YS Sharmila: ರಾಜಕೀಯ ವಿಶ್ಲೇಷಣೆ | ತೆಲಂಗಾಣದಲ್ಲಿ ಹೊಸ ಪಕ್ಷ ಕಟ್ಟುವ ನಿರ್ಧಾರ ಘೋಷಿಸಿದ ವೈ.ಎಸ್.ಶರ್ಮಿಳಾ; ಟಿಆರ್​ಎಸ್ ನಾಯಕರಲ್ಲಿ ಆತಂಕ

ಈ ಮಹತ್ವದ ತೀರ್ಮಾನದ ಹಿಂದಿನ ಕಾಣದ ಕೈ ಯಾವುದು ಎಂಬ ಪ್ರಶ್ನೆ ಹೈದರಾಬಾದ್​ನಲ್ಲಿ ಚರ್ಚೆಯಾಗುತ್ತಿದೆ. ತೆಲಂಗಾಣದಲ್ಲಿ ಸತತ 2ನೇ ಬಾರಿಗೆ ಅಧಿಕಾರಕ್ಕೆ ಬಂದ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್​ಎಸ್) ಪಕ್ಷದ ನಾಯಕರ ಎದೆ ಡವಗುಟ್ಟುತ್ತಿದೆ.

YS Sharmila: ರಾಜಕೀಯ ವಿಶ್ಲೇಷಣೆ | ತೆಲಂಗಾಣದಲ್ಲಿ ಹೊಸ ಪಕ್ಷ ಕಟ್ಟುವ ನಿರ್ಧಾರ ಘೋಷಿಸಿದ ವೈ.ಎಸ್.ಶರ್ಮಿಳಾ; ಟಿಆರ್​ಎಸ್ ನಾಯಕರಲ್ಲಿ ಆತಂಕ
ಹೈದರಾಬಾದ್​ನಲ್ಲಿ ಮಂಗಳವಾರ ವೈ.ಎಸ್.ಶರ್ಮಿಳಾ ರೆಡ್ಡಿ ಅಭಿಮಾನಿಗಳತ್ತ ಕೈಬೀಸಿದರು (ಎಡಚಿತ್ರ). ತಂದೆಯ ಪುತ್ಥಳಿಗೆ ನಮಿಸಿದರು.
Follow us
|

Updated on:Feb 10, 2021 | 2:41 PM

ಹೈದರಾಬಾದ್​: ಅವಿಭಜಿತ ಆಂಧ್ರಪ್ರದೇಶದ ಮುಖ್ಯಮಂತ್ರಿ ಆಗಿದ್ದ ವೈ.ಎಸ್.ರಾಜಶೇಖರ್ ರೆಡ್ಡಿ ಪುತ್ರಿ ವೈ.ಎಸ್ ಶರ್ಮಿಳಾ ತೆಲಂಗಾಣ ಸೇರಿದಂತೆ ದೇಶದಾದ್ಯಂತ ಸಂಚಲನ ಮೂಡಿಸುವಂತಹ ಮಹತ್ವದ ನಿರ್ಧಾರವನ್ನು ಮಂಗಳವಾರ (ಫೆ.9) ಘೋಷಿಸಿದ್ದಾರೆ. ಆಂಧ್ರಪ್ರದೇಶದಲ್ಲಿ ವೈಎಸ್​ಆರ್ ಕಾಂಗ್ರೆಸ್​ ಪಕ್ಷ ಕಟ್ಟಲು 3 ಸಾವಿರ ಕಿಲೋಮೀಟರ್​ಗೂ ಅಧಿಕ ಪಾದಯಾತ್ರೆ ನಡೆಸಿದ್ದ ಶರ್ಮಿಳಾ, ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ್ದರು. ಇಂದು ಹೊರಬಿದ್ದಿರುವ ಅವರ ಹೊಸ ಪಕ್ಷದ ಘೋಷಣೆ ಎಲ್ಲರ ಗಮನ ಸೆಳೆದಿದೆ.

ಶರ್ಮಿಳಾ ನಿರ್ಧಾರವನ್ನು ಅಭಿಮಾನಿಗಳು ಮನದುಂಬಿ ಸ್ವಾಗತಿಸಿದ್ದಾರೆ. ಹೈದರಾಬಾದ್​ನ ಲೋಟಸ್​ ಪಾಂಡ ಪ್ರದೇಶದಲ್ಲಿರುವ ಅವರ ಮನೆಯ ಬಳಿ ಮಂಗಳವಾರ ಭಾರಿ ಜನಸ್ತೋಮ ಕಂಡುಬಂತು. ಜೈ ತೆಲಂಗಾಣ, ಜೈ ವೈ.ಎಸ್.ರಾಜಶೇಖರ್ ರೆಡ್ಡಿ, ಜೈ ಶರ್ಮಿಲಮ್ಮ ಘೋಷಣೆಗಳು ಮೊಳಗಿದವು. ಬಡವರ ಕಣ್ಣೀರು ತಿಳಿದ ವೈಎಸ್​ಆರ್ ಕುಟುಂಬಕ್ಕೆ ಬಡವರ ಬದುಕು ಬದಲಿಸೋದು ಹೇಗೆ ಅಂತ ಗೊತ್ತು ಎಂಬ ಫ್ಲೆಕ್ಸ್​ಗಳು ರಾರಾಜಿಸಿದವು.

ಆಂಧ್ರಪ್ರದೇಶದಲ್ಲಿ ವೈಎಸ್ಆರ್ ಕಾಂಗ್ರೆಸ್​ ಪಕ್ಷವನ್ನು ಕಟ್ಟಿದ ನಂತರ ಆ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ವೈ.ಎಸ್. ಶರ್ಮಿಳಾ ಮಹತ್ವದ ಪಾತ್ರ ವಹಿಸಿದ್ದರು. ರಾಜಶೇಖರ್ ರೆಡ್ಡಿ ಪುತ್ರ ಜಗನ್ ಮೋಹನ್ ರೆಡ್ಡಿ ಜೈಲಿಗೆ ಹೋದ ನಂತರ ತಾಯಿ ವಿಜಯಮ್ಮ ಜೊತೆಗೆ ಶರ್ಮಿಳಾ ಪಕ್ಷದ ಪ್ರಚಾರದ ಹೊಣೆ ಹೊತ್ತುಕೊಂಡಿದ್ದರು.

YS Sharmila

ಆಂಧ್ರ ವಿಧಾನಸಭೆ ಚುನಾವಣೆ ಸಂದರ್ಭ ಹೀಗಿತ್ತು ಶರ್ಮಿಳಾ ಪ್ರಚಾರ ವೈಖರಿ

2012ರಲ್ಲಿ ಸುಮಾರು 3,000 ಕಿಲೋಮೀಟರ್ ಪಾದಯಾತ್ರೆ ನಡೆಸಿದ್ದ ಶರ್ಮಿಳಾ ಆಂಧ್ರಪ್ರದೇಶದಲ್ಲಿ ಸಂಚಲನಕ್ಕೆ ಕಾರಣವಾಗಿದ್ದರು. ವೈಸಿಪಿ ಪಕ್ಷ ಆಂಧ್ರಪ್ರದೇಶದಲ್ಲಿ ಅಧಿಕಾರಕ್ಕೆ ಬರುವಲ್ಲಿ ಅವರ ಪಾತ್ರ ಮಹತ್ವದ್ದಾಗಿತ್ತು. ಇದೀಗ ತೆಲಂಗಾಣಕ್ಕಾಗಿ ನೂತನ ಪಕ್ಷ ಸ್ಥಾಪಿಸಲು ಮುಂದಾಗಿದ್ದಾರೆ. ಹೈದರಾಬಾದ್​ನಲ್ಲಿ ಮಂಗಳವಾರ ಈ ಬಗ್ಗೆ ಹೇಳಿಕೆ ಹೊರಬಿದ್ದಿದೆ. ತೆಲಂಗಾಣದಾದ್ಯಂತ ಇರುವ ರಾಜಶೇಖರ ರೆಡ್ಡಿ ಅವರ ಅಭಿಮಾನಿ ಒಕ್ಕೂಟಗಳ ನಾಯಕರೊಂದಿಗೆ ಚರ್ಚಿಸಿದ ನಂತರ ನೂತನ ಪಕ್ಷ ಅಸ್ಥಿತ್ವಕ್ಕೆ ಬರಲಿದೆ ಎನ್ನಲಾಗಿದೆ.

ಹೈದರಾಬಾದ್, ನಲಗೊಂಡ ಪ್ರದೇಶದ ನಾಯಕರೊಂದಿಗೆ ಮಂಗಳವಾರ ಸಭೆ ನಡೆಯಿತು. ಮುಂದಿನ ದಿನಗಳಲ್ಲಿ ಇತರೆ ಜಿಲ್ಲೆಗಳ ನಾಯಕರೊಂದಿಗೂ ಶರ್ಮಿಳಾ ಸಭೆ ನಡೆಸಲಿದ್ದಾರೆ.

ಹೈದರಾಬಾದ್​ನಲ್ಲಿ ಮಂಗಳವಾರ ಹೊರಬಿದ್ದ ಈ ದಿಢೀರ್ ನಿರ್ಧಾರವು ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ. ಇದು ಶರ್ಮಿಳಾರ ಸ್ವಯಂ ತೀರ್ಮಾನವೋ? ಅಥವಾ ಈ ನಿರ್ಧಾರದ ಹಿಂದೆ ಬೇರೆ ಯಾರಾದರೂ ಇದ್ದಾರೆಯೋ? ಈ ಮಹತ್ವದ ತೀರ್ಮಾನದ ಹಿಂದಿನ ಕಾಣದ ಕೈ ಯಾವುದು ಎಂಬ ಪ್ರಶ್ನೆಗಳೂ ಮುತ್ತಿನನಗರಿಯಲ್ಲಿ ಚರ್ಚೆಯಾಗುತ್ತಿವೆ. ತೆಲಂಗಾಣದಲ್ಲಿ ಸತತ 2ನೇ ಬಾರಿಗೆ ಅಧಿಕಾರಕ್ಕೆ ಬಂದ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್​ಎಸ್) ಪಕ್ಷದ ನಾಯಕರ ಎದೆ ಡವಗುಟ್ಟುತ್ತಿದೆ.

Sasikala ವ್ಯಕ್ತಿ-ವ್ಯಕ್ತಿತ್ವ | ಮುಖ್ಯಮಂತ್ರಿ ಗಾದಿ ಸನಿಹದಲ್ಲಿದ್ದಾಗ ಸೆರೆಮನೆಗೆ ಬಂದ ಶಶಿಕಲಾ ಸವೆಸಿದ ಹಾದಿ ಕಲ್ಲುಮುಳ್ಳಿನದು

Published On - 10:13 pm, Tue, 9 February 21

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ