AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hyderabad Fire: ಹೈದರಾಬಾದ್‌ನ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ಅವಘಡ; ಅಗ್ನಿಶಾಮಕ ದಳ ದೌಡು

ಹೈದರಾಬಾದ್‌ನ ರಾಮ್‌ಗೋಪಾಲ್‌ಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಡವೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

Hyderabad Fire: ಹೈದರಾಬಾದ್‌ನ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ಅವಘಡ; ಅಗ್ನಿಶಾಮಕ ದಳ ದೌಡು
ತೆಲಂಗಾಣದಲ್ಲಿ ಕಟ್ಟಡಕ್ಕೆ ಬೆಂಕಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jan 19, 2023 | 4:23 PM

Share

ತೆಲಂಗಾಣ: ಹೈದರಾಬಾದ್‌ನ (Hyderabad) ರಾಮ್‌ಗೋಪಾಲ್‌ಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಐದು ಅಂತಸ್ತಿನ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ಅವಘಡ (Fire Accident) ಸಂಭವಿಸಿದೆ. ಅಗ್ನಿಶಾಮಕ ದಳ ಹಾಗೂ ಇತರ ಅಧಿಕಾರಿಗಳು ಬೆಂಕಿ ನಂದಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಅದೊಂದು ಕಮರ್ಷಿಯಲ್ ಕಾಂಪ್ಲೆಕ್ಸ್, ಒಳಗೆ ಸಾಕಷ್ಟು ಫ್ಯಾಬ್ರಿಕ್ ಮೆಟೀರಿಯಲ್ , ನೈಟ್ ವೇರ್ ಇತ್ತು. ಪೊಲೀಸ್ ಸಿಬ್ಬಂದಿ, ರಾಜ್ಯ ಅಗ್ನಿಶಾಮಕ ಇಲಾಖೆ, ಜಿಎಚ್‌ಎಂಸಿ ಅಧಿಕಾರಿಗಳು, ವಿಪತ್ತು ಸ್ಪಂದನಾ ಪಡೆ ಸಹ ಇಲ್ಲಿವೆ. ನಾವು ಈಗಾಗಲೇ ಸುತ್ತಮುತ್ತಲಿನ ಎಲ್ಲಾ ಕಟ್ಟಡಗಳನ್ನು ತೆರವು ಮಾಡಿದ್ದೇವೆ ಎಂದು ಹೆಚ್ಚುವರಿ ಸಿಪಿ (ಕಾನೂನು ಮತ್ತು ಸುವ್ಯವಸ್ಥೆ)  ವಿಕ್ರಮ್ ಸಿಂಗ್ ಮಾನ್  ಹೇಳಿದ್ದಾರೆ.

ಸೆಂಟ್ರಲ್  ವಲಯದ ಡಿಸಿಪಿ ಪ್ರಕಾರ, ಐದು ಅಂತಸ್ತಿನ ಕಟ್ಟಡದ ನೆಲ ಮಹಡಿ ಮತ್ತು ಮೊದಲ ಮಹಡಿಯಲ್ಲಿ ಬೆಳಿಗ್ಗೆ 11:30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ನೆಲ ಮತ್ತು ಮೊದಲ ಮಹಡಿಯಲ್ಲಿ ಸ್ಪೋರ್ಟ್ಸ್ ವೇರ್ ಫ್ಯಾಬ್ರಿಕ್ ಶೋರೂಮ್ ಇತ್ತು.

ಘಟನೆಯ ವಿಡಿಯೊವು ಕಟ್ಟಡದಿಂದ ಕಪ್ಪು ಹೊಗೆ ಬರುತ್ತಿರುವುದನ್ನು ತೋರಿಸುತ್ತಿಗ್ಗು ಪೊಲೀಸ್ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳದವರು ಸ್ಥಳದಲ್ಲಿದ್ದು  ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಈವರೆಗೆ ನಾಲ್ವರನ್ನು ರಕ್ಷಿಸಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ. “ಮಾಲೀಕರ ಪ್ರಕಾರ, ಕೇವಲ ನಾಲ್ಕು ಜನರು ಸಿಕ್ಕಿಬಿದ್ದಿದ್ದಾರೆ. ಯಾರಾದರೂ ಒಳಗೆ ಉಳಿದಿದ್ದಾರೆಯೇ ಎಂದು ಪರಿಶೀಲಿಸಲು ಪ್ರಯತ್ನಿಸುತ್ತಿದ್ದೇವೆ. ಸದ್ಯಕ್ಕೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಡಿಸಿಪಿ ತಿಳಿಸಿದ್ದಾರೆ.

ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:04 pm, Thu, 19 January 23

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!