AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿ ಕೇಂದ್ರ ಸರ್ಕಾರದ ಸಹಕಾರ ಕೋರಿದ ತೆಲಂಗಾಣ ಸಚಿವ ಕೆಟಿಆರ್

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿದ ತೆಲಂಗಾಣ ಸಚಿವ ಕೆಟಿ ರಾಮರಾವ್, ಹೈದರಾಬಾದ್ ನಗರದ ಮೂಲಸೌಕರ್ಯ ಕಲ್ಪಿಸಲು ಸಹಕರಿಸುವಂತೆ 9 ವರ್ಷಗಳಿಂದ ಕೇಳುತ್ತಿದ್ದೇವೆ. ಇಲ್ಲಿಯವರೆಗೆ ಕೇಂದ್ರದಿಂದ ಯಾವುದೇ ಸಹಾಯ ಬಂದಿಲ್ಲ ಎಂದಿದ್ದಾರೆ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿ ಕೇಂದ್ರ ಸರ್ಕಾರದ ಸಹಕಾರ ಕೋರಿದ ತೆಲಂಗಾಣ ಸಚಿವ ಕೆಟಿಆರ್
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿದ ಕೆಟಿಆರ್
ರಶ್ಮಿ ಕಲ್ಲಕಟ್ಟ
|

Updated on:Jun 23, 2023 | 3:34 PM

Share

ತೆಲಂಗಾಣ ಸಚಿವ ಕೆಟಿ ರಾಮರಾವ್ (KT Rama Rao) ಶುಕ್ರವಾರ ಬೆಳಗ್ಗೆ ನವದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ( Defence Minister Rajnath Singh) ಅವರನ್ನು ಭೇಟಿ ಮಾಡಿ ಅಭಿವೃದ್ಧಿ ಯೋಜನೆಗಳ ಕುರಿತು ಕೇಂದ್ರದಿಂದ ಸಹಕಾರ ಕೋರಿದರು. ದೆಹಲಿಯಲ್ಲಿ ನಡೆದ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಟಿಆರ್, ತೆಲಂಗಾಣ (Telangana) ಅಭಿವೃದ್ಧಿ ಪಥದಲ್ಲಿದೆ ಎಂದು ಕೇಂದ್ರ ಸರ್ಕಾರವೇ ಹೇಳುತ್ತಿದೆ.

ಹೈದರಾಬಾದ್ ನಗರದ ಮೂಲಸೌಕರ್ಯ ಕಲ್ಪಿಸಲು ಸಹಕರಿಸುವಂತೆ 9 ವರ್ಷಗಳಿಂದ ಕೇಳುತ್ತಿದ್ದೇವೆ. ಇಲ್ಲಿಯವರೆಗೆ ಕೇಂದ್ರದಿಂದ ಯಾವುದೇ ಸಹಾಯ ಬಂದಿಲ್ಲ. ಸಿಕಂದರಾಬಾದ್ ಜುಬಿಲಿ ಬಸ್ ನಿಲ್ದಾಣದಿಂದ ರಾಜೀವ್ ರಸ್ತೆಗೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಸ್ಕೈವೇ ನಿರ್ಮಿಸಲು ರಕ್ಷಣಾ ಇಲಾಖೆಯಿಂದ ಅನುಮತಿ ಕೋರುತ್ತಿದ್ದೇವೆ.

ಇದಕ್ಕಾಗಿ ನಾವು ಇಂದು ರಕ್ಷಣಾ ಇಲಾಖೆಗೆ 96 ಎಕರೆ ರಕ್ಷಣಾ ಭೂಮಿ (ಕಂಟೋನ್ಮೆಂಟ್ ಭೂಮಿ) ಮತ್ತು ಪಾಟ್ನಿ ಸೆಂಟರ್‌ನಿಂದ ನಿರ್ಮಿಸಲಿರುವ ಸ್ಕೈವೇಗಾಗಿ 56 ಎಕರೆಗಳನ್ನು ಕೇಳಿದ್ದೇವೆ ಎಂದು ಹೇಳಿದ್ದಾರೆ.

ರಕ್ಷಣಾ ಇಲಾಖೆ ನೀಡಿದ ಜಾಗಕ್ಕೆ ಸಮನಾಗಿ ಬೇರೆಡೆ ಜಾಗ ನೀಡುತ್ತೇವೆ ಎಂದು ಹೇಳಿದ್ದೇವೆ. ಮೆಹದಿಪಟ್ನಂನಲ್ಲಿ ರಕ್ಷಣಾ ಇಲಾಖೆಯಿಂದ ಒಂದೂವರೆ ಎಕರೆ ಜಮೀನು ಕೂಡ ಅಗತ್ಯವಿದೆ. ನಾವು 142 ಸಂಪರ್ಕ ರಸ್ತೆಗಳನ್ನು ಯೋಜಿಸಿದ್ದೇವೆ.

ಇದನ್ನೂ ಓದಿ: ಫಲ ಕೊಡದ ದೆಹಲಿ ಭೇಟಿ: ಅಕ್ಕಿ ಕೊಡಲು ಕೇಂದ್ರ ಸಚಿವ ಪಿಯೂಷ್ ಗೋಯಲ್ ನಿರಾಕರಣೆ, ಮುನಿಯಪ್ಪ ಅಸಮಾಧಾನ

ಒಂದೋ ಎರಡೋ ಕಡೆ ರಕ್ಷಣಾ ಇಲಾಖೆಯ ಜಮೀನುಗಳು ಅಡ್ಡಿಯಾಗುತ್ತಿವೆ. ಅವುಗಳನ್ನು ತೆರವುಗೊಳಿಸಿ ಸಹಕರಿಸುವಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಲ್ಲಿ ಮನವಿ ಮಾಡಿರುವುದಾಗಿ ಕೆಟಿಆರ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:33 pm, Fri, 23 June 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ