AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ಕಾರು ಮರಕ್ಕೆ ಡಿಕ್ಕಿ, ಪೊಲೀಸ್​ ಅಧಿಕಾರಿ, ನವವಿವಾಹಿತ ಸೇರಿ 3 ಮಂದಿ ಸಾವು

ತೆಲಂಗಾಣದ ಮಹೆಬೂಬ್‌ನಗರ ಜಿಲ್ಲೆಯಲ್ಲಿ ಬುಧವಾರ ಕಾರು ಮರಕ್ಕೆ ಡಿಕ್ಕಿ ಹೊಡೆದು ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಮತ್ತು ಅವರ ಅಳಿಯ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.

ತೆಲಂಗಾಣ: ಕಾರು ಮರಕ್ಕೆ ಡಿಕ್ಕಿ, ಪೊಲೀಸ್​ ಅಧಿಕಾರಿ, ನವವಿವಾಹಿತ ಸೇರಿ 3 ಮಂದಿ ಸಾವು
ಅಪಘಾತImage Credit source: India Today
ನಯನಾ ರಾಜೀವ್
|

Updated on:Feb 22, 2024 | 9:36 AM

Share

ರಭಸದಿಂದ ಬಂದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್​ ಅಧಿಕಾರಿ ಹಾಗೂ ನವವಿವಾಹಿತ ಸೇರಿ 3 ಮಂದಿ ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಪೊಲೀಸ್​ ಅಧಿಕಾರಿ  ಫೆಬ್ರವರಿ 15 ರಂದು ಅಂದರೆ ಒಂದು ವಾರದ ಹಿಂದೆ ಮದುವೆಯಾದ ಅವರ ಮಗಳು ಹಾಗೂ ಅಳಿಯನನ್ನು ಔತಣಕೂಟಕ್ಕೆ ಕರೆದೊಯ್ಯುತ್ತಿದ್ದರು. ಅಪಘಾತದಲ್ಲಿ ತೀವ್ರ ಗಾಯಗೊಂಡು ಮಹಬೂಬ್‌ನಗರ ಸರ್ಕಾರಿ ಆಸ್ಪತ್ರೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಅಪಘಾತದಲ್ಲಿ ಮೃತಪಟ್ಟವರು ನಂದ್ಯಾಲ ಜಿಲ್ಲೆಯ ಸಬ್ ಇನ್ಸ್‌ಪೆಕ್ಟರ್ ವೆಂಕಟರಮಣ (57), ಅವರ ಅಳಿಯ ಪವನ್ ಸಾಯಿ (25), ಚಾಲಕ ಚಂದ್ರು (23).

ಕುಟುಂಬವು ಹೈದರಾಬಾದ್‌ನಿಂದ ಅನಂತಪುರಕ್ಕೆ ತೆರಳುತ್ತಿತ್ತು, ಅಲ್ಲಿ ಅವರು ಪವನ್ ಸಾಯಿ ಅವರ ನಿವಾಸದಲ್ಲಿ ಔತಣಕೂಟದಲ್ಲಿ ಭಾಗವಹಿಸಿದ್ದರು. ಅವರ ಮಾರುತಿ ಸ್ವಿಫ್ಟ್ ಡಿಜೈರ್ ಅವರು ಅಣ್ಣಾಸಾಗರ್ ಪ್ರದೇಶವನ್ನು ತಲುಪಿದಾಗ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಪಘಾತಕ್ಕೆ ಕಾರಣ ಇನ್ನೂ ಪತ್ತೆಯಾಗಿಲ್ಲ.

ಬಿಹಾರ: ಆಟೋಗೆ ಅಪರಿಚಿತ ವಾಹನ ಡಿಕ್ಕಿ, 9 ಮಂದಿ ಸಾವು ಅಪರಿಚಿತ ವಾಹನವೊಂದು ಆಟೋರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಮೃತಪಟ್ಟಿದ್ದು, ಆರು ಜನರು ಗಾಯಗೊಂಡಿರುವ ಘಟನೆ ಬಿಹಾರದ ಲಖಿಸರಾಯ್ ಜಿಲ್ಲೆಯಲ್ಲಿ ನಡೆದಿದೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಲಖಿಸರಾಯ್-ಸಿಕಂದ್ರ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಆಟೋ ಲಖಿಸರಾಯ್‌ನಿಂದ ಸಿಕಂದ್ರ ಕಡೆಗೆ ಹೋಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ವೇಳೆ ಆಟೋರಿಕ್ಷಾದಲ್ಲಿ 15 ಮಂದಿ ಇದ್ದರು. ಅಪಘಾತದ ರಭಸಕ್ಕೆ ಆಟೊರಿಕ್ಷಾ ಜಖಂಗೊಂಡಿತ್ತು.

ಮತ್ತಷ್ಟು ಓದಿ: ಚನ್ನಪಟ್ಟಣ: ಬೈರಾಪಟ್ಟಣದ ಬಳಿ ಲಾರಿ, ಟಿಟಿ ಭೀಕರ ಅಪಘಾತ, ಸ್ಥಳದಲ್ಲೇ ಮೂವರು ಸಾವು

ಮೃತ ಒಂಬತ್ತು ಮಂದಿಯಲ್ಲಿ ಒಬ್ಬನನ್ನು ಚಾಲಕ ಮನೋಜ್ ಕುಮಾರ್ ಎಂದು ಗುರುತಿಸಲಾಗಿದೆ. ಅಪಘಾತದ ಮಾಹಿತಿ ಪಡೆದ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸದರ್ ಆಸ್ಪತ್ರೆಗೆ ಮೊದಲು ಕಳುಹಿಸಲಾಯಿತು, ಆದರೆ ಅವರ ಸ್ಥಿತಿ ಗಂಭೀರವಾದ ಕಾರಣ ಪಾಟ್ನಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಳುಹಿಸಲಾಗಿದೆ. ಉಳಿದ ಎಂಟು ಮಂದಿ ಬಲಿಪಶುಗಳು ಮತ್ತು ಗಾಯಗೊಂಡವರ ಗುರುತು ಪತ್ತೆ ಹಚ್ಚಲಾಗುತ್ತಿದೆ. ಅಪರಿಚಿತ ವಾಹನ ಪತ್ತೆಗೆ ತನಿಖೆ ಮುಂದುವರೆದಿದೆ.

ಜೈನ ಸನ್ಯಾಸಿ ವಿದ್ಯಾಸಾಗರ ಅಂತ್ಯಕ್ರಿಯೆಗೆ ತೆರಳುತ್ತಿದ್ದ ವೇಳೆ ಕಾರು ಅಪಘಾತ ಮಹಾರಾಷ್ಟ್ರದ ಗೊಂಡಿಯಾದ ಅಮ್ಗಾಂವ್ ಮತ್ತು ಸಲೇಕಾ ನಡುವಿನ ಕಾಲುವೆಗೆ ಕಾರು ಬಿದ್ದು ಮೂವರು ಸಾವನ್ನಪ್ಪಿದ ಆಘಾತಕಾರಿ ಘಟನೆ ಭಾನುವಾರ ನಡೆದಿದೆ. ಅವರು ಸಲ್ಲೇಖನ ವ್ರತದಿಂದ ದೇಹ ತ್ಯಜಿಸಿದ ಜೈನ ಧರ್ಮಗುರು ಆಚಾರ್ಯ ವಿದ್ಯಾಸಾಗರ ಮಹಾರಾಜರ ಅಂತಿಮ ದರ್ಶನಕ್ಕೆ ತೆರಳುತ್ತಿದ್ದರು. ಈ ವೇಳೆ ಆರು ಜನರಿದ್ದ ಎರ್ಟಿಗಾ ಕಾರು ಕಾಲುವೆಗೆ ಬಿದ್ದು ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದರೆ, ಇತರರು ಸುರಕ್ಷಿತವಾಗಿದ್ದಾರೆ ಎಂದು ಹೇಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:35 am, Thu, 22 February 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ