರಾಜೇಂದರ್​ ರಾಜೀನಾಮೆ; ಶೀಘ್ರವೇ ಬಿಜೆಪಿ ಸೇರ್ಪಡೆ?

ಇದನ್ನೂ ಓದಿ: ತೆಲಂಗಾಣದ 135 ವರ್ಷ ಹಳೆಯ ಜೈಲು ಖಾಲಿ, ಇಲ್ಲಿ ತಲೆ ಎತ್ತಲಿದೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ

Published On - 9:24 pm, Tue, 8 June 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ