ಮಾವೋವಾದಿ ವಿರೋಧಿ ಕಾರ್ಯಾಚರಣೆ: ಆಕಸ್ಮಿಕ ಗುಂಡು ಹಾರಿ ಪೊಲೀಸ್ ಅಧಿಕಾರಿ ಸಾವು

ಹೈದರಾಬಾದ್: ತೆಲಂಗಾಣದಲ್ಲಿ ಮಾವೋವಾದಿಗಳ ವಿರುದ್ಧದ ಕಾರ್ಯಾಚರಣೆ ವೇಳೆ ಪೊಲೀಸರು ಸಾಗಿಸುತ್ತಿದ್ದ ಎಕೆ -47 ಬಂದೂಕಿನಿಂದ ಆಕಸ್ಮಿಕವಾಗಿ ಹಾರಿದ ಗುಂಡು ಪೊಲೀಸ್ ಅಧಿಕಾರಿಗೆ ತಗುಲಿದ ಪರಿಣಾಮ ಆ ಪೊಲೀಸ್ ಅಧಿಕಾರಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮಾವೋವಾದಿಗಳನ್ನು ಬಂಧಿಸಲು ಪೊಲೀಸರು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ ಸಮಯದಲ್ಲಿ ಭದ್ರಾದ್ರಿ ಕೊಥಗುಡೆಮ್ ಜಿಲ್ಲೆಯ ಚೆರ್ಲಾ ಮಂಡಲದ ಚೆನ್ನಪುರಂ ಅರಣ್ಯ ಪ್ರದೇಶದಲ್ಲಿ ಈ ಅಚಾತುರ್ಯ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ರಿಸರ್ವ್​ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಆರ್‌ಎಸ್‌ಐ) ಆದಿತ್ಯ ಸಾಯಿ ಕುಮಾರ್ (25) ಸ್ಥಳದಲ್ಲೇ […]

ಮಾವೋವಾದಿ ವಿರೋಧಿ ಕಾರ್ಯಾಚರಣೆ: ಆಕಸ್ಮಿಕ ಗುಂಡು ಹಾರಿ ಪೊಲೀಸ್ ಅಧಿಕಾರಿ ಸಾವು
ಸಾಧು ಶ್ರೀನಾಥ್​

Updated on: Sep 18, 2020 | 11:59 AM

ಹೈದರಾಬಾದ್: ತೆಲಂಗಾಣದಲ್ಲಿ ಮಾವೋವಾದಿಗಳ ವಿರುದ್ಧದ ಕಾರ್ಯಾಚರಣೆ ವೇಳೆ ಪೊಲೀಸರು ಸಾಗಿಸುತ್ತಿದ್ದ ಎಕೆ -47 ಬಂದೂಕಿನಿಂದ ಆಕಸ್ಮಿಕವಾಗಿ ಹಾರಿದ ಗುಂಡು ಪೊಲೀಸ್ ಅಧಿಕಾರಿಗೆ ತಗುಲಿದ ಪರಿಣಾಮ ಆ ಪೊಲೀಸ್ ಅಧಿಕಾರಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಮಾವೋವಾದಿಗಳನ್ನು ಬಂಧಿಸಲು ಪೊಲೀಸರು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ ಸಮಯದಲ್ಲಿ ಭದ್ರಾದ್ರಿ ಕೊಥಗುಡೆಮ್ ಜಿಲ್ಲೆಯ ಚೆರ್ಲಾ ಮಂಡಲದ ಚೆನ್ನಪುರಂ ಅರಣ್ಯ ಪ್ರದೇಶದಲ್ಲಿ ಈ ಅಚಾತುರ್ಯ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ರಿಸರ್ವ್​ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಆರ್‌ಎಸ್‌ಐ) ಆದಿತ್ಯ ಸಾಯಿ ಕುಮಾರ್ (25) ಸ್ಥಳದಲ್ಲೇ ಮೃತಪಟ್ಟಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಭದ್ರಾಚಲಂ ಆಸ್ಪತ್ರೆಗೆ ಸಾಗಿಸಲಾಗಿದೆ. ಆದಿತ್ಯ ಸಾಯಿ ಕುಮಾರ್​ರವರು ಇತರ ಸಿಬ್ಬಂದಿಯೊಂದಿಗೆ ಕಾರ್ಯಾಚರಣೆ ನಡೆಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುನಿಲ್ ದತ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಮಾವೋವಾದಿಗಳು ಮತ್ತು ಪೊಲೀಸರ ನಡುವೆ ಕಳೆದೊಂದು ವಾರದಲ್ಲಿ ನಡೆದ ಎರಡನೇ ಕಾರ್ಯಾಚರಣೆ ಇದಾಗಿದೆ. ಗುಂಡಾಲ ಮಂಡಲದ ದೇವಲ್ಲಗುಡೆಮ್ ಗ್ರಾಮದ ಬಳಿ ಸೆಪ್ಟೆಂಬರ್ 3 ರಂದು ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಮಾವೋವಾದಿ ಸಾವನ್ನಪ್ಪಿದ್ದ ಮತ್ತು ಇನ್ನೊಬ್ಬ ತಪ್ಪಿಸಿಕೊಂಡಿದ್ದ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us