AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ ಫೋನ್ ಕದ್ದಾಲಿಕೆ ಪ್ರಕರಣ: ರಾಜ್ಯ ಗುಪ್ತಚರ ವಿಭಾಗದ ಮಾಜಿ ಮುಖ್ಯಸ್ಥ ಆರೋಪಿ ನಂ 1

ತೆಲಂಗಾಣ ಪೊಲೀಸರ ಪ್ರಕಾರ, ಬಂಧಿತ ಎಎಸ್ಪಿಗಳಿಬ್ಬರೂ ಅಮಾನತುಗೊಂಡಿರುವ ರಾಜ್ಯ ಗುಪ್ತಚರ ಬ್ಯೂರೋ (ಎಸ್‌ಐಬಿ) ಉಪ ಪೊಲೀಸ್ ಅಧೀಕ್ಷಕ (ಡಿಎಸ್‌ಪಿ) ಡಿ ಪ್ರಣೀತ್ ರಾವ್ ಅವರೊಂದಿಗೆ ಸಹಕರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಹಿಂದಿನ ಬಿಆರ್‌ಎಸ್ ಸರ್ಕಾರದ ಅವಧಿಯಲ್ಲಿ ವಿವಿಧ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳಿಂದ ಗುಪ್ತಚರ ಮಾಹಿತಿಯನ್ನು ಅಳಿಸಿಹಾಕಿದ್ದಕ್ಕಾಗಿ ಹಾಗೂ ಫೋನ್ ಕದ್ದಾಲಿಕೆ ಆರೋಪದ ಮೇಲೆ ರಾವ್ ಅವರನ್ನು ಈ ಹಿಂದೆ ಬಂಧಿಸಲಾಗಿತ್ತು.

ತೆಲಂಗಾಣ ಫೋನ್ ಕದ್ದಾಲಿಕೆ ಪ್ರಕರಣ: ರಾಜ್ಯ ಗುಪ್ತಚರ ವಿಭಾಗದ ಮಾಜಿ ಮುಖ್ಯಸ್ಥ ಆರೋಪಿ ನಂ 1
ಟಿ ಪ್ರಭಾಕರ್ ರಾವ್
ರಶ್ಮಿ ಕಲ್ಲಕಟ್ಟ
|

Updated on:Mar 25, 2024 | 9:00 PM

Share

ಹೈದರಾಬಾದ್ ಮಾರ್ಚ್ 25: ತೆಲಂಗಾಣವನ್ನು (Telangana) ಬೆಚ್ಚಿಬೀಳಿಸಿದ ಫೋನ್ ಕದ್ದಾಲಿಕೆ ಪ್ರಕರಣಕ್ಕೆ ( phone tapping case) ಸಂಬಂಧಿಸಿದಂತೆ ಹೈದರಾಬಾದ್ ಪೊಲೀಸರು ಇಬ್ಬರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳನ್ನು (ASP) ಬಂಧಿಸಿದ್ದಾರೆ. ತನಿಖೆಯ ವೇಳೆ ಹಾಜರಾಗದ ಮತ್ತು ಅಸಹಕಾರ ಆರೋಪದ ಮೇಲೆ ರಾಜ್ಯ ಗುಪ್ತಚರ ವಿಭಾಗದ ಮಾಜಿ ಮುಖ್ಯಸ್ಥ ಟಿ ಪ್ರಭಾಕರ್ ರಾವ್ ಮತ್ತು ಇತರ ಇಬ್ಬರ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಎನ್‌ಡಿಟಿವಿ ವರದಿಯ ಪ್ರಕಾರ, ಯುಎಸ್‌ನಲ್ಲಿದ್ದಾರೆ ಎಂದು ನಂಬಲಾದ ರಾವ್ ಅವರನ್ನು ಪ್ರಕರಣದಲ್ಲಿ ಆರೋಪಿ ನಂ.1 ಎಂದು ಹೆಸರಿಸಲಾಗಿದೆ.

ವರದಿಯ ಪ್ರಕಾರ, ಬಂಧಿತರಾದ ಹೆಚ್ಚುವರಿ ಪೊಲೀಸ್ ಉಪ ಆಯುಕ್ತ (ಡಿಸಿಪಿ) ತಿರುಪತಣ್ಣ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎನ್ ಭುಜಂಗ ರಾವ್ ಅವರು ಕ್ರಮವಾಗಿ ವಿಶೇಷ ಗುಪ್ತಚರ ಬ್ಯೂರೋ (ಎಸ್‌ಐಬಿ) ಮತ್ತು ಗುಪ್ತಚರ ಇಲಾಖೆಯಲ್ಲಿ ಎಎಸ್‌ಪಿಗಳಾಗಿ ಕಾರ್ಯನಿರ್ವಹಿಸಿದ್ದಾರೆ. ಅವರನ್ನು ಭಾನುವಾರ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಕಮಿಷನರ್ ಕಾರ್ಯಪಡೆಯ (ಹೈದರಾಬಾದ್ ಪೊಲೀಸ್ ವಿಭಾಗ) ಆಗಿನ ಪೊಲೀಸ್ ಉಪ ಆಯುಕ್ತ ಪಿ ರಾಧಾಕೃಷ್ಣ ಮತ್ತು ತೆಲುಗು ಟಿವಿ ಚಾನೆಲ್‌ನ ಹಿರಿಯ ಕಾರ್ಯನಿರ್ವಾಹಕರ ವಿರುದ್ಧವೂ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿದೆ.

ಏನಿದು ತೆಲಂಗಾಣ ಫೋನ್ ಕದ್ದಾಲಿಕೆ ಪ್ರಕರಣ?

ತೆಲಂಗಾಣ ಪೊಲೀಸರ ಪ್ರಕಾರ, ಬಂಧಿತ ಎಎಸ್ಪಿಗಳಿಬ್ಬರೂ ಅಮಾನತುಗೊಂಡಿರುವ ರಾಜ್ಯ ಗುಪ್ತಚರ ಬ್ಯೂರೋ (ಎಸ್‌ಐಬಿ) ಉಪ ಪೊಲೀಸ್ ಅಧೀಕ್ಷಕ (ಡಿಎಸ್‌ಪಿ) ಡಿ ಪ್ರಣೀತ್ ರಾವ್ ಅವರೊಂದಿಗೆ ಸಹಕರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಹಿಂದಿನ ಬಿಆರ್‌ಎಸ್ ಸರ್ಕಾರದ ಅವಧಿಯಲ್ಲಿ ವಿವಿಧ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳಿಂದ ಗುಪ್ತಚರ ಮಾಹಿತಿಯನ್ನು ಅಳಿಸಿಹಾಕಿದ್ದಕ್ಕಾಗಿ ಹಾಗೂ ಫೋನ್ ಕದ್ದಾಲಿಕೆ ಆರೋಪದ ಮೇಲೆ ರಾವ್ ಅವರನ್ನು ಈ ಹಿಂದೆ ಬಂಧಿಸಲಾಗಿತ್ತು.

ಇದನ್ನೂ ಓದಿ: ಏನಿದೆ ರೇಟ್? ಎಂದು ಕಂಗನಾ ಫೋಟೊ ಪೋಸ್ಟ್ ಮಾಡಿ ಅವಮಾನಿಸಿದ ಸುಪ್ರಿಯಾ ಶ್ರಿನೇಟ್; ಅಕೌಂಟ್ ಹ್ಯಾಕ್ ಎಂದು ಸಬೂಬು

ಹೈದರಾಬಾದ್ ಪೊಲೀಸ್ ಹೇಳಿಕೆಯ ಪ್ರಕಾರ, ಇಬ್ಬರು ಬಂಧಿತ ಪೊಲೀಸ್ ಅಧಿಕಾರಿಗಳು ತಮ್ಮ ಪ್ರೊಫೈಲ್‌ಗಳನ್ನು ರಚಿಸುವ ಮೂಲಕ ಅಕ್ರಮವಾಗಿ ಖಾಸಗಿ ವ್ಯಕ್ತಿಗಳನ್ನು ಮೇಲ್ವಿಚಾರಣೆ ಮಾಡುವ ಸಂಚಿನಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಪ್ಪೊಪ್ಪಿಕೊಂಡರು.ಈ ಮೂಲಕ ಅವರು ಅಧಿಕೃತ ಸ್ಥಾನಗಳನ್ನು ದುರುಪಯೋಗಪಡಿಸಿಕೊಂಡಿದ್ದರು. ಪ್ರಣೀತ್ ರಾವ್ ಅವರು ಅಪರಿಚಿತ ವ್ಯಕ್ತಿಗಳ ಪ್ರೊಫೈಲ್‌ಗಳನ್ನು ಕ್ರಿಯೇಟ್ ಮಾಡಿದ್ದು, ಕೆಲವು ಕಂಪ್ಯೂಟರ್ ಸಿಸ್ಟಮ್‌ಗಳು ಮತ್ತು ಅಧಿಕೃತ ಡೇಟಾವನ್ನು ನಾಶಪಡಿಸುವುದರ ಜೊತೆಗೆ, ಅನುಮತಿಯಿಲ್ಲದೆ ಮತ್ತು ಕಾನೂನುಬಾಹಿರವಾಗಿ ರಹಸ್ಯವಾಗಿ ಮೇಲ್ವಿಚಾರಣೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಇತ್ತೀಚೆಗೆ ರೇವಂತ್ ರೆಡ್ಡಿ ನೇತೃತ್ವದ ತೆಲಂಗಾಣ ಸರ್ಕಾರ ಅವರನ್ನು ಅಮಾನತುಗೊಳಿಸಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:59 pm, Mon, 25 March 24

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?