AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Medak: ಮನೆ ಮೇಲ್ಛಾವಣಿ ಕುಸಿದು ಗರ್ಭದಲ್ಲಿದ್ದ ಮಗು ಸಾವು, ತಾಯಿಯ ಸ್ಥಿತಿ ಗಂಭೀರ

ವೈದ್ಯರು ತಪಾಸಣೆ ನಡೆಸಿದಾಗ ಯಾಸ್ಮಿನ್ ಹೊಟ್ಟೆಯಲ್ಲಿ ಭ್ರೂಣ ಸಾವನ್ನಪ್ಪಿರುವುದು ಪತ್ತೆಯಾಗಿದೆ. ಕೂಡಲೇ ಆಕೆಯನ್ನು ಹೈದರಾಬಾದ್‌ಗೆ ಸ್ಥಳಾಂತರಿಸುವಂತೆ ಸೂಚಿಸಲಾಗಿದೆ. ಸದ್ಯ ಆಕೆಯ ಸ್ಥಿತಿ ಚಿಂತಾಜನಕವಾಗಿದೆ.

Medak: ಮನೆ ಮೇಲ್ಛಾವಣಿ ಕುಸಿದು ಗರ್ಭದಲ್ಲಿದ್ದ ಮಗು ಸಾವು, ತಾಯಿಯ ಸ್ಥಿತಿ ಗಂಭೀರ
ಮೇಲ್ಛಾವಣಿ ಕುಸಿದು ಗರ್ಭದಲ್ಲಿದ್ದ ಮಗು ಸಾವು, ತಾಯಿ ಸ್ಥಿತಿ ಗಂಭೀರ
Follow us
ಸಾಧು ಶ್ರೀನಾಥ್​
|

Updated on: Jul 28, 2023 | 8:34 AM

ಮೇಡಕ್, ಜು. 28: ಮನೆಯ ಮೇಲ್ಛಾವಣಿ ಕುಸಿದು ಬಿದ್ದು (house Roof collapse) ಗರ್ಭದಲ್ಲಿದ್ದ ಮಗು (baby in fetus) ಸಾವನ್ನಪ್ಪಿದೆ. ಇನ್ನು, ತಾಯಿಯ (mother) ಸ್ಥಿತಿ ಚಿಂತಾಜನಕವಾಗಿದೆ. ಬುಧವಾರ (ಜುಲೈ 27) ಮೇಡಕ್ (Medak) ಜಿಲ್ಲೆಯಲ್ಲಿರುವ ಮಿಲಿಟರಿ ಕಾಲೋನಿಯಲ್ಲಿ ಈ ದಾರುಣ ಘಟನೆ ನಡೆದಿದೆ. ವಿವರಗಳನ್ನು ನೋಡುವುದಾದರೆ…

ಮೇಡಕ್ ನಿವಾಸಿ ಮೊಹಮ್ಮದ್ ಸರ್ವರ್ ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಅವರ ಎರಡನೇ ಮಗಳು ಯಾಸ್ಮಿನ್ ಸುಲ್ತಾನಾ ಅವರು ಗರ್ಭಿಣಿಯಾಗಿದ್ದರು. ಇನ್ನು 15 ದಿನಗಳಲ್ಲಿ ಹೆರಿಗೆಯಾಗಬೇಕಿತ್ತು. ಅಷ್ಟರಲ್ಲಿ ಭೀಕರ ಅವಘಡ ಸಂಭವಿಸಿದೆ. ಬುಧವಾರ ಮಧ್ಯರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ಭಾರೀ ಮಳೆಗೆ ಮನೆಯ ಮೇಲ್ಛಾವಣಿ ನೆನೆದು, ಏಕಾಏಕಿ ಕುಸಿದು ಬಿದ್ದಿದೆ. ಘಟನೆಯಲ್ಲಿ ಗರ್ಭಿಣಿ ಯಾಸ್ಮಿನ್ ಹಾಗೂ ಆಕೆಯ ತಾಯಿ ಸಹ ಗಂಭೀರವಾಗಿ ಗಾಯಗೊಂಡಿದ್ದಾರೆ. ಕುಟುಂಬಸ್ಥರು ಅವರನ್ನು ಮೇಡಕ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ವೈದ್ಯರು ತಪಾಸಣೆ ನಡೆಸಿದಾಗ ಯಾಸ್ಮಿನ್ ಹೊಟ್ಟೆಯಲ್ಲಿ ಭ್ರೂಣ ಸಾವನ್ನಪ್ಪಿರುವುದು ಪತ್ತೆಯಾಗಿದೆ. ಕೂಡಲೇ ಆಕೆಯನ್ನು ಹೈದರಾಬಾದ್‌ಗೆ ಸ್ಥಳಾಂತರಿಸುವಂತೆ ಸೂಚಿಸಲಾಗಿದೆ. ಸದ್ಯ ಆಕೆಯ ಸ್ಥಿತಿ ಚಿಂತಾಜನಕವಾಗಿದೆ. ಯಾಸ್ಮಿನ್ ಅವರ ತಾಯಿ ಚಾಂದ್ ಸುಲ್ತಾನಾ ಮೇಡಕ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಲ್ಕಾಜಿಗಿರಿ ಶಾಸಕ ಮೈನಂಪಲ್ಲಿ ಹನುಮಂತ ರಾವ್ ಅವರು ಸುಲ್ತಾನ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಿ, ಸ್ಥಳದಲ್ಲೇ ಒಂದು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!