AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣದ ಮಾಜಿ ಸಿಎಂ ಕೆಸಿಆರ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ವ್ಯಕ್ತಿಯ ಬರ್ಬರ ಹತ್ಯೆ

ಕಾಲೇಶ್ವರಂ ಯೋಜನೆಯ ಭಾಗವಾಗಿ ಮೇಡಿಗಡ್ಡ ಬ್ಯಾರೇಜ್ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಮತ್ತು ಇತರರ ವಿರುದ್ಧ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದ ವ್ಯಕ್ತಿಯು, ಬುಧವಾರ ಜಯಶಂಕರ್ ಭೂಪಾಲಪಲ್ಲಿ ಪಟ್ಟಣದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತೆಲಂಗಾಣದ ಮಾಜಿ ಸಿಎಂ ಕೆಸಿಆರ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ವ್ಯಕ್ತಿಯ ಬರ್ಬರ ಹತ್ಯೆ
ಕೆಸಿಆರ್
ನಯನಾ ರಾಜೀವ್
|

Updated on:Feb 20, 2025 | 12:05 PM

Share

ತೆಲಂಗಾಣ, ಫೆಬ್ರವರಿ 20: ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ವ್ಯಕ್ತಿ ರಾಜಲಿಂಗಮೂರ್ತಿ ಎಂಬುವವರು ಜಯಶಂಕರ್ ಭೂಪಾಲಪಲ್ಲಿ ಪಟ್ಟಣದಲ್ಲಿ ಕೊಲೆಯಾಗಿದ್ದಾರೆ. ಕಾಲೇಶ್ವರಂ ಯೋಜನೆಯ ಭಾಗವಾಗಿ ಮೇಡಗಡ್ಡಿ ಬ್ಯಾರೇಜ್ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆಸಿದೆ ಎಂದು ಕೆಸಿಆರ್ ಹಾಗೂ ಇತರರ ವಿರುದ್ಧ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಆದರೆ ಈ ಘಟನೆ ರಾಜಕೀಯ ದ್ವೇಷದಿಂದ ನಡೆದಿದ್ದಲ್ಲ ಎಂದು ಪೊಲೀಸರು ಹೇಳಿದ್ದಾರೆ. ಭೂ ವಿವಾದದ ಹಿನ್ನೆಲೆಯಲ್ಲಿ 50 ರ ವಯಸ್ಸಿನ ಎನ್. ರಾಜಲಿಂಗಮೂರ್ತಿ ಅವರನ್ನು ಇಬ್ಬರು ಅಪರಿಚಿತ ವ್ಯಕ್ತಿಗಳು ಇರಿದು ಕೊಂದಿದ್ದಾರೆ. ಬುಧವಾರ ಸಂಜೆ 7.30 ರ ಸುಮಾರಿಗೆ ಮೋಟಾರ್ ಸೈಕಲ್‌ನಲ್ಲಿ ಹೋಗುತ್ತಿದ್ದ ರಾಜಲಿಂಗಮೂರ್ತಿ ಅವರನ್ನು ಅಡ್ಡಗಟ್ಟಿದ ಇಬ್ಬರು ವ್ಯಕ್ತಿಗಳು ಇರಿದು ಕೊಂದಿದ್ದಾರೆ.

ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೇಡಿಗಡ್ಡ ಬ್ಯಾರೇಜ್‌ನ ಕೆಲವು ಪಿಲ್ಲರ್​ಗಳು ಮುಳುಗಿದ ಬಳಿಕ ಕೆಸಿಆರ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ರಾಜಲಿಂಗಮೂರ್ತಿ ಅವರು ಅಕ್ಟೋಬರ್ 2023 ರಲ್ಲಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ಮತ್ತಷ್ಟು ಓದಿ: ಹೈಕೋರ್ಟ್‌ನಲ್ಲಿ ವಾದಿಸುತ್ತಿದ್ದಾಗಲೇ ಹೃದಯಾಘಾತದಿಂದ ಹಿರಿಯ ವಕೀಲ ಸಾವು

ಕೆಸಿಆರ್ ಮತ್ತು ಅವರ ಸೋದರಳಿಯ ಮತ್ತು ಮಾಜಿ ಸಚಿವ ಟಿ ಹರೀಶ್ ರಾವ್ ನಂತರ ತೆಲಂಗಾಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರು, ಕಳೆದ ವರ್ಷ ಡಿಸೆಂಬರ್‌ನಲ್ಲಿ ಜಯಶಂಕರ್ ಭೂಪಾಲಪಲ್ಲಿಯ ಪ್ರಧಾನ ಜಿಲ್ಲಾ ಸೆಷನ್ಸ್ ನ್ಯಾಯಾಧೀಶರು ತಮ್ಮ ವಿರುದ್ಧ ಅರ್ಜಿ ಸಲ್ಲಿಸಲು ಅನುಮತಿ ನೀಡಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:31 am, Thu, 20 February 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ