AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch Video: ತೃತೀಯಲಿಂಗಿಯೊಬ್ಬಳ ಪ್ರೇಮಪಾಶಕ್ಕೆ ಸಿಲುಕಿದ ವ್ಯಕ್ತಿ, ಮದುವೆಯ ನಂತರ ಪೊಲೀಸರ ಮೊರೆ ಹೋದ ಜೋಡಿ: ಮುಂದೇನಾಯ್ತು?

ಮೊನ್ನೆಯಷ್ಟೇ ತೆಲಂಗಾಣದಲ್ಲಿ ಇಂತಹದ್ದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಜಗಿತ್ಯಾಲ್ ಹರ್ಷದ್ ಅವರನ್ನು ವೀನವಂಕಕ್ಕೆ ಸೇರಿದ ಲಿಂಗ ಬದಲಾಯಿಸಿಕೊಂಡ ದಿವ್ಯಾ ಅವರನ್ನು ವಿವಾಹವಾದರು. ಹರ್ಷದ್ 5 ವರ್ಷಗಳ ಹಿಂದೆ ಜಗಿತ್ಯಾಲ್ ನಲ್ಲಿ ಭೇಟಿಯಾಗಿದ್ದರು. ಕ್ರಮೇಣ ಅವರ ಸ್ನೇಹ ಪ್ರೀತಿಗೆ ತಿರುಗಿತು. ನಂತರ ಇಬ್ಬರೂ ಮದುವೆಯಾಗಲು ನಿರ್ಧರಿಸಿದರು.

Watch Video: ತೃತೀಯಲಿಂಗಿಯೊಬ್ಬಳ ಪ್ರೇಮಪಾಶಕ್ಕೆ ಸಿಲುಕಿದ ವ್ಯಕ್ತಿ, ಮದುವೆಯ ನಂತರ ಪೊಲೀಸರ ಮೊರೆ ಹೋದ ಜೋಡಿ: ಮುಂದೇನಾಯ್ತು?
ತೃತೀಯಲಿಂಗಿಯೊಬ್ಬಳ ಪ್ರೇಮಪಾಶಕ್ಕೆ ಸಿಲುಕಿದ ವ್ಯಕ್ತಿ, ಮದುವೆಯ ನಂತರ ಪೊಲೀಸರ ಮೊರೆ ಹೋದ ಜೋಡಿ
ಸಾಧು ಶ್ರೀನಾಥ್​
|

Updated on: Nov 07, 2023 | 11:11 AM

Share

ಮಂಗಳಮುಖಿ/ ತೃತೀಯಲಿಂಗಿ ಪ್ರೇಮ ವಿವಾಹಕ್ಕೆ ಸಂಬಂಧಿಸಿದ ಕರುಣಾಜನಕ ಕಥೆಯೊಂದು ಬೆಳಕಿಗೆ ಬಂದಿದೆ. ದೇಶದಲ್ಲಿ ಸಲಿಂಗ ವಿವಾಹಗಳನ್ನು ಸುಪ್ರೀಂ ಕೋರ್ಟ್ ನಿಷೇಧಿಸಿದೆ. ನ್ಯಾಯಾಲಯದ ಇತ್ತೀಚಿನ ತೀರ್ಪಿನ ನಂತರ, ಸಲಿಂಗ ದಂಪತಿಯ ವಿವಾಹಕ್ಕೆ ಕಾನೂನು ಮಾನ್ಯತೆ ಇರುವುದಿಲ್ಲ. ಇದೇ ವೇಳೆ ತೆಲಂಗಾಣದಲ್ಲಿ ವಿಶೇಷ ಘಟನೆಯೊಂದು ಬೆಳಕಿಗೆ ಬಂದಿದೆ. ಯುವಕನೊಬ್ಬ ತೃತೀಯಲಿಂಗಿಯೊಬ್ಬಳನ್ನು ಪ್ರೀತಿಸತೊಡಗಿದ. ಪ್ರೀತಿಗಾಗಿ ಸಮಾಜದ ಸಂಕೋಲೆಯನ್ನು ಮುರಿಯಲು ಸಿದ್ದನಾದ. ಈ ಪ್ರೀತಿ ಚಿಗುರೊಡೆಯುತ್ತಿದ್ದಂತೆ ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದರು. ಆದರೆ ಇದೀಗ ದಂಪತಿ ಪೊಲೀಸರಿಂದ ರಕ್ಷಣೆ (Protection) ಕೋರಿದ್ದಾರೆ. ತೆಲಂಗಾಣದ ಖಮ್ಮಮ್​​ನ ಗಣೇಶ್ ಎಂಬ ವ್ಯಕ್ತಿ ಆಂಧ್ರಪ್ರದೇಶದ ನಂದಿಗಾಮದ ಲಿಂಗಮಾರ್ಪಡಿಸಿಕೊಂಡ ದೀಪು ಎಂಬುವರನ್ನು ಮದುವೆಯಾಗಿದ್ದಾರೆ. ಮದುವೆಗೆ (Marriage) ಮುನ್ನ ದಂಪತಿ ಸುಮಾರು ಒಂದು ವರ್ಷ ಪ್ರೀತಿಸುತ್ತಿದ್ದರು. ದಂಪತಿ (Transgender Couple) ಹೈದರಾಬಾದ್‌ನಲ್ಲಿ ಆಗಾಗ್ಗೆ ಭೇಟಿಯಾಗಲು ಪ್ರಾರಂಭಿಸಿದರು. ನಂತರ ಇಬ್ಬರೂ ಮದುವೆಯಾಗಲು ನಿರ್ಧರಿಸಿದರಂತೆ.

ಈ ಮದುವೆಗೆ ಇಬ್ಬರ ಮನೆಯವರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಆ ಜೋಡಿ ತಮ್ಮ ಜೀವವು ಅಪಾಯದಲ್ಲಿದೆ ಎಂಬುದನ್ನು ಅರಿತು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಬಯಸಿದ್ದಾರೆ. ಹಾಗಾಗಿ ಮದುವೆಯ ನಂತರ ಗಣೇಶ ಮತ್ತು ದೀಪು ಇತ್ತೀಚೆಗೆ ತಮ್ಮ ಸುರಕ್ಷತೆಗಾಗಿ ಪೊಲೀಸರನ್ನು ಸಂಪರ್ಕಿಸಿದ್ದಾರೆ. ಆದರೆ ಸುಪ್ರೀಂಕೋರ್ಟ್​ ತೀರ್ಪಿನ ಸಮ್ಮುಖದಲ್ಲಿ ಪೊಲೀಸರು ಅಸಹಾಯಕರಾಗಿದ್ದಾರೆ. ಈ ನಡುವೆ ಇವರಿಬ್ಬರ ಪ್ರೇಮ ವಿವಾಹದ ಸುದ್ದಿ ಸಾಮಾಜಿಕ ಜಾಲತಾಣದಲ್ಲಿಯೂ ವೈರಲ್ ಆಗಿದೆ. ಅವರ ಕಥೆ ತಿಳಿದ ನಂತರ ಅನೇಕ ನೆಟಿಜನ್‌ಗಳು ನಾನಾ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಮೊನ್ನೆಯಷ್ಟೇ ತೆಲಂಗಾಣದಲ್ಲಿ ಇಂತಹದ್ದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಜಗಿತ್ಯಾಲ್ ಹರ್ಷದ್ ಅವರನ್ನು ವೀನವಂಕಕ್ಕೆ ಸೇರಿದ ಲಿಂಗ ಬದಲಾಯಿಸಿಕೊಂಡ ದಿವ್ಯಾ ಅವರನ್ನು ವಿವಾಹವಾದರು. ಹರ್ಷದ್ 5 ವರ್ಷಗಳ ಹಿಂದೆ ಜಗಿತ್ಯಾಲ್ ನಲ್ಲಿ ಭೇಟಿಯಾಗಿದ್ದರು. ಕ್ರಮೇಣ ಅವರ ಸ್ನೇಹ ಪ್ರೀತಿಗೆ ತಿರುಗಿತು. ನಂತರ ಇಬ್ಬರೂ ಮದುವೆಯಾಗಲು ನಿರ್ಧರಿಸಿದರು.

ಆದರೆ, ಈ ಹಿಂದೆ ಇದೇ ರೀತಿಯ ವಿವಾಹಗಳ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಸಲಿಂಗ ವಿವಾಹಗಳಿಗೆ ಸಾಂವಿಧಾನಿಕ ಸಿಂಧುತ್ವವನ್ನು ನೀಡುವುದನ್ನು ವಿರೋಧಿಸಿ 3:2 ಮತದೊಂದಿಗೆ ತೀರ್ಪು ನೀಡಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್‌ನಿಂದ ಕಾನೂನು ಮಾಡುವುದಕ್ಕಿಂತ ಸಂಸತ್ತಿನಲ್ಲಿ ಕಾನೂನು ರಚಿಸಬೇಕಾಗಿದೆ ಎಂದೂ ಸಲಹೆ ನಿಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್