AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯಕೀಯ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಯಿಂದ ಕಿರುಕುಳ, ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

 ಹಿರಿಯ ವಿದ್ಯಾರ್ಥಿಯ ಕಿರುಕುಳದಿಂದ ಬೇಸತ್ತು, ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತೆಲಂಗಾಣದ ವಾರಂಗಲ್ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ.

ವೈದ್ಯಕೀಯ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಯಿಂದ ಕಿರುಕುಳ, ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
ತೆಲಂಗಾಣ ಪೊಲೀಸ್Image Credit source: NDTV
ನಯನಾ ರಾಜೀವ್
|

Updated on: Feb 23, 2023 | 7:54 AM

Share

ಹಿರಿಯ ವಿದ್ಯಾರ್ಥಿಯ ಕಿರುಕುಳದಿಂದ ಬೇಸತ್ತು, ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತೆಲಂಗಾಣದ ವಾರಂಗಲ್ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ. ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿದ್ಯಾರ್ಥಿನಿಯನ್ನು ಸಿಬ್ಬಂದಿ ಮತ್ತು ವೈದ್ಯರು ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡು ಅಲ್ಲಿಯೇ ಪ್ರಾಥಮಿಕ ಚಿಕಿತ್ಸೆ ನೀಡಿದ್ದು, ಮೌಖಿಕವಾಗಿ ಅಥವಾ ಇಂಟ್ರಾವೆನಸ್ ಮೂಲಕ ಯಾವುದೋ ಔಷಧ ನೀಡಿ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

ಆಕೆಯ ಆರೋಗ್ಯ ಸ್ಥಿತಿ ಗಂಭೀರವಾದ ಕಾರಣ ಆಕೆಯನ್ನು ಹೈದರಾಬಾದ್‌ನ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈಗ ಆಕೆಯ ಸ್ಥಿತಿ ಸುಧಾರಿಸುತ್ತಿದೆ ಎಂದು ಅವರು ಹೇಳಿದ್ದಾರೆ. ಹಿರಿಯ ವಿದ್ಯಾರ್ಥಿಯೊಬ್ಬ ತನ್ನ ಮಗಳಿಗೆ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ವಿದ್ಯಾರ್ಥಿನಿಯ ತಂದೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ವಾರಂಗಲ್ ಪೊಲೀಸ್ ಆಯುಕ್ತ ಎ.ವಿ.ರಂಗನಾಥ್ ದೂರವಾಣಿ ಮೂಲಕ ಪಿಟಿಐಗೆ ತಿಳಿಸಿದ್ದಾರೆ.

ವಿದ್ಯಾರ್ಥಿನಿ ವೈದ್ಯಕೀಯ ಕಾಲೇಜಿನ ಅನಸ್ತೇಷಿಯಾ ವಿಭಾಗದ ಎರಡನೇ ವರ್ಷದ (ಎಂಡಿ) ವಿದ್ಯಾರ್ಥಿನಿ, ವೈದ್ಯರು ಕೂಡ ಆಕೆಗೆ ಬೇಡದ ಕಾಮೆಂಟ್​ಗಳನ್ನು ಮಾಡುತ್ತಿದ್ದರು ಎನ್ನಲಾಗಿದೆ. ಇನ್‌ಸ್ಟಂಟ್ ಮೆಸೇಜಿಂಗ್ ಪ್ಲಾಟ್‌ಫಾರ್ಮ್‌ನ ಆನ್‌ಲೈನ್ ಗ್ರೂಪ್‌ಗಳಲ್ಲಿ ವಿದ್ಯಾರ್ಥಿನಿ ವಿರುದ್ಧ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಿದ್ದಾನೆ ಮತ್ತು ಕಿರುಕುಳವನ್ನು ತಾಳಲಾರದೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲು ಸಮಿತಿಯನ್ನು ರಚಿಸಲಾಗಿದೆ ಎಂದು ವೈದ್ಯಕೀಯ ಕಾಲೇಜು ಅಧಿಕಾರಿಗಳು ತಿಳಿಸಿದ್ದಾರೆ.

ನಾವು ಇದನ್ನು ಆತ್ಮಹತ್ಯೆ ಯತ್ನ ಎಂದು ಭಾವಿಸುತ್ತೇವೆ ಮತ್ತು ಹೆಚ್ಚಿನ ತನಿಖೆಯ ಆಧಾರದ ಮೇಲೆ ನಿಖರವಾದ ಕಾರಣಗಳು ತಿಳಿಯಲ್ಪಡುತ್ತವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಆಕೆ ಚೇತರಿಸಿಕೊಂಡ ನಂತರ, ಪೊಲೀಸರು ಹೆಚ್ಚಿನ ವಿವರಗಳನ್ನು ಪಡೆಯುತ್ತಾರೆ ಮತ್ತು ಮುಂದಿನ ಕ್ರಮದ ಯೋಜನೆ ಅದರ ಮೇಲೆ ಅವಲಂಬಿತವಾಗಿರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್