AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಖಾಸಗಿ ಟೆಲಿಕಾಂ ಕಂಪನಿಗಳಿಗೆ ಶಾಕ್, ಮತ್ತಷ್ಟು ಹೆಚ್ಚಾಗಲಿದೆ ನಿರುದ್ಯೋಗ

ಒಂದ್ಕಡೆ ಏರುತ್ತಿರುವ ಸಾಲದ ಮೊತ್ತ. ಮತ್ತೊಂದ್ಕಡೆ ಸಾವಿರಾರು ಕೋಟಿ ದಂಡ ಪಾವತಿಸಬೇಕಾದ ಅನಿವಾರ್ಯತೆ. ಅಂದಹಾಗೆ ದೇಶದ ಟೆಲಿಕಾಂ ಕಂಪನಿಗಳು ಮಾಡಿಕೊಂಡಿರೋ ಎಡವಟ್ಟು, ಅದೇ ಸಂಸ್ಥೆಗಳಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇದು ನಿರುದ್ಯೋಗ ಸಮಸ್ಯೆಯನ್ನ ಮತ್ತಷ್ಟು ಹೆಚ್ಚಾಗುವಂತೆ ಮಾಡುತ್ತಿದೆ. ಸುಪ್ರೀಂಕೋರ್ಟ್ ಆದೇಶ ಪಾಲಿಸದೆ ಸಂಕಷ್ಟಕ್ಕೆ ಸಿಲುಕಿರುವ ಭಾರತದ ಖಾಸಗಿ ಟೆಲಿಕಾಂ ಸಂಸ್ಥೆಗಳು. ಈಗ ಬಾಗಿಲು ಮುಚ್ಚುವ ಹಂತ ತಲುಪಿವೆ. ಇದು ಟೆಲಿಕಾಂ ಸಂಸ್ಥೆಗಳಿಗೆ ಮಾತ್ರ ತೊಂದ್ರೆ ಉಂಟುಮಾಡ್ತಿಲ್ಲ. ಆದರ ಜೊತೆಗೆ ಭಾರತದಲ್ಲಿ ನಿರುದ್ಯೋಗ ಸಮಸ್ಯೆಗೂ ನಾಂದಿ ಹಾಡುತ್ತಿದೆ. […]

ಭಾರತದ ಖಾಸಗಿ ಟೆಲಿಕಾಂ ಕಂಪನಿಗಳಿಗೆ ಶಾಕ್, ಮತ್ತಷ್ಟು ಹೆಚ್ಚಾಗಲಿದೆ ನಿರುದ್ಯೋಗ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Feb 16, 2020 | 8:02 AM

Share

ಒಂದ್ಕಡೆ ಏರುತ್ತಿರುವ ಸಾಲದ ಮೊತ್ತ. ಮತ್ತೊಂದ್ಕಡೆ ಸಾವಿರಾರು ಕೋಟಿ ದಂಡ ಪಾವತಿಸಬೇಕಾದ ಅನಿವಾರ್ಯತೆ. ಅಂದಹಾಗೆ ದೇಶದ ಟೆಲಿಕಾಂ ಕಂಪನಿಗಳು ಮಾಡಿಕೊಂಡಿರೋ ಎಡವಟ್ಟು, ಅದೇ ಸಂಸ್ಥೆಗಳಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇದು ನಿರುದ್ಯೋಗ ಸಮಸ್ಯೆಯನ್ನ ಮತ್ತಷ್ಟು ಹೆಚ್ಚಾಗುವಂತೆ ಮಾಡುತ್ತಿದೆ.

ಸುಪ್ರೀಂಕೋರ್ಟ್ ಆದೇಶ ಪಾಲಿಸದೆ ಸಂಕಷ್ಟಕ್ಕೆ ಸಿಲುಕಿರುವ ಭಾರತದ ಖಾಸಗಿ ಟೆಲಿಕಾಂ ಸಂಸ್ಥೆಗಳು. ಈಗ ಬಾಗಿಲು ಮುಚ್ಚುವ ಹಂತ ತಲುಪಿವೆ. ಇದು ಟೆಲಿಕಾಂ ಸಂಸ್ಥೆಗಳಿಗೆ ಮಾತ್ರ ತೊಂದ್ರೆ ಉಂಟುಮಾಡ್ತಿಲ್ಲ. ಆದರ ಜೊತೆಗೆ ಭಾರತದಲ್ಲಿ ನಿರುದ್ಯೋಗ ಸಮಸ್ಯೆಗೂ ನಾಂದಿ ಹಾಡುತ್ತಿದೆ.

ಟೆಲಿಕಾಂ ಸಂಸ್ಥೆಗಳ ಎಡವಟ್ಟು, ಭಾರತದಲ್ಲಿ ಮತ್ತಷ್ಟು ನಿರುದ್ಯೋಗ!? ಅಂದಹಾಗೆ ಟೆಲಿಕಾಂ ಕಂಪನಿಗಳಿಗೆ ಎಜಿಆರ್ ಮೊತ್ತವಾಗಿ ಕೇಂದ್ರ ಸರ್ಕಾರಕ್ಕೆ ₹92 ಸಾವಿರ ಕೋಟಿ ಪಾವತಿ ಮಾಡುವಂತೆ ಸುಪ್ರೀಂ ಸೂಚಿಸಿತ್ತು. ಆದರೆ ಅದನ್ನು ಪಾಲಿಸದ ಟೆಲಿಕಾಂ ಕಂಪನಿಗಳಿಗೆ ಬಡ್ಡಿ ಸಮೇತ ₹1.47 ಲಕ್ಷ ಕೋಟಿ ಪಾವತಿಸಲು ಸೂಚಿಸಲಾಗಿದೆ. ನಷ್ಟದ ಸುಳಿಯಲ್ಲಿ ಸಿಲುಕಿರುವ ಖಾಸಗಿ ಟೆಲಿಕಾಂ ಕಂಪನಿಗಳನ್ನ ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ.

ಈ ಮಧ್ಯೆ ನಿರುದ್ಯೋಗ ಸಮಸ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ವೋಡಾಫೋನ್ ಹಾಗೂ ಐಡಿಯಾ 11,700 ಜನರಿಗೆ ನೇರ ಉದ್ಯೋಗ, 1 ಲಕ್ಷ ಜನಕ್ಕೆ ಪರೋಕ್ಷ ಉದ್ಯೋಗ ನೀಡಿದೆ. ವೋಡಾಪೋನ್ ಐಡಿಯಾ ಬಾಗಿಲು ಮುಚ್ಚಿದ್ರೆ ನಿರುದ್ಯೋಗದ ಸಮಸ್ಯೆ ಕಾಡಲಿದೆ. ರಿಲಯನ್ಸ್ ಕಮ್ಯೂನಿಕೇಷನ್ ಸಂಸ್ಥೆಯ ಅನಿಲ್ ಅಂಬಾನಿ ಪ್ರಕಾರ, ಭಾರತದ ಟೆಲಿಕಾಂ ಕ್ಷೇತ್ರ 20 ಲಕ್ಷ ಉದ್ಯೋಗವನ್ನು ಕಡಿತ ಮಾಡಲಿದೆ. ಭಾರತದ ಟೆಲಿಕಾಂ ಮಾರುಕಟ್ಟೆಯಲ್ಲಿ ರಿಲಯನ್ಸ್ ಜಿಯೋ ಹಾಗೂ ಏರ್ ಟೆಲ್ ಕಂಪನಿಗಳು ಮಾತ್ರ ಉಳಿದುಕೊಳ್ಳುತ್ತವಂತೆ.

ಸಾಲದ ಸುಳಿಗೆ ಸಿಲುಕುತ್ತಾ ‘ಏರ್​ಟೆಲ್’..? ಇನ್ನು ವೋಡಾಫೋನ್, ಐಡಿಯಾ ಬಾಗಿಲು ಮುಚ್ಚಿದ್ರೆ ಭಾರತದ ಟೆಲಿಕಾಂ ಮಾರುಕಟ್ಟೆಯಲ್ಲಿ ಕೇವಲ ಎರಡೇ ಖಾಸಗಿ ಕಂಪನಿಗಳ ದರ್ಬಾರ್ ಶುರುವಾಗುತ್ತೆ. ಏರ್​ಟೆಲ್ ಕಂಪನಿಗೂ ಲಾಭವಾಗಲ್ಲ. ಏರ್​ಟೆಲ್‌ ತನ್ನ ಕಾಲ್ ದರ ಹಾಗೂ ಸೇವಾದರ ಏರಿಕೆ ಮಾಡಬಹುದು. ಬಳಿಕ ಮೊಬೈಲ್ ಕಾಲ್ ದರ ಹಾಗೂ ಸೇವಾದರವು ಶೇಕಡಾ 10ರಿಂದ 15 ರಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಭಾರತಿ ಏರ್​ಟೆಲ್ ಸಾಲದ ಸುಳಿಗೆ ಸಿಲುಕುವ ಸಾಧ್ಯತೆ ದಟ್ಟವಾಗಿದೆ.

ಒಂದ್ಕಡೆ ಆರ್ಥಿಕ ಸಂಕಷ್ಟ, ಮತ್ತೊಂದ್ಕಡೆ ದಿನೇ ದಿನೆ ಹೆಚ್ಚಾಗ್ತಿರುವ ನಿರುದ್ಯೋಗ ಸಮಸ್ಯೆ. ಇದೆಲ್ಲದರ ಮಧ್ಯೆ ಟೆಲಿಕಾಂ ಕಂಪನಿಗಳು ಬಾಗಿಲು ಮುಚ್ಚುವ ಪರಿಸ್ಥಿತಿ. ಒಟ್ನಲ್ಲಿ ಗಾಯದ ಮೇಲೆ ಬರೆ ಎಳೆದಂತೆ ಟೆಲಿಕಾಂ ಕಂಪೆನಿಗಳು ಸಂಕಷ್ಟದ ಸುಳಿಗೆ ಸಿಲುಕಿವೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?