AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ ಫೋನ್ ಕದ್ದಾಲಿಕೆ ಪ್ರಕರಣ: ರಾಜ್ಯ ಗುಪ್ತಚರ ವಿಭಾಗದ ಮಾಜಿ ಮುಖ್ಯಸ್ಥ ಆರೋಪಿ ನಂ 1

ತೆಲಂಗಾಣ ಪೊಲೀಸರ ಪ್ರಕಾರ, ಬಂಧಿತ ಎಎಸ್ಪಿಗಳಿಬ್ಬರೂ ಅಮಾನತುಗೊಂಡಿರುವ ರಾಜ್ಯ ಗುಪ್ತಚರ ಬ್ಯೂರೋ (ಎಸ್‌ಐಬಿ) ಉಪ ಪೊಲೀಸ್ ಅಧೀಕ್ಷಕ (ಡಿಎಸ್‌ಪಿ) ಡಿ ಪ್ರಣೀತ್ ರಾವ್ ಅವರೊಂದಿಗೆ ಸಹಕರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಹಿಂದಿನ ಬಿಆರ್‌ಎಸ್ ಸರ್ಕಾರದ ಅವಧಿಯಲ್ಲಿ ವಿವಿಧ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳಿಂದ ಗುಪ್ತಚರ ಮಾಹಿತಿಯನ್ನು ಅಳಿಸಿಹಾಕಿದ್ದಕ್ಕಾಗಿ ಹಾಗೂ ಫೋನ್ ಕದ್ದಾಲಿಕೆ ಆರೋಪದ ಮೇಲೆ ರಾವ್ ಅವರನ್ನು ಈ ಹಿಂದೆ ಬಂಧಿಸಲಾಗಿತ್ತು.

ತೆಲಂಗಾಣ ಫೋನ್ ಕದ್ದಾಲಿಕೆ ಪ್ರಕರಣ: ರಾಜ್ಯ ಗುಪ್ತಚರ ವಿಭಾಗದ ಮಾಜಿ ಮುಖ್ಯಸ್ಥ ಆರೋಪಿ ನಂ 1
ಟಿ ಪ್ರಭಾಕರ್ ರಾವ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Mar 25, 2024 | 9:00 PM

Share

ಹೈದರಾಬಾದ್ ಮಾರ್ಚ್ 25: ತೆಲಂಗಾಣವನ್ನು (Telangana) ಬೆಚ್ಚಿಬೀಳಿಸಿದ ಫೋನ್ ಕದ್ದಾಲಿಕೆ ಪ್ರಕರಣಕ್ಕೆ ( phone tapping case) ಸಂಬಂಧಿಸಿದಂತೆ ಹೈದರಾಬಾದ್ ಪೊಲೀಸರು ಇಬ್ಬರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳನ್ನು (ASP) ಬಂಧಿಸಿದ್ದಾರೆ. ತನಿಖೆಯ ವೇಳೆ ಹಾಜರಾಗದ ಮತ್ತು ಅಸಹಕಾರ ಆರೋಪದ ಮೇಲೆ ರಾಜ್ಯ ಗುಪ್ತಚರ ವಿಭಾಗದ ಮಾಜಿ ಮುಖ್ಯಸ್ಥ ಟಿ ಪ್ರಭಾಕರ್ ರಾವ್ ಮತ್ತು ಇತರ ಇಬ್ಬರ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಎನ್‌ಡಿಟಿವಿ ವರದಿಯ ಪ್ರಕಾರ, ಯುಎಸ್‌ನಲ್ಲಿದ್ದಾರೆ ಎಂದು ನಂಬಲಾದ ರಾವ್ ಅವರನ್ನು ಪ್ರಕರಣದಲ್ಲಿ ಆರೋಪಿ ನಂ.1 ಎಂದು ಹೆಸರಿಸಲಾಗಿದೆ.

ವರದಿಯ ಪ್ರಕಾರ, ಬಂಧಿತರಾದ ಹೆಚ್ಚುವರಿ ಪೊಲೀಸ್ ಉಪ ಆಯುಕ್ತ (ಡಿಸಿಪಿ) ತಿರುಪತಣ್ಣ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎನ್ ಭುಜಂಗ ರಾವ್ ಅವರು ಕ್ರಮವಾಗಿ ವಿಶೇಷ ಗುಪ್ತಚರ ಬ್ಯೂರೋ (ಎಸ್‌ಐಬಿ) ಮತ್ತು ಗುಪ್ತಚರ ಇಲಾಖೆಯಲ್ಲಿ ಎಎಸ್‌ಪಿಗಳಾಗಿ ಕಾರ್ಯನಿರ್ವಹಿಸಿದ್ದಾರೆ. ಅವರನ್ನು ಭಾನುವಾರ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಕಮಿಷನರ್ ಕಾರ್ಯಪಡೆಯ (ಹೈದರಾಬಾದ್ ಪೊಲೀಸ್ ವಿಭಾಗ) ಆಗಿನ ಪೊಲೀಸ್ ಉಪ ಆಯುಕ್ತ ಪಿ ರಾಧಾಕೃಷ್ಣ ಮತ್ತು ತೆಲುಗು ಟಿವಿ ಚಾನೆಲ್‌ನ ಹಿರಿಯ ಕಾರ್ಯನಿರ್ವಾಹಕರ ವಿರುದ್ಧವೂ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿದೆ.

ಏನಿದು ತೆಲಂಗಾಣ ಫೋನ್ ಕದ್ದಾಲಿಕೆ ಪ್ರಕರಣ?

ತೆಲಂಗಾಣ ಪೊಲೀಸರ ಪ್ರಕಾರ, ಬಂಧಿತ ಎಎಸ್ಪಿಗಳಿಬ್ಬರೂ ಅಮಾನತುಗೊಂಡಿರುವ ರಾಜ್ಯ ಗುಪ್ತಚರ ಬ್ಯೂರೋ (ಎಸ್‌ಐಬಿ) ಉಪ ಪೊಲೀಸ್ ಅಧೀಕ್ಷಕ (ಡಿಎಸ್‌ಪಿ) ಡಿ ಪ್ರಣೀತ್ ರಾವ್ ಅವರೊಂದಿಗೆ ಸಹಕರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಹಿಂದಿನ ಬಿಆರ್‌ಎಸ್ ಸರ್ಕಾರದ ಅವಧಿಯಲ್ಲಿ ವಿವಿಧ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳಿಂದ ಗುಪ್ತಚರ ಮಾಹಿತಿಯನ್ನು ಅಳಿಸಿಹಾಕಿದ್ದಕ್ಕಾಗಿ ಹಾಗೂ ಫೋನ್ ಕದ್ದಾಲಿಕೆ ಆರೋಪದ ಮೇಲೆ ರಾವ್ ಅವರನ್ನು ಈ ಹಿಂದೆ ಬಂಧಿಸಲಾಗಿತ್ತು.

ಇದನ್ನೂ ಓದಿ: ಏನಿದೆ ರೇಟ್? ಎಂದು ಕಂಗನಾ ಫೋಟೊ ಪೋಸ್ಟ್ ಮಾಡಿ ಅವಮಾನಿಸಿದ ಸುಪ್ರಿಯಾ ಶ್ರಿನೇಟ್; ಅಕೌಂಟ್ ಹ್ಯಾಕ್ ಎಂದು ಸಬೂಬು

ಹೈದರಾಬಾದ್ ಪೊಲೀಸ್ ಹೇಳಿಕೆಯ ಪ್ರಕಾರ, ಇಬ್ಬರು ಬಂಧಿತ ಪೊಲೀಸ್ ಅಧಿಕಾರಿಗಳು ತಮ್ಮ ಪ್ರೊಫೈಲ್‌ಗಳನ್ನು ರಚಿಸುವ ಮೂಲಕ ಅಕ್ರಮವಾಗಿ ಖಾಸಗಿ ವ್ಯಕ್ತಿಗಳನ್ನು ಮೇಲ್ವಿಚಾರಣೆ ಮಾಡುವ ಸಂಚಿನಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಪ್ಪೊಪ್ಪಿಕೊಂಡರು.ಈ ಮೂಲಕ ಅವರು ಅಧಿಕೃತ ಸ್ಥಾನಗಳನ್ನು ದುರುಪಯೋಗಪಡಿಸಿಕೊಂಡಿದ್ದರು. ಪ್ರಣೀತ್ ರಾವ್ ಅವರು ಅಪರಿಚಿತ ವ್ಯಕ್ತಿಗಳ ಪ್ರೊಫೈಲ್‌ಗಳನ್ನು ಕ್ರಿಯೇಟ್ ಮಾಡಿದ್ದು, ಕೆಲವು ಕಂಪ್ಯೂಟರ್ ಸಿಸ್ಟಮ್‌ಗಳು ಮತ್ತು ಅಧಿಕೃತ ಡೇಟಾವನ್ನು ನಾಶಪಡಿಸುವುದರ ಜೊತೆಗೆ, ಅನುಮತಿಯಿಲ್ಲದೆ ಮತ್ತು ಕಾನೂನುಬಾಹಿರವಾಗಿ ರಹಸ್ಯವಾಗಿ ಮೇಲ್ವಿಚಾರಣೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಇತ್ತೀಚೆಗೆ ರೇವಂತ್ ರೆಡ್ಡಿ ನೇತೃತ್ವದ ತೆಲಂಗಾಣ ಸರ್ಕಾರ ಅವರನ್ನು ಅಮಾನತುಗೊಳಿಸಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:59 pm, Mon, 25 March 24

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ