AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರನೇ ಮಗುವೂ ಹೆಣ್ಣಾಗುತ್ತದೆಂದು ಹೆದರಿ ಗರ್ಭಿಣಿ ಹೆಂಡತಿ, ಮಕ್ಕಳನ್ನು ನೀರಲ್ಲಿ ಮುಳುಗಿಸಿ ಕೊಂದ ಪಾಪಿ

ಜಗತ್ತು ಎಷ್ಟೇ ಬದಲಾಗಿದ್ದರೂ ಲಿಂಗ ತಾರತಮ್ಯ ಇನ್ನೂ ಕಡಿಮೆಯಾಗಿಲ್ಲ. ಗಂಡು ಮಕ್ಕಳಾದರೆ ಮಾತ್ರ ವಂಶ ಬೆಳೆಯುತ್ತದೆ, ಗಂಡು ಮಗನೇ ನಮ್ಮ ವಾರಸ್ದಾರ ಎಂಬ ಅಭಿಪ್ರಾಯ ಇಂದಿಗೂ ಅನೇಕ ಜನರಲ್ಲಿರುವುದು ವಿಪರ್ಯಾಸ. ತೆಲಂಗಾಣದಲ್ಲಿ ವ್ಯಕ್ತಿಯೊಬ್ಬ ತನಗೆ ಮೂರನೇ ಮಗುವೂ ಹೆಣ್ಣಾಗಬಹುದು ಎಂಬ ಭಯದಿಂದ ಗರ್ಭಿಣಿ ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಕೊಂದಿದ್ದಾನೆ. ಈ ಘಟನೆ ಭಾರೀ ಆಘಾತಕಾರಿಯಾಗಿದ್ದು, ಆತನ ಕೃತ್ಯ ಬೆಳಕಿಗೆ ಬಂದಿದ್ದು ಹೇಗೆಂಬ ಮಾಹಿತಿ ಇಲ್ಲಿದೆ.

ಮೂರನೇ ಮಗುವೂ ಹೆಣ್ಣಾಗುತ್ತದೆಂದು ಹೆದರಿ ಗರ್ಭಿಣಿ ಹೆಂಡತಿ, ಮಕ್ಕಳನ್ನು ನೀರಲ್ಲಿ ಮುಳುಗಿಸಿ ಕೊಂದ ಪಾಪಿ
Azaruddin With Wife And DaughtersImage Credit source: TV9
ಸುಷ್ಮಾ ಚಕ್ರೆ
|

Updated on: Apr 03, 2026 | 6:01 PM

Share

ಹೈದರಾಬಾದ್, ಏಪ್ರಿಲ್ 3: ತೆಲಂಗಾಣದಲ್ಲಿ ಶಾಕಿಂಗ್ ಘಟನೆಯೊಂದು ನಡೆದಿದೆ. ಮತ್ತೊಂದು ಬಾರಿ ಗರ್ಭಿಣಿಯಾಗಿದ್ದ (Pregnant Death) ಹೆಂಡತಿ ಈ ಬಾರಿಯೂ ಹೆಣ್ಣುಮಗುವನ್ನೇ ಹೆರುತ್ತಾಳೆ ಎಂಬ ಭಯದಿಂದ ವ್ಯಕ್ತಿಯೊಬ್ಬ ತನ್ನ ಹೆಂಡತಿ ಮತ್ತು ಇಬ್ಬರು ಪುಟ್ಟ ಮಕ್ಕಳನ್ನು ಈಜುಕೊಳಕ್ಕೆ ತಳ್ಳಿ, ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾನೆ. ಆ ಬಳಿಕ ಇದೊಂದು ಆಕಸ್ಮಿಕ ಸಾವು ಎಂದು ಎಲ್ಲರನ್ನೂ ನಂಬಿಸಿದ್ದಾನೆ. ಆದರೂ ಮೃತ ಮಹಿಳೆಯ ಕುಟುಂಬಸ್ಥರ ಅನುಮಾನದಿಂದಾಗಿ ಆತ ಸಿಕ್ಕಿಹಾಕಿಕೊಂಡಿದ್ದಾನೆ. ತೆಲಂಗಾಣದ ಹನ್ಮಕೊಂಡ ಜಿಲ್ಲೆಯ ಐನವೊಲು ಮಂಡಲದ ಪುನ್ನೇಲು ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಅಜರುದ್ದೀನ್ ಎಂಬ ವ್ಯಕ್ತಿಗೆ ಈಗಾಗಲೇ ಇಬ್ಬರು ಹೆಣ್ಣುಮಕ್ಕಳಿದ್ದರು. ಅವರ ಪತ್ನಿ ಗರ್ಭಿಣಿಯಾಗಿದ್ದರು. ಈಗಾಗಲೇ ಇಬ್ಬರು ಹೆಣ್ಣುಮಕ್ಕಳು ಇದ್ದುದರಿಂದ ಈ ಬಾರಿಯೂ ಹೆಣ್ಣುಮಗುವಾಗುತ್ತದೆ ಎಂದು ಆತನಿಗೆ ಆತಂಕವಿತ್ತು. ಆಕೆ ಗರ್ಭಪಾತ ಮಾಡಿಸಿಕೊಳ್ಳಲು ನಿರಾಕರಿಸಿದ್ದರಿಂದ ಆತನ ಭಯ ಹೆಚ್ಚಾಗಿತ್ತು. ಆಕೆಯ ಹೊಟ್ಟೆಯಲ್ಲಿರುವುದು ಹೆಣ್ಣು ಮಗುವೇ ಎಂಬ ಅನುಮಾನದಿಂದ ಆತ ಕೋಪಗೊಂಡಿದ್ದ.

ಇದನ್ನೂ ಓದಿ: ಕೌಟಿಂಬಿಕ ಕಲಹ: ಬೆಂಕಿ ಹಚ್ಚಿಕೊಂಡು ರಾಮನಗರದಲ್ಲಿ 5 ತಿಂಗಳ ಗರ್ಭಿಣಿ ಆತ್ಮಹತ್ಯೆ

ಎರಡು ಬಾರಿ ಗರ್ಭಪಾತ ಮಾಡಿಸಿಕೊಳ್ಳುವಂತೆ ಒತ್ತಾಯಿಸಿದ್ದರೂ ಆಕೆ ಒಪ್ಪಿರಲಿಲ್ಲ. ಅಜರುದ್ದೀನ್ ಮತ್ತು ಫರ್ಹತ್ ಅವರಿಗೆ ಉಮೇರಾ (8) ಮತ್ತು ಆಯೇಷಾ (6) ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದರು. ವಾರಂಗಲ್-ಖಮ್ಮಮ್ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಗ್ರಾಮದ ಹೊರವಲಯದಲ್ಲಿರುವ ಈಜುಕೊಳವನ್ನು ನಿರ್ವಹಿಸುವ ಕೆಲಸವನ್ನು ಅಜರುದ್ದೀನ್ ಮಾಡುತ್ತಿದ್ದರು. ಅದೇ ಅವರ ಜೀವನಕ್ಕೆ ಆಧಾರವಾಗಿತ್ತು.

ವಿಚಿತ್ರ ಸಂಗತಿಯೆಂದರೆ, ಇಬ್ಬರು ಹೆಣ್ಣು ಮಕ್ಕಳ ಜನನದ ನಂತರ ಫರ್ಹತ್ ಮತ್ತೆ 2 ಬಾರಿ ಗರ್ಭಿಣಿಯಾಗಿದ್ದರು. ಆದರೆ ಎರಡೂ ಬಾರಿ ಆಕೆ ಇನ್ನೊಂದು ಹೆಣ್ಣು ಮಗುವಿಗೆ ಜನ್ಮ ನೀಡುತ್ತಾರೆ ಎಂಬ ಭಯದಿಂದ ಅಜರುದ್ದೀನ್ ಗರ್ಭಪಾತ ಮಾಡಿಸಿದ್ದ. ಅದಾದ 4 ವರ್ಷಗಳ ನಂತರ ಆಕೆ ಮತ್ತೆ ಗರ್ಭಿಣಿಯಾಗಿದ್ದರು. ಈ ಬಾರಿಯೂ ಹೆಣ್ಣುಮಗುವೇ ಆಗುತ್ತದೆ ಎಂದು ಅಜರುದ್ದೀನ್​ಗೆ ಅನಿಸತೊಡಗಿತ್ತು. ಹೀಗಾಗಿ, ಮತ್ತೆ ಗರ್ಭಪಾತ ಮಾಡಿಸಿಕೊಳ್ಳಲು ಒತ್ತಾಯಿಸಿದ್ದ. ಆದರೆ, ಈ ಬಾರಿ ಆಕೆ ಅದಕ್ಕೆ ಒಪ್ಪಿರಲಿಲ್ಲ. ಏನೇ ಆದರೂ ಈ ಮಗುವಿಗೆ ಜನ್ಮ ನೀಡುತ್ತೇನೆ ಎಂದು ಆಕೆ ಹಠ ಹಿಡಿದಿದ್ದರು. ಇದರಿಂದ ಆತ ಕೋಪಗೊಂಡಿದ್ದ.

ಇದನ್ನೂ ಓದಿ: ಗೋಲ್ಗಪ್ಪಲ್ಲಿ ವಿಷ ಬೆರೆಸಿ ಗರ್ಭಿಣಿ ಗೆಳತಿಯ ಕೊಲೆಗೆ ಯತ್ನ, ಆಸ್ಪತ್ರೆಗೆಂದು ಕರೆದು ಕಾಡಿನಲ್ಲಿ ಬಿಟ್ಟು ಬಂದ ವ್ಯಕ್ತಿ

ಬಳಿಕ ಆತ ತಾನು ಕೆಲಸ ಮಾಡುವ ಈಜುಕೊಳಕ್ಕೆ ತನ್ನ ಹೆಂಡತಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಕರೆದೊಯ್ದು, ನೀರಿಗೆ ತಳ್ಳಿ ಕೊಲೆ ಮಾಡಿದ. ಇದಾದ ನಂತರ ಈ ಘಟನೆಯನ್ನು ಆಕಸ್ಮಿಕವಾಗಿ ಮುಳುಗಿ ಸಾವನ್ನಪ್ಪಿರುವುದಾಗಿ ಬಿಂಬಿಸಲು ಪ್ರಯತ್ನಿಸಿದ್ದ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ತನ್ನ ಮಗಳು ಮತ್ತು ಮೊಮ್ಮಕ್ಕಳ ಸಾವು ಸಹಜವಲ್ಲ ಎಂದು ಫರ್ಹತ್‌ನ ತಂದೆ ಅನುಮಾನ ವ್ಯಕ್ತಪಡಿಸಿ ಅಜರುದ್ದೀನ್ ವಿರುದ್ಧ ಆರೋಪ ಮಾಡಿದ್ದರು. ಇದರ ಆಧಾರದ ಮೇಲೆ ಪೊಲೀಸರು ಅವನನ್ನು ವಿಚಾರಣೆಗಾಗಿ ವಶಕ್ಕೆ ಪಡೆದರ. ಆ ಸಮಯದಲ್ಲಿ ಆತ ತಾನು ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ