AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣದಲ್ಲಿ ಸುರಂಗ ಕುಸಿತ; ನಾಪತ್ತೆಯಾಗಿದ್ದ ನಾಲ್ವರು ಪತ್ತೆ

ಶನಿವಾರ ರಾತ್ರಿ ಹೇಳಿಕೆ ನೀಡಿರುವ ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ, 18 ಸಂಸ್ಥೆಗಳು, 54 ಅಧಿಕಾರಿಗಳು ಮತ್ತು 703 ಜನರು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿಸಿದೆ. ಭಾಗಶಃ ಕುಸಿದ ಎಸ್‌ಎಲ್‌ಬಿಸಿ ಸುರಂಗದೊಳಗೆ 1 ವಾರದವರೆಗೆ ಸಿಲುಕಿಕೊಂಡಿದ್ದ 8 ಜನರನ್ನು ಹೊರತೆಗೆಯಲು ನಡೆಸಲಾದ ರಕ್ಷಣಾ ಕಾರ್ಯಾಚರಣೆ ಶನಿವಾರ ಪ್ರಗತಿ ಸಾಧಿಸಿತು. ಇದೀಗ ನಾಪತ್ತೆಯಾದವರಲ್ಲಿ ನಾಲ್ವರು ಎಲ್ಲಿದ್ದಾರೆ ಎಂಬುದು ಪತ್ತೆಯಾಗಿದೆ. ಆದರೆ ತೆಲಂಗಾಣ ಸಚಿವರೊಬ್ಬರು ಅವರು ಬದುಕುಳಿಯುವ ಸಾಧ್ಯತೆಗಳು ಕೇವಲ ಶೇ. 1ರಷ್ಟಿದೆ ಎಂದು ಹೇಳಿದ್ದಾರೆ.

ತೆಲಂಗಾಣದಲ್ಲಿ ಸುರಂಗ ಕುಸಿತ; ನಾಪತ್ತೆಯಾಗಿದ್ದ ನಾಲ್ವರು ಪತ್ತೆ
Telangana Tunnel
ಸುಷ್ಮಾ ಚಕ್ರೆ
|

Updated on: Mar 02, 2025 | 3:29 PM

Share

ಹೈದರಾಬಾದ್ (ಮಾರ್ಚ್ 2): ತೆಲಂಗಾಣದಲ್ಲಿ ಸುರಂಗ ಕುಸಿತವಾಗಿದ್ದು, ಇನ್ನೂ ಕಾರ್ಯಾಚರಣೆ ಮುಂದುವರೆದಿದೆ. ಶನಿವಾರ ನಡೆದ ರಕ್ಷಣಾ ಕಾರ್ಯಾಚರಣೆಯಲ್ಲಿ ರಕ್ಷಣಾ ತಂಡವು ತೆಲಂಗಾಣದ ನಾಗರ್ಕರ್ನೂಲ್‌ನಲ್ಲಿರುವ ಶ್ರೀಶೈಲಂ ಎಡದಂಡೆ ಕಾಲುವೆ (SLBC) ಸುರಂಗದೊಳಗೆ ಸಿಲುಕಿದ್ದ 8 ಜನರಲ್ಲಿ ನಾಲ್ವರು ಎಲ್ಲಿದ್ದಾರೆ ಎಂಬುದನ್ನು ಪತ್ತೆಹಚ್ಚಿದೆ. ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಇಂದು ಸಂಜೆ ಸುರಂಗ ಕುಸಿತವಾದ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಅವರು ರಕ್ಷಣಾ ಕಾರ್ಯಾಚರಣೆಯ ಕುರಿತು ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ.

ತೆಲಂಗಾಣ ರಾಜ್ಯ ಅಬಕಾರಿ ಸಚಿವ ಜೂಪಲ್ಲಿ ಕೃಷ್ಣ ರಾವ್ ಅವರ ಪ್ರಕಾರ,ಇತರ ನಾಲ್ವರು ಜನರು ಸುರಂಗ ಕೊರೆಯುವ ಯಂತ್ರದ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ. ಅವರನ್ನು ಹೊರಗೆ ತರಲು ಸ್ವಲ್ಪ ಸಮಯ ಬೇಕಾಗಬಹುದು. ನಾಲ್ವರನ್ನು ಪತ್ತೆಹಚ್ಚಲಾಗಿದ್ದರೂ ಅವರು ಬದುಕುಳಿಯುವ ಸಾಧ್ಯತೆಗಳು ಬಹಳ ಕಡಿಮೆ ಎನ್ನಲಾಗಿದೆ.

ಇದನ್ನೂ ಓದಿ: ತೆಲಂಗಾಣ ಸುರಂಗ ಕುಸಿತವಾಗಿ 48 ಗಂಟೆ; ದುರಂತದಲ್ಲಿ ಸಿಲುಕಿದ್ದ 8 ಜನ ಬದುಕುಳಿಯುವ ಸಾಧ್ಯತೆ ಕಡಿಮೆ

ಭಾಗಶಃ ಕುಸಿದ ಎಸ್‌ಎಲ್‌ಬಿಸಿ ಸುರಂಗದೊಳಗೆ ಸಿಲುಕಿರುವ ವ್ಯಕ್ತಿಗಳು ಪತ್ತೆಯಾದ ಸ್ಥಳಗಳಲ್ಲಿ ಹೂಳು ತೆಗೆಯುವ ಪ್ರಯತ್ನಗಳನ್ನು ತೀವ್ರಗೊಳಿಸಲಾಗಿದ್ದು, ಸಿಬ್ಬಂದಿ ಮತ್ತು ಸಲಕರಣೆಗಳ ನಿಯೋಜನೆಯನ್ನು ಹೆಚ್ಚಿಸಲಾಗಿದೆ. ಸುರಂಗದ ಕುಸಿತದಿಂದ ಹಾನಿಗೊಳಗಾದ ಕನ್ವೇಯರ್ ಬೆಲ್ಟ್ ಅನ್ನು ಸೋಮವಾರದೊಳಗೆ ದುರಸ್ತಿ ಮಾಡುವ ನಿರೀಕ್ಷೆಯಿದೆ.

ಫೆಬ್ರವರಿ 22ರಂದು ಸುರಂಗ ಕುಸಿತವಾಗಿತ್ತು. ಆ ಸುರಂಗದಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ಮನೋಜ್ ಕುಮಾರ್ (ಉತ್ತರ ಪ್ರದೇಶ), ಶ್ರೀನಿವಾಸ್ (ಉತ್ತರ ಪ್ರದೇಶ), ಸನ್ನಿ ಸಿಂಗ್ (ಜಮ್ಮು ಮತ್ತು ಕಾಶ್ಮೀರ), ಗುರುಪ್ರೀತ್ ಸಿಂಗ್ (ಪಂಜಾಬ್), ಮತ್ತು ಜಾರ್ಖಂಡ್ ರಾಜ್ಯದ ಸಂದೀಪ್ ಸಾಹು, ಜೆಗ್ತಾ ಕ್ಸೆಸ್, ಸಂತೋಷ್ ಸಾಹು, ಅನುಜ್ ಸಾಹು ಎಂದು ಗುರುತಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ