AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ಹೃದಯಾಘಾತದಿಂದ ರಸ್ತೆಯಲ್ಲಿ ಕುಸಿದುಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಟ್ರಾಫಿಕ್ ಪೊಲೀಸ್

ವ್ಯಕ್ತಿಯ ಜೀವವನ್ನು ಉಳಿಸಿದ್ದಕ್ಕಾಗಿ ಪೊಲೀಸ್ ಅಧಿಕಾರಿಗೆ ಧನ್ಯವಾದ ಅರ್ಪಿಸಿದ ಆರೋಗ್ಯ ಸಚಿವರು, ಇಂತಹ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ರಾಜ್ಯ ಸರ್ಕಾರವು ಮುಂಚೂಣಿಯಲ್ಲಿರುವ ಆರೋಗ್ಯ ನೌಕರರು ಮತ್ತು ಕಾರ್ಯಕರ್ತರಿಗೆ ಸಿಪಿಆರ್‌ನಲ್ಲಿ ತರಬೇತಿ ನೀಡಲಿದೆ ಎಂದು ಹೇಳಿದರು.

ತೆಲಂಗಾಣ: ಹೃದಯಾಘಾತದಿಂದ ರಸ್ತೆಯಲ್ಲಿ ಕುಸಿದುಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಟ್ರಾಫಿಕ್ ಪೊಲೀಸ್
CPR ನೀಡುತ್ತಿರುವ ಟ್ರಾಫಿಕ್ ಪೊಲೀಸ್
ರಶ್ಮಿ ಕಲ್ಲಕಟ್ಟ
|

Updated on: Feb 24, 2023 | 6:27 PM

Share

ಹೈದರಾಬಾದ್: ಟ್ರಾಫಿಕ್ ಪೊಲೀಸ್ ಅಧಿಕಾರಿಯ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಹೃದಯಾಘಾತದಿಂದ (Heart Attack) ರಸ್ತೆಯಲ್ಲಿ ಕುಸಿದುಬಿದ್ದ ವ್ಯಕ್ತಿಯೊಬ್ಬರ ಪ್ರಾಣ ಉಳಿಸಿದೆ. ತೆಲಂಗಾಣದ(Telangana) ಹೈದರಾಬಾದ್‌ನಲ್ಲಿ (Hyderabad) ಈ ಘಟನೆ ನಡೆದಿದ್ದು, ಪೊಲೀಸ್ ಅಧಿಕಾರಿ ರಾಜಶೇಖರ್ ಅವರು ಸಿಪಿಆರ್ ಮಾಡುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಕಾರ್ಡಿಯೋಪಲ್ಮನರಿ ರಿಸಸಿಟೇಷನ್ (CPR) ಹೃದಯಾಘಾತದಂಥಾ ತುರ್ತು ಸಂದರ್ಭಗಳಲ್ಲಿ ಉಪಯುಕ್ತವಾದ ಜೀವ ಉಳಿಸುವ ತಂತ್ರವಾಗಿದೆ.

ತೆಲಂಗಾಣ ಆರೋಗ್ಯ ಸಚಿವ ಹರೀಶ್ ರಾವ್ ತಣ್ಣೀರು ಟ್ವೀಟ್ ಮಾಡಿರುವ ವಿಡಿಯೊದಲ್ಲಿ, ಪೊಲೀಸ್ ಅಧಿಕಾರಿ ರಸ್ತೆಯಲ್ಲಿ ಬಿದ್ದಿರುವ ವ್ಯಕ್ತಿಯ ಎದೆಯ ಮೇಲೆ ಬಲವಾಗಿ ಒತ್ತುತ್ತಿರುವುದು ಕಾಣಬಹುದು. ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸೈಬರಾಬಾದ್ ಪೊಲೀಸರು ತಿಳಿಸಿದ್ದಾರೆ.

ವ್ಯಕ್ತಿಯ ಜೀವವನ್ನು ಉಳಿಸಿದ್ದಕ್ಕಾಗಿ ಪೊಲೀಸ್ ಅಧಿಕಾರಿಗೆ ಧನ್ಯವಾದ ಅರ್ಪಿಸಿದ ಆರೋಗ್ಯ ಸಚಿವರು, ಇಂತಹ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ರಾಜ್ಯ ಸರ್ಕಾರವು ಮುಂಚೂಣಿಯಲ್ಲಿರುವ ಆರೋಗ್ಯ ನೌಕರರು ಮತ್ತು ಕಾರ್ಯಕರ್ತರಿಗೆ ಸಿಪಿಆರ್‌ನಲ್ಲಿ ತರಬೇತಿ ನೀಡಲಿದೆ ಎಂದು ಹೇಳಿದರು.

ರಾಜೇಂದ್ರನಗರ ಪೊಲೀಸ್ ಠಾಣೆಯ ಟ್ರಾಫಿಕ್ ಪೋಲೀಸ್ ರಾಜಶೇಖರ್ ಅವರು ತಕ್ಷಣವೇ ಸಿಪಿಆರ್ ಮಾಡುವ ಮೂಲಕ ಅಮೂಲ್ಯವಾದ ಜೀವವನ್ನು ಉಳಿಸುವಲ್ಲಿ ಶ್ಲಾಘನೀಯ ಕೆಲಸ ಮಾಡಿದ್ದು ಅದನ್ನು  ಪ್ರಶಂಸಿಸುತ್ತೇವೆ. ಇಂತಹ ಘಟನೆಗಳ ಹೆಚ್ಚುತ್ತಿರುವ ವರದಿಗಳನ್ನು ಗಮನದಲ್ಲಿಟ್ಟುಕೊಂಡು ತೆಲಂಗಾಣ ಸರ್ಕಾರವು ಮುಂದಿನ ವಾರ ಎಲ್ಲಾ ಮುಂಚೂಣಿ ನೌಕರರು ಮತ್ತು ಕಾರ್ಮಿಕರಿಗೆ ಸಿಪಿಆರ್ ತರಬೇತಿಯನ್ನು ನಡೆಸಲಿದೆ ಎಂದು ತಣ್ಣೀರು ಟ್ವೀಟ್ ಮಾಡಿದ್ದಾರೆ.

ಸಾಮಾಜಿಕ ಮಾಧ್ಯಮ ಯುಗದಲ್ಲಿ ಜಿಮ್‌ಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಕಾರ್ಯಕ್ರಮಗಳಲ್ಲಿ ಹೃದಯಾಘಾತದಿಂದ ಜನರು ಕುಸಿದು ಬೀಳುವ ವಿಡಿಯೊಗಳು ಆಗಾಗ್ಗೆ ಹೊರಹೊಮ್ಮುತ್ತವೆ. ಇದು ವೈದ್ಯಕೀಯ ವೃತ್ತಿಪರರ ನಡುವೆ ಚರ್ಚೆಗೆ ಕಾರಣವಾಗಿದೆ ಮತ್ತು ಯುವ ವಯಸ್ಕರಲ್ಲಿಯೂ ಸಹ ಹೃದಯಾಘಾತವು ಹೆಚ್ಚು ಸಾಮಾನ್ಯವಾಗಿದೆಯೇ ಎಂದು ಸಾರ್ವಜನಿಕ ವೇದಿಕೆಗಳಲ್ಲಿ ಊಹಾಪೋಹಗಳಿಗೆ ಕಾರಣವಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ