AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಡ್ಬರಿ ಡೈರಿಮಿಲ್ಕ್​ ಚಾಕೊಲೇಟ್​ನಲ್ಲಿ ಹುಳು ಪತ್ತೆ

ಚಾಕೊಲೇಟ್​ನಲ್ಲಿ ಹುಳುಗಳಿವೆ ಎಂದು ವ್ಯಕ್ತಿಯೊಬ್ಬರು ತೆಲಂಗಾಣ ಆಹಾರ ಪ್ರಯೋಗಾಲಯಕ್ಕೆ ಚಾಕೊಲೇಟ್​ನ್ನು ಕಳುಹಿಸಿದ್ದರು. ಪರೀಕ್ಷೆಗೆ ಕಳುಹಿಸಲಾದ ಎರಡು ಚಾಕೊಲೇಟ್‌ಗಳಲ್ಲಿ ಹುಳುಗಳಿರುವುದು ಹೌದು ಎಂಬುದು ಸಾಬೀತಾಗಿದೆ. ಚಾಕೊಲೇಟ್‌ಗಳು ಸೇವನೆಗೆ ಅಸುರಕ್ಷಿತ ಎಂದು ವರದಿ ಹೇಳಿದೆ.

ಕ್ಯಾಡ್ಬರಿ ಡೈರಿಮಿಲ್ಕ್​ ಚಾಕೊಲೇಟ್​ನಲ್ಲಿ ಹುಳು ಪತ್ತೆ
ಚಾಕೊಲೇಟ್​
ನಯನಾ ರಾಜೀವ್
|

Updated on:Feb 29, 2024 | 2:05 PM

Share

ಕ್ಯಾಡ್ಬರಿ ಡೈರಿ ಮಿಲ್ಕ್​ನಲ್ಲಿ ಹುಳುಗಳು ಪತ್ತೆಯಾಗಿವೆ,  ತೆಲಂಗಾಣ ರಾಜ್ಯ ಆಹಾರ ಪ್ರಯೋಗಾಲಯವು ಎರಡು ಕ್ಯಾಡ್ಬರಿ ಡೈರಿ ಮಿಲ್ಕ್(Dairy Milk) ಚಾಕೊಲೇಟ್‌ಗಳಲ್ಲಿ ಹುಳುಗಳಿರುವುದನ್ನು ದೃಢಪಡಿಸಿವೆ.  ಪ್ರಯೋಗಾಲಯವು ಚಾಕೊಲೇಟ್‌ಗಳು ಸೇವನೆಗೆ ಅಸುರಕ್ಷಿತ ಎಂದು ಹೇಳಿದೆ. ತಮ್ಮ ಚಾಕೊಲೇಟ್​ನಲ್ಲಿ ಹುಳು ಇದೆ ಎಂದು ವ್ಯಕ್ತಿಯೊಬ್ಬರು ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಅದರ ವರದಿ ಇದೀಗ ಬಂದಿದ್ದು, ಅದು ಹುಳು ಹೌದು ಎಂದು ಖಚಿತಪಡಿಸಲಾಗಿದೆ.

ರಾಬಿನ್ ಜಾಕಿಯಸ್ ಅವರು ಫೆಬ್ರವರಿ 9 ರಂದು ಹೈದರಾಬಾದ್‌ನ ಅಮೀರಪೇಟ್‌ನ ಸೂಪರ್‌ಮಾರ್ಕೆಟ್‌ನಿಂದ ಖರೀದಿಸಿದ ಚಾಕೊಲೇಟ್‌ಗಳಲ್ಲಿ ಹುಳುಗಳು ಕಂಡುಬಂದ ನಂತರ ಪರೀಕ್ಷೆಗೆ ಕಳುಹಿಸಿದ್ದರು. ಬುಧವಾರ, ರಾಬಿನ್ ಎಂಬುವವರು ಎಕ್ಸ್​ನಲ್ಲಿ ತೆಲಂಗಾಣ ರಾಜ್ಯ ಆಹಾರ ಪ್ರಯೋಗಾಲಯದ ವರದಿಯನ್ನು ಹಂಚಿಕೊಂಡಿದ್ದಾರೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆ, 2006 ರ ಸೆಕ್ಷನ್ 3 (zz) (iii) (ix) ಅಡಿಯಲ್ಲಿ ಅಸುರಕ್ಷಿತವೆಂದು ಪರಿಗಣಿಸಲಾಗಿದೆ ಎಂದು ಪ್ರಯೋಗಾಲಯದ ವರದಿ ಹೇಳಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರನ್ನು ಟ್ಯಾಗ್ ಮಾಡಿದ ರಾಬಿನ್, ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಚಾಕೊಲೇಟ್​ ಅಚ್ಚುಮೆಚ್ಚು, ಹೀಗಿರುವಾಗ ಅವರ ಆರೋಗ್ಯದ ಗತಿ ಎನು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಓದಿ: Chocolate Day 2024 Date: ಚಾಕೋಲೇಟ್ ದಿನ ಯಾವಾಗ?; ಅದರ ಇತಿಹಾಸ, ವಿಶೇಷತೆಯೇನು?

ಪೋಸ್ಟ್ 5.1 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಹೊಂದಿದೆ. ಶೇರ್ ಮೂಲಕ ಸುಮಾರು 2,500 ಲೈಕ್‌ಗಳು ಬಂದಿವೆ, ಈ ಕುರಿತು ಜನರು ವಿಭಿನ್ನ ಕಮೆಂಟ್‌ಗಳನ್ನು ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:59 pm, Thu, 29 February 24

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್