ಹೈದರಾಬಾದ್​ನಲ್ಲಿ ಬಾಂಬ್​ ದಾಳಿ ಸಂಚು ವಿಫಲ: ಇಬ್ಬರು ಶಂಕಿತ ಉಗ್ರರ ಬಂಧನ

ಹೈದರಾಬಾದ್​ನಲ್ಲಿ ದಾಳಿ ಮಾಡಲು ಯತ್ನಿಸಿದ್ದ ಉಗ್ರರ ಸಂಚನ್ನು ಪೊಲೀಸರು ವಿಫಲಗೊಳಿಸಿದ್ದಾರೆ. ಹೈದರಾಬಾದ್‌ನಲ್ಲಿ ಪ್ರಮುಖ ಭಯೋತ್ಪಾದಕ ಸಂಚನ್ನು ವಿಫಲಗೊಳಿಸಲಾಗಿದೆ.ಇಬ್ಬರು ಸಿರಾಜ್ ಉರ್ ರೆಹಮಾನ್ (29) ಮತ್ತು ಸೈಯದ್ ಸಮೀರ್ (28) ಸೌದಿ ಅರೇಬಿಯಾದಲ್ಲಿ ಐಸಿಸ್ ಘಟಕದೊಂದಿಗೆ ಸಂಪರ್ಕ ಹೊಂದಿದ್ದಾರೆಂದು ಪೊಲೀಸರು ಶಂಕಿಸಿದ್ದಾರೆ.ಆರೋಪಿಗಳಿಂದ ಅಮೋನಿಯಾ, ಸಲ್ಫರ್ ಮತ್ತು ಅಲ್ಯೂಮಿನಿಯಂ ಪುಡಿ ಸೇರಿದಂತೆ ಸ್ಫೋಟಕ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ತೆಲಂಗಾಣ ಪೊಲೀಸರು ಆಂಧ್ರಪ್ರದೇಶ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಹೈದರಾಬಾದ್‌ನಲ್ಲಿ ಬಾಂಬ್ ಸ್ಫೋಟದ ಸಂಚನ್ನು ವಿಫಲಗೊಳಿಸಿದ್ದಾರೆ.

ಹೈದರಾಬಾದ್​ನಲ್ಲಿ ಬಾಂಬ್​ ದಾಳಿ ಸಂಚು ವಿಫಲ: ಇಬ್ಬರು ಶಂಕಿತ ಉಗ್ರರ ಬಂಧನ
ಉಗ್ರರು
Image Credit source: Britannica

Updated on: May 19, 2025 | 8:51 AM

ಹೈದರಾಬಾದ್​, ಮೇ 19:ಹೈದರಾಬಾದ್‌ನಲ್ಲಿ ಪ್ರಮುಖ ಭಯೋತ್ಪಾದಕ(Terrorist) ಸಂಚನ್ನು ವಿಫಲಗೊಳಿಸಲಾಗಿದೆ. ಇಬ್ಬರು ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ. ಸಿರಾಜ್ ಉರ್ ರೆಹಮಾನ್ (29) ಮತ್ತು ಸೈಯದ್ ಸಮೀರ್ (28) ಸೌದಿ ಅರೇಬಿಯಾದಲ್ಲಿ ಐಸಿಸ್ ಘಟಕದೊಂದಿಗೆ ಸಂಪರ್ಕ ಹೊಂದಿದ್ದಾರೆಂದು ಪೊಲೀಸರು ಶಂಕಿಸಿದ್ದಾರೆ. ಆರೋಪಿಗಳಿಂದ ಅಮೋನಿಯಾ, ಸಲ್ಫರ್ ಮತ್ತು ಅಲ್ಯೂಮಿನಿಯಂ ಪುಡಿ ಸೇರಿದಂತೆ ಸ್ಫೋಟಕ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ತೆಲಂಗಾಣ ಪೊಲೀಸರು ಆಂಧ್ರಪ್ರದೇಶ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಹೈದರಾಬಾದ್‌ನಲ್ಲಿ ಬಾಂಬ್ ಸ್ಫೋಟದ ಸಂಚನ್ನು ವಿಫಲಗೊಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಐಸಿಸ್ ಜೊತೆ ಸಂಪರ್ಕ ಹೊಂದಿದ್ದ ಇಬ್ಬರು ಶಂಕಿತರನ್ನು ಬಂಧಿಸಲಾಗಿದೆ. ವಿಜಯನಗರದ ಸಿರಾಜ್ ಮತ್ತು ಹೈದರಾಬಾದ್‌ನ ಸಮೀರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಅವರಿಬ್ಬರೂ ನಗರದಲ್ಲಿ ನಕಲಿ ಸ್ಫೋಟ ನಡೆಸಲು ಯೋಜಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

ಯೋಜನೆಯ ಭಾಗವಾಗಿ ಸಿರಾಜ್ ವಿಜಯನಗರದಲ್ಲಿ ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಿದ್ದ ಎಂದು ವರದಿಯಾಗಿದೆ. ಇಬ್ಬರೂ ಸೌದಿ ಅರೇಬಿಯಾ ಮೂಲದ ಐಸಿಸ್ ಮಾಡ್ಯೂಲ್‌ನಿಂದ ಆದೇಶಗಳನ್ನು ಪಡೆಯುತ್ತಿದ್ದರು. ಅವನು ಹೈದರಾಬಾದ್‌ನಲ್ಲಿ ಸ್ಫೋಟ ನಡೆಸಲು ಸಿದ್ಧತೆ ನಡೆಸುತ್ತಿದ್ದ. ಇಬ್ಬರೂ ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ. ತೆಲಂಗಾಣ ಕೌಂಟರ್ ಇಂಟೆಲಿಜೆನ್ಸ್ ಮತ್ತು ಆಂಧ್ರಪ್ರದೇಶ ಗುಪ್ತಚರ ಸಂಸ್ಥೆಗಳು ಜಂಟಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದವು.

ಇದನ್ನೂ ಓದಿ
Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ
ಪಹಲ್ಗಾಮ್ ಉಗ್ರ ದಾಳಿ, ಎಕೆ-47 ಹಿಡಿದ ಶಂಕಿತ ಉಗ್ರನ ಫೋಟೋ ಬಹಿರಂಗ
ಪ್ಯಾಂಟ್​ ಬಿಚ್ಚಿ, ಐಡಿ ಪರಿಶೀಲಿಸಿ ಹಿಂದೂಗಳನ್ನು ಗುರಿಯಾಗಿಸಿ ಉಗ್ರರ ದಾಳಿ
ಪಹಲ್ಗಾಮ್ ಉಗ್ರ ದಾಳಿಯ ಮಾಸ್ಟರ್​ಮೈಂಡ್ ಸೈಫುಲ್ಲಾ ಖಾಲಿದ್ ಯಾರು?

ಇತ್ತೀಚಿನ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ, ಭಯೋತ್ಪಾದಕರು ಇರುವ ಸಾಧ್ಯತೆಯ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಹಲವು ರಾಜ್ಯಗಳಲ್ಲಿ ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ .

ಮತ್ತಷ್ಟು ಓದಿ: ಬೆಂಗಳೂರಿನ ಐಐಎಸ್​ಸಿ ಮೇಲಿನ ದಾಳಿಯ ರುವಾರಿ ಉಗ್ರ ಸೈಫುಲ್ಲಾ ಖಾಲಿದ್ ಹತ್ಯೆ

ಕಳೆದ ವರ್ಷ ಡಿಸೆಂಬರ್‌ನಲ್ಲಿ ಗುರುದಾಸ್ಪುರ ಜಿಲ್ಲೆಯ ಪೊಲೀಸ್ ಠಾಣೆಯ ಮೇಲೆ ನಡೆದ ಗ್ರೆನೇಡ್ ದಾಳಿಗೆ ಸಂಬಂಧಿಸಿದಂತೆ ಖಲಿಸ್ತಾನಿ ಭಯೋತ್ಪಾದಕ ಹರ್ವಿಂದರ್ ಸಿಂಗ್ ಅಲಿಯಾಸ್ ರಿಂಡಾ ಜೊತೆ ಸಂಪರ್ಕ ಹೊಂದಿರುವ ಗ್ಯಾಂಗ್‌ಸ್ಟರ್ ಹ್ಯಾಪಿ ಪ್ಯಾಶನ್‌ಗೆ ಸಂಬಂಧಿಸಿದ ಪಂಜಾಬ್‌ನ 15 ಸ್ಥಳಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ ಶುಕ್ರವಾರ ದಾಳಿ ನಡೆಸಿದೆ.

ಪಹಲ್ಗಾಮ್​ನಲ್ಲಿ 26 ಅಮಾಯಕರ ಹತ್ಯೆ
ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ಗುಂಡು ಹಾರಿಸಿದ್ದರು. 26 ಅಮಾಯಕ ಜನರನ್ನು ಕ್ರೂರವಾಗಿ ಹತ್ಯೆ ಮಾಡಲಾಯಿತು. ಭದ್ರತಾ ಅಧಿಕಾರಿಗಳು ಭಯೋತ್ಪಾದಕರನ್ನು ಗುರುತಿಸಿದ್ದಾರೆ. ಅವರು ತಲೆಮರೆಸಿಕೊಂಡಿದ್ದಾನೆ. ಹಾಗೆಯೇ ಭಾರತೀಯ ಸೇನೆಯು ಆಪರೇಷನ್ ಸಿಂಧೂರ್ ಪ್ರಾರಂಭಿಸಿ ಪಾಕಿಸ್ತಾನದ 9 ಉಗ್ರ ನೆಲೆ ಮೇಲೆ ದಾಳಿ ನಡೆಸಿದ್ದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us