AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Telangana: ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿರುವಾಗ ಕುಸಿದು ಬಿದ್ದು ಯುವಕ ಸಾವು

ಮದುವೆ ಸಮಾರಂಭದಲ್ಲಿ ನೃತ್ಯ ಮಾಡುತ್ತಿರುವಾಗ ಕುಸಿದುಬಿದ್ದು, 19 ವರ್ಷದ ಯುವಕನೋರ್ವ ಮೃತಪಟ್ಟಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

Telangana: ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿರುವಾಗ ಕುಸಿದು ಬಿದ್ದು ಯುವಕ ಸಾವು
ನೃತ್ಯ ಮಾಡುತ್ತಾ ಕುಸಿದುಬಿದ್ದು ಯುವ ಸಾವು
ನಯನಾ ರಾಜೀವ್
|

Updated on: Feb 28, 2023 | 10:17 AM

Share

ಮದುವೆ ಸಮಾರಂಭದಲ್ಲಿ ನೃತ್ಯ ಮಾಡುತ್ತಿರುವಾಗ ಕುಸಿದುಬಿದ್ದು, 19 ವರ್ಷದ ಯುವಕನೋರ್ವ ಮೃತಪಟ್ಟಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಯುವಕ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯವನೆಂದು ತಿಳಿದುಬಂದಿದೆ. ತನ್ನ ಸಂಬಂಧಿಕರ ಮದುವೆಯಲ್ಲಿ ನೃತ್ಯ ಮಾಡುತ್ತಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಹೈದರಾಬಾದ್​ನಿಂದ 200 ಕಿ.ಮೀ ದೂರದಲ್ಲಿರುವ ನಿರ್ಮಲ್ ಜಿಲ್ಲೆಯ ಪಾರ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಕೂಡ ವೈರಲ್ ಆಗಿದೆ. ಸಂಬಂಧಿಕರ ಮದುವೆಯಲ್ಲಿ ಪಾಲ್ಗೊಳ್ಳಲು ತೆರಳಿದ್ದ ಯುವಕ ಡಿಜೆಯಲ್ಲಿ ಹಾಡಿ ಕುಣಿಯುತ್ತಿದ್ದ. ಈ ಘಟನೆಯಿಂದ ಕುಟುಂಬಸ್ಥರು ಹಾಗೂ ಸಂಬಂಧಿಕರಲ್ಲಿ ಶೋಕ ಮಡುಗಟ್ಟಿತ್ತು. ಇತ್ತೀಚೆಗೆ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿವೆ.

ಯುವಕನನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಪರೀಕ್ಷೆಯ ನಂತರ ಅವನು ಸಾವನ್ನಪ್ಪಿದ್ದಾನೆ ಎಂದು ಘೋಷಿಸಿದರು. ಘಟನೆಯ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮತ್ತಷ್ಟು ಓದಿ: Heart Attack: ನಿಮಗೆ ಹೃದಯಾಘಾತದ ಅಪಾಯ ಎದುರಾಗಬಾರದು ಎಂದಿದ್ದರೆ ಈ ಒಂದು ವಿಚಾರವನ್ನು ಸದಾ ನೆನಪಿನಲ್ಲಿಡಿ

ಯುವಕ ಭಾರಿ ಹೃದಯಸ್ತಂಭನಕ್ಕೆ ಒಳಗಾಗಿರಬಹುದು ಎಂದು ವೈದ್ಯರು ಹೇಳಿದ್ದಾರೆ. ನಾಲ್ಕು ದಿನದಲ್ಲಿ ತೆಲಂಗಾಣದಲ್ಲಿ ಇಂತಹ ಎರಡನೇ ಘಟನೆ ಇದಾಗಿದೆ. ಫೆಬ್ರವರಿ 22 ರಂದು ಹೈದರಾಬಾದ್​ನ ಜಿಮ್​ನಲ್ಲಿ ವ್ಯಾಯಾಮ ಮಾಡುವಾಗ ಕುಸಿದುಬಿದ್ದು 24 ವರ್ಷದ ಕಾನ್​ಸ್ಟೇಬಲ್ ಮೃತಪಟ್ಟಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!