AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿ ಕೇಂದ್ರ ಸರ್ಕಾರದ ಸಹಕಾರ ಕೋರಿದ ತೆಲಂಗಾಣ ಸಚಿವ ಕೆಟಿಆರ್

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿದ ತೆಲಂಗಾಣ ಸಚಿವ ಕೆಟಿ ರಾಮರಾವ್, ಹೈದರಾಬಾದ್ ನಗರದ ಮೂಲಸೌಕರ್ಯ ಕಲ್ಪಿಸಲು ಸಹಕರಿಸುವಂತೆ 9 ವರ್ಷಗಳಿಂದ ಕೇಳುತ್ತಿದ್ದೇವೆ. ಇಲ್ಲಿಯವರೆಗೆ ಕೇಂದ್ರದಿಂದ ಯಾವುದೇ ಸಹಾಯ ಬಂದಿಲ್ಲ ಎಂದಿದ್ದಾರೆ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿ ಕೇಂದ್ರ ಸರ್ಕಾರದ ಸಹಕಾರ ಕೋರಿದ ತೆಲಂಗಾಣ ಸಚಿವ ಕೆಟಿಆರ್
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿದ ಕೆಟಿಆರ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jun 23, 2023 | 3:34 PM

Share

ತೆಲಂಗಾಣ ಸಚಿವ ಕೆಟಿ ರಾಮರಾವ್ (KT Rama Rao) ಶುಕ್ರವಾರ ಬೆಳಗ್ಗೆ ನವದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ( Defence Minister Rajnath Singh) ಅವರನ್ನು ಭೇಟಿ ಮಾಡಿ ಅಭಿವೃದ್ಧಿ ಯೋಜನೆಗಳ ಕುರಿತು ಕೇಂದ್ರದಿಂದ ಸಹಕಾರ ಕೋರಿದರು. ದೆಹಲಿಯಲ್ಲಿ ನಡೆದ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಟಿಆರ್, ತೆಲಂಗಾಣ (Telangana) ಅಭಿವೃದ್ಧಿ ಪಥದಲ್ಲಿದೆ ಎಂದು ಕೇಂದ್ರ ಸರ್ಕಾರವೇ ಹೇಳುತ್ತಿದೆ.

ಹೈದರಾಬಾದ್ ನಗರದ ಮೂಲಸೌಕರ್ಯ ಕಲ್ಪಿಸಲು ಸಹಕರಿಸುವಂತೆ 9 ವರ್ಷಗಳಿಂದ ಕೇಳುತ್ತಿದ್ದೇವೆ. ಇಲ್ಲಿಯವರೆಗೆ ಕೇಂದ್ರದಿಂದ ಯಾವುದೇ ಸಹಾಯ ಬಂದಿಲ್ಲ. ಸಿಕಂದರಾಬಾದ್ ಜುಬಿಲಿ ಬಸ್ ನಿಲ್ದಾಣದಿಂದ ರಾಜೀವ್ ರಸ್ತೆಗೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಸ್ಕೈವೇ ನಿರ್ಮಿಸಲು ರಕ್ಷಣಾ ಇಲಾಖೆಯಿಂದ ಅನುಮತಿ ಕೋರುತ್ತಿದ್ದೇವೆ.

ಇದಕ್ಕಾಗಿ ನಾವು ಇಂದು ರಕ್ಷಣಾ ಇಲಾಖೆಗೆ 96 ಎಕರೆ ರಕ್ಷಣಾ ಭೂಮಿ (ಕಂಟೋನ್ಮೆಂಟ್ ಭೂಮಿ) ಮತ್ತು ಪಾಟ್ನಿ ಸೆಂಟರ್‌ನಿಂದ ನಿರ್ಮಿಸಲಿರುವ ಸ್ಕೈವೇಗಾಗಿ 56 ಎಕರೆಗಳನ್ನು ಕೇಳಿದ್ದೇವೆ ಎಂದು ಹೇಳಿದ್ದಾರೆ.

ರಕ್ಷಣಾ ಇಲಾಖೆ ನೀಡಿದ ಜಾಗಕ್ಕೆ ಸಮನಾಗಿ ಬೇರೆಡೆ ಜಾಗ ನೀಡುತ್ತೇವೆ ಎಂದು ಹೇಳಿದ್ದೇವೆ. ಮೆಹದಿಪಟ್ನಂನಲ್ಲಿ ರಕ್ಷಣಾ ಇಲಾಖೆಯಿಂದ ಒಂದೂವರೆ ಎಕರೆ ಜಮೀನು ಕೂಡ ಅಗತ್ಯವಿದೆ. ನಾವು 142 ಸಂಪರ್ಕ ರಸ್ತೆಗಳನ್ನು ಯೋಜಿಸಿದ್ದೇವೆ.

ಇದನ್ನೂ ಓದಿ: ಫಲ ಕೊಡದ ದೆಹಲಿ ಭೇಟಿ: ಅಕ್ಕಿ ಕೊಡಲು ಕೇಂದ್ರ ಸಚಿವ ಪಿಯೂಷ್ ಗೋಯಲ್ ನಿರಾಕರಣೆ, ಮುನಿಯಪ್ಪ ಅಸಮಾಧಾನ

ಒಂದೋ ಎರಡೋ ಕಡೆ ರಕ್ಷಣಾ ಇಲಾಖೆಯ ಜಮೀನುಗಳು ಅಡ್ಡಿಯಾಗುತ್ತಿವೆ. ಅವುಗಳನ್ನು ತೆರವುಗೊಳಿಸಿ ಸಹಕರಿಸುವಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಲ್ಲಿ ಮನವಿ ಮಾಡಿರುವುದಾಗಿ ಕೆಟಿಆರ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:33 pm, Fri, 23 June 23

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಕಾಕ್ರೂಚ್’ಗಳ ಪ್ರತಿಭಟನೆಗೆ ನಟ ಪ್ರಕಾಶ್ ರೈ ಸಾಥ್: ವಿಡಿಯೋ
‘ಕಾಕ್ರೂಚ್’ಗಳ ಪ್ರತಿಭಟನೆಗೆ ನಟ ಪ್ರಕಾಶ್ ರೈ ಸಾಥ್: ವಿಡಿಯೋ
ರಸ್ತೆ ಬದಿ ಅಂಗಡಿಯಲ್ಲಿ 1 ಟೀ ಕುಡಿದು 2 ಸಾವಿರ ರೂ. ಕೊಟ್ಟ DCM ಪರಮೇಶ್ವರ್
ರಸ್ತೆ ಬದಿ ಅಂಗಡಿಯಲ್ಲಿ 1 ಟೀ ಕುಡಿದು 2 ಸಾವಿರ ರೂ. ಕೊಟ್ಟ DCM ಪರಮೇಶ್ವರ್
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!
ಗೃಹಲಕ್ಷ್ಮಿ ಅಲ್ಲ ಚುನಾವಣಾ ಲಕ್ಷ್ಮೀ: ವಿಜಯೇಂದ್ರ ವ್ಯಂಗ್ಯ
ಗೃಹಲಕ್ಷ್ಮಿ ಅಲ್ಲ ಚುನಾವಣಾ ಲಕ್ಷ್ಮೀ: ವಿಜಯೇಂದ್ರ ವ್ಯಂಗ್ಯ