ತೆಲಂಗಾಣ: ಹಿಂದೂ ದೇವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ವ್ಯಕ್ತಿಗೆ ಪೊಲೀಸ್ ವ್ಯಾನ್​​ನೊಳಗೆ ನುಗ್ಗಿ ಹಿಗ್ಗಾಮುಗ್ಗ ಥಳಿತ

ಘಟನೆಯ ವಿಡಿಯೊದಲ್ಲಿ ದಾಳಿಕೋರರು ಪೊಲೀಸ್ ವಾಹನವನ್ನು ಸುತ್ತುವರಿದು ನರೇಶ್ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ಕಾಣಬಹುದು. ಪೊಲೀಸರು ನೋಡು ನೋಡುತ್ತಿದ್ದಂತೆಯೇ ಬಂದೆರಗಿದ ಗುಂಪು ನರೇಶ್​​ನ್ನು ಎಳೆದು ಹಾಕಿ, ಹಿಗ್ಗಾ ಮುಗ್ಗ ಥಳಿಸಿ ಬಟ್ಟೆಯನ್ನು ಹರಿದು ಹಾಕಿದೆ.

ತೆಲಂಗಾಣ: ಹಿಂದೂ ದೇವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ವ್ಯಕ್ತಿಗೆ ಪೊಲೀಸ್ ವ್ಯಾನ್​​ನೊಳಗೆ ನುಗ್ಗಿ ಹಿಗ್ಗಾಮುಗ್ಗ ಥಳಿತ
ತೆಲಂಗಾಣ ಪೊಲೀಸ್
ರಶ್ಮಿ ಕಲ್ಲಕಟ್ಟ

Updated on: Feb 28, 2023 | 3:12 PM

ಹೈದರಾಬಾದ್: ಹಿಂದೂ ದೇವರು (Hindu gods) ಮತ್ತು ದೇವತೆಗಳ ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಕಳೆದ ವರ್ಷ ಬಂಧಿಸಲ್ಪಟ್ಟಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸ್ ವ್ಯಾನ್‌ನೊಳಗೆ ಥಳಿಸಿದ ಘಟನೆ ತೆಲಂಗಾಣದಲ್ಲಿ (Telangana) ನಡೆದಿದೆ. 42 ವರ್ಷದ ಬೈರಿ ನರೇಶ್ ಅವರು ಕಾನೂನು ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದಾಗ ಅವರನ್ನು ಥಳಿಸಲು ಗುಂಪು ಬರಬಹುದು ಎಂದು ಹೇಳಲಾಗಿತ್ತು. ದಾಳಿಯ ಭೀತಿಯಿಂದ ನರೇಶ್ ಪೊಲೀಸರಿಗೆ ಕರೆ ಮಾಡಿದ್ದಾರೆ. ಯಾವುದೇ ತೊಂದರೆಯಾಗದಂತೆ ಅವರನ್ನು ಕರೆದೊಯ್ಯಲು ಪೊಲೀಸರು ಬಂದಾಗ ಗುಂಪು ಬಂದು ಪೊಲೀಸ್ ವಾಹನದೊಳಗೆ ಥಳಿಸಿದೆ. ಪೊಲೀಸರು ಆತನನ್ನು ರಕ್ಷಿಸಲು ಪ್ರಯತ್ನಿಸಿದರು, ಆದರೆ ಗುಂಪು ನರೇಶ್​​ನ್ನು ಎಳೆದು ಹಾಕಿ ಹಲ್ಲೆ ನಡೆಸಿದೆ.

ಘಟನೆಯ ವಿಡಿಯೊದಲ್ಲಿ ದಾಳಿಕೋರರು ಪೊಲೀಸ್ ವಾಹನವನ್ನು ಸುತ್ತುವರಿದು ನರೇಶ್ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ಕಾಣಬಹುದು. ಪೊಲೀಸರು ನೋಡು ನೋಡುತ್ತಿದ್ದಂತೆಯೇ ಬಂದೆರಗಿದ ಗುಂಪು ನರೇಶ್​​ನ್ನು ಎಳೆದು ಹಾಕಿ, ಹಿಗ್ಗಾ ಮುಗ್ಗ ಥಳಿಸಿ ಬಟ್ಟೆಯನ್ನು ಹರಿದು ಹಾಕಿದೆ.

ತೆಲಂಗಾಣದ ಹನಮಕೊಂಡ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು ಬಲಪಂಥೀಯ ಸಂಘಟನೆಗಳು ಈ ಕೃತ್ಯವೆಸಗಿದೆ ಎಂದು ಹೇಳಲಾಗುತ್ತಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಎಲ್ಲಾ ದಾಳಿಕೋರರನ್ನು ಬಂಧಿಸಲಾಗಿದೆ ಎಂದು ವಾರಂಗಲ್ ಪೊಲೀಸ್ ಆಯುಕ್ತ ಎ ವಿ ರಂಗನಾಥ್ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಇದನ್ನೂ ಓದಿ:ತೆಲಂಗಾಣ ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣ; ಆರೋಪಿ ಸೈಫ್ ಅಥವಾ ಸತೀಶನೇ ಆಗಿರಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ: ಕೆಟಿ ರಾಮರಾವ್

ಹಿಂದೂ ದೇವರು ಅಯ್ಯಪ್ಪ ಸ್ವಾಮಿಯ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ನಾಸ್ತಿಕ ಸಂಘದ ನರೇಶ್ ಅವರನ್ನು ಡಿಸೆಂಬರ್ 31 ರಂದು ಬಂಧಿಸಲಾಯಿತು. ಆತನನ್ನು ಜೈಲಿಗೆ ಕರೆದೊಯ್ಯುತ್ತಿದ್ದಾಗ ಹಲ್ಲೆಗೆ ಯತ್ನ ನಡೆದಿದೆ. ಜೈಲಿನಲ್ಲಿದ್ದಾಗಲೂ ಅವರ ಹೇಳಿಕೆಗಳಿಂದ ಕೋಪಗೊಂಡ ಜನರು ತಮ್ಮ ಮೇಲೆ ಹಲ್ಲೆ ನಡೆಸಬಹುದೆಂಬ ಭಯವಿತ್ತು. ಆತನನ್ನು ಏಕಾಂತವಾಗಿ ಸೆರೆಮನೆಯಲ್ಲಿ ಇರಿಸಲಾಗಿದೆ ಎಂದು ಆತನ ಪತ್ನಿ ದೂರಿದ್ದು, ಜೈಲು ಅಧಿಕಾರಿಗಳು ಈ ಆರೋಪ ನಿರಾಕರಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:06 pm, Tue, 28 February 23

Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Follow Us