AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣ; ಆರೋಪಿ ಸೈಫ್ ಅಥವಾ ಸತೀಶನೇ ಆಗಿರಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ: ಕೆಟಿ ರಾಮರಾವ್

ಕಾಕತೀಯ ಮೆಡಿಕಲ್ ಕಾಲೇಜಿನಲ್ಲಿ(Kakatiya Medical College) ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿಯಾಗಿರುವ ಡಿ ಪ್ರೀತಿ, ಸೀನಿಯರ್ ವಿದ್ಯಾರ್ಥಿಯಿಂದ ಕಿರುಕುಳ ಅನುಭವಿಸಿದ ನಂತರ ಸ್ವಯಂ ಚುಚ್ಚುಮದ್ದು ಚುಚ್ಚಿಸಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ತೆಲಂಗಾಣ ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣ; ಆರೋಪಿ ಸೈಫ್ ಅಥವಾ ಸತೀಶನೇ ಆಗಿರಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ: ಕೆಟಿ ರಾಮರಾವ್
ಕೆಟಿ ರಾಮರಾವ್
Follow us
ರಶ್ಮಿ ಕಲ್ಲಕಟ್ಟ
|

Updated on: Feb 28, 2023 | 1:04 PM

ಹೈದರಾಬಾದ್: ಸೀನಿಯರ್ ವಿದ್ಯಾರ್ಥಿ ರ‍್ಯಾಗಿಂಗ್​ ಮಾಡಿದ್ದಕ್ಕೆ ಹೈದರಾಬಾದಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು(medical student) ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ತೆಲಂಗಾಣ ಸಚಿವ ಕೆಟಿ ರಾಮರಾವ್ (KT Rama Rao) ಭರವಸೆ ನೀಡಿದ್ದಾರೆ. ಕಾಕತೀಯ ಮೆಡಿಕಲ್ ಕಾಲೇಜಿನಲ್ಲಿ(Kakatiya Medical College) ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿಯಾಗಿರುವ ಡಿ ಪ್ರೀತಿ, ಸೀನಿಯರ್ ವಿದ್ಯಾರ್ಥಿಯಿಂದ ಕಿರುಕುಳ ಅನುಭವಿಸಿದ ನಂತರ ಸ್ವಯಂ ಚುಚ್ಚುಮದ್ದು ಚುಚ್ಚಿಸಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರೀತಿಯ ಅಪ್ಪನ ದೂರಿನ ಮೇರೆಗೆ, ಎರಡನೇ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿ ಮೊಹಮ್ಮದ್ ಅಲಿ ಸೈಫ್ ವಿರುದ್ಧ ರ‍್ಯಾಗಿಂಗ್​, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಆತ್ಮಹತ್ಯೆಗೆ ಪ್ರಚೋದನೆ ಮತ್ತು ಕಿರುಕುಳದ ಆರೋಪದ ಮೇಲೆ ಬಂಧಿಸಿದ್ದಾರೆ.

ಇದನ್ನೂ ಓದಿ:ಕಾಶ್ಮೀರಿ ಪಂಡಿತರನ್ನು ಹತ್ಯೆಗೈದ ಉಗ್ರನನ್ನು ಸದೆಬಡಿದ ಭದ್ರತಾ ಪಡೆ

ಹನಮಕೊಂಡ ಜಿಲ್ಲೆಯಲ್ಲಿ ಸಾರ್ವಜನಿಕ ಭಾಷಣದಲ್ಲಿ ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣ ಉಲ್ಲೇಖಿಸಿದ ರಾವ್, ಘಟನೆಗೆ ಕಾರಣರಾದ ಯಾರೇ ಆದರೂ ಅವರ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ. ಸೈಫ್ ಆಗಲಿ, ಸತೀಶ್ ಆಗಲಿ ಅದಕ್ಕೆ ಕಾರಣರಾದವರನ್ನು ಬಿಡುವುದಿಲ್ಲ ಎಂದು ರಾವ್ ಹೇಳಿದ್ದಾರೆ.

ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ತೆಲಂಗಾಣ ಸರ್ಕಾರವು ವಿದ್ಯಾರ್ಥಿನಿಯ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಹಾಗೂ ರಾಜ್ಯ ಸಚಿವರಿಂದ 20 ಲಕ್ಷ ರೂಪಾಯಿಗಳ ಹೆಚ್ಚುವರಿ ಪರಿಹಾರವನ್ನು ಘೋಷಿಸಿದೆ.

ಸಂತ್ರಸ್ತೆಯ ತಂದೆ ಡಿ.ನರೇಂದ್ರ ಮಾತನಾಡಿ, ಸರ್ಕಾರ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದರೆ, ರಾಜ್ಯ ಪಂಚಾಯತ್ ರಾಜ್ ಸಚಿವ ಇ.ದಯಾಕರ್ ರಾವ್ 20 ಲಕ್ಷ ರೂ. ಕುಟುಂಬದ ಒಬ್ಬರಿಗೆ ಪಂಚಾಯತ್ ರಾಜ್ ಇಲಾಖೆಯಲ್ಲಿ ಸರ್ಕಾರಿ ನೌಕರಿ ನೀಡುವುದಾಗಿ ಸಚಿವರು ಭರವಸೆ ನೀಡಿದ್ದಾರೆ  ಎಂದು ತಿಳಿಸಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?