AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತನಿಗಿನ್ನೂ 22 ವರ್ಷ, ಸೌದಿ ಅರೇಬಿಯಾದಲ್ಲಿ ವಾರ್ಷಿಕ 58 ಲಕ್ಷ ರೂ ಸಂಬಳದ ದೊಡ್ಡ ಕೆಲಸ ಸಿಕ್ಕಿತ್ತು, ಆದರೆ ಹೃದಯಾಘಾತದಿಂದ ಹಠಾತ್ ಸಾವು!

ತೆಲಂಗಾಣ ರಾಜ್ಯ ವೈದ್ಯಕೀಯ ಸೇವೆಗಳ ಮೂಲಸೌಕರ್ಯ ಅಭಿವೃದ್ಧಿ ನಿಗಮ ವ್ಯವಸ್ಥಾಪಕ ನಿರ್ದೇಶಕ ಕೆ. ಚಂದ್ರಶೇಖರ್ ರೆಡ್ಡಿ ಅವರ ಹಿರಿಯ ಪುತ್ರ ಕಟ್ಟಾ ಅಭಿಜಿತ್ ರೆಡ್ಡಿ ಹೃದಯಾಘಾತದಿಂದ ಚಿಕ್ಕ ವಯಸ್ಸಿಗೇ ಮೃತಪಟ್ಟಿದ್ದಾರೆ. ಅಭಿಜಿತ್ ರೆಡ್ಡಿಗೆ ಇನ್ನೂ 22 ವರ್ಷ ಕೂಡ ಆಗಿಲ್ಲ.

ಆತನಿಗಿನ್ನೂ 22 ವರ್ಷ, ಸೌದಿ ಅರೇಬಿಯಾದಲ್ಲಿ ವಾರ್ಷಿಕ 58 ಲಕ್ಷ ರೂ ಸಂಬಳದ ದೊಡ್ಡ ಕೆಲಸ ಸಿಕ್ಕಿತ್ತು, ಆದರೆ ಹೃದಯಾಘಾತದಿಂದ ಹಠಾತ್ ಸಾವು!
ಆತನಿಗಿನ್ನೂ 22 ವರ್ಷ, ಸೌದಿ ಅರೇಬಿಯಾದಲ್ಲಿ ವಾರ್ಷಿಕ 58 ಲಕ್ಷ ರೂ ಸಂಬಳದ ದೊಡ್ಡ ಕೆಲಸ ಸಿಕ್ಕಿತ್ತು, ಆದರೆ ಹೃದಯಾಘಾತದಿಂದ ಹಠಾತ್ ಸಾವು!
TV9 Web
| Edited By: |

Updated on: Sep 27, 2022 | 2:16 PM

Share

ತೆಲಂಗಾಣ ರಾಜ್ಯ ವೈದ್ಯಕೀಯ ಸೇವೆಗಳ ಮೂಲಸೌಕರ್ಯ ಅಭಿವೃದ್ಧಿ ನಿಗಮ (ಟಿಎಸ್‌ಎಂಎಸ್‌ಐಡಿಸಿ -TSMSIDC) ವ್ಯವಸ್ಥಾಪಕ ನಿರ್ದೇಶಕ ಕೆ. ಚಂದ್ರಶೇಖರ್ ರೆಡ್ಡಿ ಅವರ ಹಿರಿಯ ಪುತ್ರ ಕಟ್ಟಾ ಅಭಿಜಿತ್ ರೆಡ್ಡಿ ಹೃದಯಾಘಾತದಿಂದ ಚಿಕ್ಕ ವಯಸ್ಸಿಗೇ ಮೃತಪಟ್ಟಿದ್ದಾರೆ. ಅಭಿಜಿತ್ ರೆಡ್ಡಿಗೆ ಇನ್ನೂ 22 ವರ್ಷ ಕೂಡ ಆಗಿಲ್ಲ.

ತೆಲಂಗಾಣ ರಾಜ್ಯ ವೈದ್ಯಕೀಯ ಸೇವೆಗಳ ಮೂಲಸೌಕರ್ಯ ಅಭಿವೃದ್ಧಿ ನಿಗಮ (TSMSIDC) ಎಂಡಿ ಕೆ ಚಂದ್ರಶೇಖರ್ ರೆಡ್ಡಿ ಅವರ ಹಿರಿಯ ಪುತ್ರ ಕಟ್ಟಾ ಅಭಿಜಿತ್ ರೆಡ್ಡಿ (22) ಹೃದಯಾಘಾತದಿಂದ ಅಸುನೀಗಿದ್ದಾರೆ. 22 ವರ್ಷವೂ ಇಲ್ಲದ ಅಭಿಜಿತ್ ರೆಡ್ಡಿ ಮೊನ್ನೆ ರಾತ್ರಿ (ಸೆಪ್ಟೆಂಬರ್ 25) ಟಿವಿಯಲ್ಲಿ ಭಾರತ-ಆಸ್ಟ್ರೇಲಿಯಾ ಕ್ರಿಕೆಟ್ ಪಂದ್ಯವನ್ನು ನೋಡುತ್ತಾ ನಿದ್ದೆಗೆ ಜಾರಿದ್ದರು. ಮಧ್ಯರಾತ್ರಿಯ ನಂತರ 2 ಗಂಟೆಯ ಸಮಯದಲ್ಲಿ ಹೃದಯ ನೋವಿನಿಂದ ಅವರು ಇದ್ದಕ್ಕಿದ್ದಂತೆ ಚೀರಾಡಿದ್ದಾರೆ. ತಕ್ಷಣ ಕುಟುಂಬಸ್ಥರು ಆತನನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ, ಅಭಿಜಿತ್ ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ. ಅಭಿಜಿತ್ ವಾರಂಗಲ್ ನಲ್ಲಿ ಕೆಮಿಕಲ್ ಇಂಜಿನಿಯರಿಂಗ್ ಬಿ. ಟೆಕ್ ಓದುತ್ತಿದ್ದ.

ಸೌದಿ ಅರೇಬಿಯಾದ ತೈಲ ಕಂಪನಿ ‘ಸೌದಿ ಅರಾಮ್ಕೊ’ದಲ್ಲಿ ವರ್ಷಕ್ಕೆ 70 ಸಾವಿರ ಡಾಲರ್ (ಸುಮಾರು 58 ಲಕ್ಷ ರೂ.) ವಾರ್ಷಿಕ ಸಂಬಳದ ಕೆಲಸ ಸಿಕ್ಕಿತು. ಮುಂದಿನ ತಿಂಗಳು ಕೆಲಸಕ್ಕೆ ಸೇರುವ ಮುನ್ನ ಹೃದಯಾಘಾತದಿಂದ ಹಠಾತ್ತನೆ ನಿಧನರಾದರು. ಬೆಳೆದ ಮಗ ಕಣ್ಣೆದುರೇ ಕುಸಿದು ಬೀಳುತ್ತಿದ್ದಂತೆ ಚಂದ್ರಶೇಖರ್ ರೆಡ್ಡಿ ದಂಪತಿ ಕಣ್ಣೀರಿಟ್ಟರು. ಚಂದ್ರಶೇಖರ್ ರೆಡ್ಡಿ ಅವರ ಹುಟ್ಟೂರು ನಾಗರ್ ಕರ್ನೂಲ್ ಜಿಲ್ಲೆಯ ಉಪ್ಪುತಾಳ. ಅಭಿಜಿತ್ ಅವರ ಅಕಾಲಿಕ ಮರಣಕ್ಕೆ ತೆಲಂಗಾಣ ರಾಜ್ಯ ಆರೋಗ್ಯ ಸಚಿವ ಹರೀಶ್ ರಾವ್, ಶಾಸಕರಾದ ಡಾ. ಸಿ. ಲಕ್ಷ್ಮರೆಡ್ಡಿ ಮತ್ತು ಈಟಲ ರಾಜೇಂದರ್ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಎಂಎಲ್‌ಸಿ ಪಲ್ಲಾ ರಾಜೇಶ್ವರ್ ರೆಡ್ಡಿ, ಟಿಎಸ್‌ಎಂಎಸ್‌ಎಸ್‌ಐಡಿಸಿ ಅಧ್ಯಕ್ಷ ಎರ್ರೊಳ್ಳ ಶ್ರೀನಿವಾಸ್ ಮತ್ತು ಇತರ ಅಧಿಕಾರಿಗಳು ಚಂದ್ರಶೇಖರ್ ರೆಡ್ಡಿ ಮನೆಗೆ ಭೇಟಿ ನೀಡಿದರು.

ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಬಹಳಷ್ಟು ಯುವಜನತೆ ಸಾವಿಗೀಡಾಗುತ್ತಿದ್ದಾರೆ. ಈ ರೀತಿಯ ಸಾವಿಗೆ ಮುಖ್ಯ ಕಾರಣವೆಂದರೆ ಹೃದಯ ಸ್ನಾಯುವಿನ ದುರ್ಬಲತೆ. ಕೋವಿಡ್‌ನಿಂದ ಚೇತರಿಸಿಕೊಂಡವರಲ್ಲಿಯೂ ಸಹ, ಹೃದಯ ಮತ್ತು ಕಾಲುಗಳ ರಕ್ತನಾಳಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆಯಿಂದ ಸಾವುಗಳು ಸಂಭವಿಸುತ್ತಿವೆ. ಫಿಟ್ನೆಸ್ ಮಾತ್ರೆಗಳನ್ನು ಬಳಸುವವರಿಗೂ ಈ ರೀತಿಯ ಅಪಾಯ ಹೆಚ್ಚು. ವಿಶೇಷವಾಗಿ ದೈಹಿಕ ವ್ಯಾಯಾಮದ ಕೊರತೆ ಇರುವವರಲ್ಲಿ ಹಠಾತ್ ಹೃದಯಾಘಾತ ಸಂಭವಿಸುವ ಸಾಧ್ಯತೆ ಹೆಚ್ಚು. ಅಭಿಜಿತ ರೆಡ್ಡಿ ಅವರ ಸಾವು ಕೂಡ ಹೀಗೆಯೇ ನಡೆದಿದೆ ಎಂದು ಹಿರಿಯ ಹೃದ್ರೋಗ ತಜ್ಞ ಡಾ. ರಮೇಶ ಗುಡಪಾಟಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Follow Us
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!