AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬಾರಿ ಕೊಡುಗೆ -ವಿಡಿಯೋ ನೋಡಿ: ಸಚಿವ ಕೆಟಿಆರ್ ಹುಟ್ಟುಹಬ್ಬಕ್ಕೆ ಟೊಮೇಟೊ ವಿತರಿಸಿದ ಬಿಆರ್​ಎಸ್ ನಾಯಕ

ತೆಲಂಗಾಣ ಐಟಿ ಸಚಿವ ಕೆ.ಟಿ. ರಾಮರಾವ್ ಅವರ ಹುಟ್ಟುಹಬ್ಬದ ಅಂಗವಾಗಿ ಬಿಆರ್​ಎಸ್ ಮುಖಂಡ ರಾಜನಾಲ ಶ್ರೀಹರಿ ಅವರು 300 ಮಂದಿಗೆ ತಲಾ 2 ಕೆಜಿ ಟೊಮೆಟೊ ವಿತರಿಸಿದರು. ಕಳೆದ ವರ್ಷ ದಸರಾ ವೇಳೆ ಶ್ರೀಹರಿ ಕೋಳಿ ಮತ್ತು ಮದ್ಯವನ್ನು ಜನರಿಗೆ ದಾನ ಮಾಡಿದ್ದರು.

ದುಬಾರಿ ಕೊಡುಗೆ -ವಿಡಿಯೋ ನೋಡಿ: ಸಚಿವ ಕೆಟಿಆರ್ ಹುಟ್ಟುಹಬ್ಬಕ್ಕೆ ಟೊಮೇಟೊ ವಿತರಿಸಿದ ಬಿಆರ್​ಎಸ್ ನಾಯಕ
ಸಚಿವ ಕೆಟಿಆರ್ ಹುಟ್ಟುಹಬ್ಬಕ್ಕೆ ಟೊಮೇಟೊ ವಿತರಿಸಿದ ಬಿಆರ್​ಎಸ್ ನಾಯಕ
Follow us
ಸಾಧು ಶ್ರೀನಾಥ್​
|

Updated on: Jul 24, 2023 | 6:09 PM

ವಾರಂಗಲ್, ಜುಲೈ 24: ಬಿಆರ್‌ಎಸ್ ಕಾರ್ಯಾಧ್ಯಕ್ಷ ಹಾಗೂ ತೆಲಂಗಾಣ ಸಚಿವ ಕೆ.ಟಿ. ರಾಮರಾವ್ (KT Rama Rao) ಅವರ 47ನೇ ಹುಟ್ಟುಹಬ್ಬದ ಅಂಗವಾಗಿ ಬಿಆರ್‌ಎಸ್ ಮುಖಂಡ ರಾಜನಾಲ ಶ್ರೀಹರಿ (BRS leader Rajanala Srihari) ಜನರಿಗೆ ಟೊಮೆಟೊ (tomatoes) ವಿತರಿಸಿದರು. ಸೋಮವಾರ ಶ್ರೀಹರಿ 300 ಕ್ಕೂ ಹೆಚ್ಚು ಜನರಿಗೆ ತಲಾ 2 ಕೆಜಿ ಟೊಮ್ಯಾಟೊ ನೀಡಿದರು, ಅವರಲ್ಲಿ ಹೆಚ್ಚಿನವರು ಮಹಿಳೆಯರಾಗಿದ್ದರು. ನೂರಾರು ಮಹಿಳೆಯರು (women) ವಾರಂಗಲ್ (Warangal) ಚೌಕದ ಬಳಿ ಟೊಮೆಟೊ ಸಂಗ್ರಹಿಸಲು ಸರತಿ ಸಾಲಿನಲ್ಲಿ ನಿಂತಿದ್ದರು.

ಕೆಟಿಆರ್ ಅವರ 47ನೇ ಹುಟ್ಟುಹಬ್ಬದಂದು ಸುಮಾರು 300 ಮಂದಿಗೆ ತಲಾ ಎರಡು ಕೆಜಿ ಟೊಮೇಟೊ ವಿತರಿಸಿದ್ದೇನೆ. ಕೆಟಿಆರ್ ಅವರ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸುವುದು ನನಗೆ ಇಷ್ಟವಿಲ್ಲ ಎಂದು ಕೆಟಿಆರ್ ಹೇಳಿದ್ದರು. ಬಡವರಿಗೆ ಸಹಾಯವಾಗುವ ರೀತಿಯಲ್ಲಿ ಅವರ ಹುಟ್ಟುಹಬ್ಬವನ್ನು ಆಚರಿಸಬೇಕೆಂದು ಕೆಟಿಆರ್ ಬಯಸುತ್ತಾರೆ, ಅದಕ್ಕಾಗಿಯೇ ನಾನು ಟೊಮೇಟೊ ವಿತರಿಸುತ್ತಿದ್ದೇನೆ ಎಂದು ಶ್ರೀಹರಿ ಹೇಳಿದರು.

ಆಂಧ್ರಪ್ರದೇಶದ ಕ್ರೀಡಾ ಪ್ರಾಧಿಕಾರದ (ಎಸ್‌ಎಪಿ) ಮಾಜಿ ಅಧ್ಯಕ್ಷ ಶ್ರೀಹರಿ ಅವರು ಕಳೆದ ದಸರಾ ಸಂದರ್ಭದಲ್ಲಿ ಜನರಿಗೆ ಕೋಳಿ ಮತ್ತು ಮದ್ಯವನ್ನು ವಿತರಿಸುವ ಮೂಲಕ ಸುದ್ದಿಯಾಗಿದ್ದರು. ರಾಮರಾವ್ ಅವರು ತಮ್ಮ ಹುಟ್ಟುಹಬ್ಬವನ್ನು ಆಚರಿಸಲು ಹಣ ವ್ಯರ್ಥ ಮಾಡುವ ಬದಲು ಅನಾಥರಿಗೆ ಸಹಾಯ ಮಾಡಲು ಬಿಆರ್‌ಎಸ್ ಪಕ್ಷದ ಕಾರ್ಯಕರ್ತರಿಗೆ ವಿನಂತಿಸಿದರು. 94 ಅನಾಥ ಮಕ್ಕಳಿಗೆ ಲ್ಯಾಪ್ ಟಾಪ್ ವಿತರಿಸಿ ಅವರ ವಿದ್ಯಾಭ್ಯಾಸದ ಬಗ್ಗೆ ಕಾಳಜಿ ವಹಿಸುವುದಾಗಿ ಭರವಸೆ ನೀಡಿದರು.

ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!