AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತನಿಂದ ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದ ಪೊಲೀಸ್ ಅಧಿಕಾರಿ

ರೈತನಿಂದ ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದ ಪೊಲೀಸ್ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಒಬ್ಬರನ್ನು ಸ್ಥಳೀಯ ರೈತನಿಂದ ಲಂಚ ಪಡೆದ ಆರೋಪದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ವಶಕ್ಕೆ ತೆಗೆದುಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರೈತನಿಂದ ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದ ಪೊಲೀಸ್ ಅಧಿಕಾರಿ
ಪೊಲೀಸ್​ Image Credit source: India Today
Follow us
ನಯನಾ ರಾಜೀವ್
|

Updated on: Nov 10, 2024 | 10:43 AM

ರೈತನಿಂದ ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದ ಪೊಲೀಸ್ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಒಬ್ಬರನ್ನು ಸ್ಥಳೀಯ ರೈತನಿಂದ ಲಂಚ ಪಡೆದ ಆರೋಪದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ವಶಕ್ಕೆ ತೆಗೆದುಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಂದಿರುವ ಮಾಹಿತಿ ಪ್ರಕಾರ, ಸಬ್ ಇನ್ಸ್ ಪೆಕ್ಟರ್ (ಎಸ್ ಐ) ಕೃಷ್ಣಕುಮಾರ್ ಅವರು ಕೋಟಯ್ಯ ಕ್ಯಾಂಪ್​ನಾಗರಾಜು ಎಂಬ ರೈತನಿಗೆ ವಿವಾದಕ್ಕೆ ಸಂಬಂಧಿಸಿದಂತೆ 50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

50,000 ರೂ.ಗಳ ಆರಂಭಿಕ ಬೇಡಿಕೆಯನ್ನು 20,000 ರೂ.ಗೆ ಇಳಿಸಲಾಯಿತು. ಆದಾಗ್ಯೂ, ನಾಗರಾಜು ಅವರು ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ಸಂಪರ್ಕಿಸಲು ಆಯ್ಕೆ ಮಾಡಿಕೊಂಡರು ಮತ್ತು ಅವರ ಸಹಾಯವನ್ನು ಕೋರಿದರು. ನಾಗರಾಜು ಅವರ ದೂರಿನ ಮೇರೆಗೆ ಎಸಿಬಿ ಯೋಜಿತ ಹಣ ವಿನಿಮಯದ ವೇಳೆ ಪೊಲೀಸರಿಗೆ ಬಲೆ ಬೀಸಿದೆ.

ಮತ್ತಷ್ಟು ಓದಿ: 300 ರೂ. ಲಂಚ ಪಡೆದು ಬಚಾವಾಗಲೆತ್ನಿಸಿದ್ದ ಬೆರಳಚ್ಚುಗಾರ್ತಿಗೆ 10 ವರ್ಷ ನಂತರ ಹೈಕೋರ್ಟಲ್ಲಿ ಶಾಕ್!

ನಂತರ ಎಸಿಬಿ ಡಿಎಸ್‌ಪಿ ಶೇಖರ್‌ಗೌಡ ಅವರು ರೈತರಿಂದ ಹಣ ಸ್ವೀಕರಿಸುತ್ತಿದ್ದ ಎಸ್‌ಐ ಕೃಷ್ಣಕುಮಾರ್‌ನನ್ನು ರೆಡ್‌ಹ್ಯಾಂಡ್‌ ಆಗಿ ಹಿಡಿದು ವಶಕ್ಕೆ ಪಡೆದಿದ್ದಾರೆ.

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಬಿಎಂಪಿ ಅಧಿಕಾರಿಗಳು ಲಂಚ ಪಡೆಯುವ ವೇಳೆ ಬಿಬಿಎಂಪಿ ಅಧಿಕಾರಿಗಳು ಲೋಕಾಯುಕ್ತ(Lokayukta) ಬಲೆಗೆ ಬಿದ್ದಿದ್ದಾರೆ. ಬಿಬಿಎಂಪಿ ಯಶವಂತಪುರ ಕಚೇರಿ ಎಆರ್​ಒ ರಾಜೇಂದ್ರಪ್ರಸಾದ್ ಹಾಗೂ ತೆರಿಗೆ ಮೌಲ್ಯಮಾಪಕ ಪ್ರಕಾಶ್ ಎಂಬುವವರು ವಾಣಿಜ್ಯ ಕಟ್ಟಡದ ತೆರಿಗೆ ಮೊತ್ತ ಕಡಿಮೆ ಮಾಡಲು ಬರೋಬ್ಬರಿ 4.50 ಲಕ್ಷ ರೂ. ಲಂಚ ಸ್ವೀಕರಿಸುವಾಗ ರೆಡ್​ಹ್ಯಾಂಡ್​ ಆಗಿ​ ಸಿಕ್ಕಿಬಿದ್ದಿದ್ದಾರೆ.

ಇದೀಗ ಇಬ್ಬರು ಅಧಿಕಾರಿಗಳು ಬಂಧಿಸಿ, ಲಂಚದ ಹಣವನ್ನು ಜಪ್ತಿ ಮಾಡಿದ್ದಾರೆ. ಈ ಕುರಿತು ಬೆಂಗಳೂರು ಲೋಕಾಯುಕ್ತ ಠಾಣೆಯಲ್ಲಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಮೊನ್ನೆಯಷ್ಟೇ (ಸೆ.24) ಯಶವಂತಪುರ ಮತ್ತು ಬ್ಯಾಟರಾಯನಪುರ ಅಬಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದು, ಈ ವೇಳೆ ಸರ್ಕಾರಿ ಕಚೇರಿಗಳಲ್ಲೇ ಗಾಂಜಾ ಮತ್ತು ಮದ್ಯದ ಬಾಟಲಿಗಳು ಪತ್ತೆಯಾಗಿದ್ದವು. ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್, ‘ 61 ಅಬಕಾರಿ ಅಧಿಕಾರಿಗಳ ಮೇಲೆ ಸರ್ಚ್ ಮಾಡಲಾಗಿದೆ. ಲೊಕಾಯುಕ್ತ ಕಚೇರಿಗೆ ಸುಮಾರು 132 ದೂರುಗಳು ಬಂದಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ