AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಡ್ಬರಿ ಡೈರಿಮಿಲ್ಕ್​ ಚಾಕೊಲೇಟ್​ನಲ್ಲಿ ಹುಳು ಪತ್ತೆ

ಚಾಕೊಲೇಟ್​ನಲ್ಲಿ ಹುಳುಗಳಿವೆ ಎಂದು ವ್ಯಕ್ತಿಯೊಬ್ಬರು ತೆಲಂಗಾಣ ಆಹಾರ ಪ್ರಯೋಗಾಲಯಕ್ಕೆ ಚಾಕೊಲೇಟ್​ನ್ನು ಕಳುಹಿಸಿದ್ದರು. ಪರೀಕ್ಷೆಗೆ ಕಳುಹಿಸಲಾದ ಎರಡು ಚಾಕೊಲೇಟ್‌ಗಳಲ್ಲಿ ಹುಳುಗಳಿರುವುದು ಹೌದು ಎಂಬುದು ಸಾಬೀತಾಗಿದೆ. ಚಾಕೊಲೇಟ್‌ಗಳು ಸೇವನೆಗೆ ಅಸುರಕ್ಷಿತ ಎಂದು ವರದಿ ಹೇಳಿದೆ.

ಕ್ಯಾಡ್ಬರಿ ಡೈರಿಮಿಲ್ಕ್​ ಚಾಕೊಲೇಟ್​ನಲ್ಲಿ ಹುಳು ಪತ್ತೆ
ಚಾಕೊಲೇಟ್​
ನಯನಾ ರಾಜೀವ್
|

Updated on:Feb 29, 2024 | 2:05 PM

Share

ಕ್ಯಾಡ್ಬರಿ ಡೈರಿ ಮಿಲ್ಕ್​ನಲ್ಲಿ ಹುಳುಗಳು ಪತ್ತೆಯಾಗಿವೆ,  ತೆಲಂಗಾಣ ರಾಜ್ಯ ಆಹಾರ ಪ್ರಯೋಗಾಲಯವು ಎರಡು ಕ್ಯಾಡ್ಬರಿ ಡೈರಿ ಮಿಲ್ಕ್(Dairy Milk) ಚಾಕೊಲೇಟ್‌ಗಳಲ್ಲಿ ಹುಳುಗಳಿರುವುದನ್ನು ದೃಢಪಡಿಸಿವೆ.  ಪ್ರಯೋಗಾಲಯವು ಚಾಕೊಲೇಟ್‌ಗಳು ಸೇವನೆಗೆ ಅಸುರಕ್ಷಿತ ಎಂದು ಹೇಳಿದೆ. ತಮ್ಮ ಚಾಕೊಲೇಟ್​ನಲ್ಲಿ ಹುಳು ಇದೆ ಎಂದು ವ್ಯಕ್ತಿಯೊಬ್ಬರು ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಅದರ ವರದಿ ಇದೀಗ ಬಂದಿದ್ದು, ಅದು ಹುಳು ಹೌದು ಎಂದು ಖಚಿತಪಡಿಸಲಾಗಿದೆ.

ರಾಬಿನ್ ಜಾಕಿಯಸ್ ಅವರು ಫೆಬ್ರವರಿ 9 ರಂದು ಹೈದರಾಬಾದ್‌ನ ಅಮೀರಪೇಟ್‌ನ ಸೂಪರ್‌ಮಾರ್ಕೆಟ್‌ನಿಂದ ಖರೀದಿಸಿದ ಚಾಕೊಲೇಟ್‌ಗಳಲ್ಲಿ ಹುಳುಗಳು ಕಂಡುಬಂದ ನಂತರ ಪರೀಕ್ಷೆಗೆ ಕಳುಹಿಸಿದ್ದರು. ಬುಧವಾರ, ರಾಬಿನ್ ಎಂಬುವವರು ಎಕ್ಸ್​ನಲ್ಲಿ ತೆಲಂಗಾಣ ರಾಜ್ಯ ಆಹಾರ ಪ್ರಯೋಗಾಲಯದ ವರದಿಯನ್ನು ಹಂಚಿಕೊಂಡಿದ್ದಾರೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆ, 2006 ರ ಸೆಕ್ಷನ್ 3 (zz) (iii) (ix) ಅಡಿಯಲ್ಲಿ ಅಸುರಕ್ಷಿತವೆಂದು ಪರಿಗಣಿಸಲಾಗಿದೆ ಎಂದು ಪ್ರಯೋಗಾಲಯದ ವರದಿ ಹೇಳಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರನ್ನು ಟ್ಯಾಗ್ ಮಾಡಿದ ರಾಬಿನ್, ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಚಾಕೊಲೇಟ್​ ಅಚ್ಚುಮೆಚ್ಚು, ಹೀಗಿರುವಾಗ ಅವರ ಆರೋಗ್ಯದ ಗತಿ ಎನು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಓದಿ: Chocolate Day 2024 Date: ಚಾಕೋಲೇಟ್ ದಿನ ಯಾವಾಗ?; ಅದರ ಇತಿಹಾಸ, ವಿಶೇಷತೆಯೇನು?

ಪೋಸ್ಟ್ 5.1 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಹೊಂದಿದೆ. ಶೇರ್ ಮೂಲಕ ಸುಮಾರು 2,500 ಲೈಕ್‌ಗಳು ಬಂದಿವೆ, ಈ ಕುರಿತು ಜನರು ವಿಭಿನ್ನ ಕಮೆಂಟ್‌ಗಳನ್ನು ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:59 pm, Thu, 29 February 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!