AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಸಿಮ್ ಖರೀದಿ ಸಂಪೂರ್ಣ ಡಿಜಿಟಲೈಸ್, ಫಾರಂ ಭರ್ತಿ ಬೇಕಿಲ್ಲ: ಟೆಲಿಕಾಂ ಸಚಿವ ಅಶ್ವಿನ್ ವೈಷ್ಣವ್ ಘೋಷಣೆ

Telecom Reforms: ಮೊಬೈಲ್ ನಂಬರ್ ಕೆವೈಸಿ ಪ್ರಕ್ರಿಯೆ ಸರಳೀಕರಣ ಮಾಡಲಿದ್ದೇವೆ. ಪ್ರೀಪೇಯ್ಡ್ ನಿಂದ ಪೋಸ್ಟ್ ಪೇಯ್ಡ್ ಗೆ ಬದಲಾದಾಗ ಕೆವೈಸಿ ಹೆಚ್ಚುವರಿ ದಾಖಲೆ ಬೇಕಿಲ್ಲ ಎಂದು ಅವರು ತಿಳಿಸಿದರು.

ಹೊಸ ಸಿಮ್ ಖರೀದಿ ಸಂಪೂರ್ಣ ಡಿಜಿಟಲೈಸ್, ಫಾರಂ ಭರ್ತಿ ಬೇಕಿಲ್ಲ: ಟೆಲಿಕಾಂ ಸಚಿವ ಅಶ್ವಿನ್ ವೈಷ್ಣವ್ ಘೋಷಣೆ
ಅಶ್ವಿನಿ ವೈಷ್ಣವ್
TV9 Web
| Edited By: |

Updated on:Sep 15, 2021 | 4:33 PM

Share

ದೆಹಲಿ: ಹೊಸ ಸಿಮ್ ಕಾರ್ಡ್ ಪಡೆಯಲು ಯಾವುದೇ ಫಾರಂ ಭರ್ತಿ ಮಾಡುವ ಅಗತ್ಯವಿಲ್ಲ. ಹೊಸ ಸಿಮ್ ಕಾರ್ಡ್ ಕೊಳ್ಳುವ ಪ್ರಕ್ರಿಯೆ ಇನ್ನುಮುಂದೆ ಸಂಪೂರ್ಣ ಡಿಜಿಟಲೈಸ್ ಆಗಿರುತ್ತದೆ ಎಂದು (ಸೆಪ್ಟೆಂಬರ್ 15) ನಡೆದ ಕೇಂದ್ರದ ಕ್ಯಾಬಿನೆಟ್ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈಕುರಿತು ಕೇಂದ್ರದ ಟೆಲಿಕಾಂ ಖಾತೆ ಸಚಿವ ಅಶ್ವಿನ್ ವೈಷ್ಣವ್ ಪತ್ರಿಕಾಗೋಷ್ಠಿ ನಡೆಸಿ ಘೋಷಿಸಿದರು.ಮೊಬೈಲ್ ಸಿಮ್ ಕಾರ್ಡ್ ದಾಖಲೆಗಳು, ಕೆವೈಸಿ ಎಲ್ಲವೂ ಡಿಜಿಟಲೈಜ್ ಆಗಿರಲಿದೆ. ಮೊಬೈಲ್ ನಂಬರ್ ಕೆವೈಸಿ ಪ್ರಕ್ರಿಯೆ ಸರಳೀಕರಣ ಮಾಡಲಿದ್ದೇವೆ. ಪ್ರೀಪೇಯ್ಡ್ ನಿಂದ ಪೋಸ್ಟ್ ಪೇಯ್ಡ್ ಗೆ ಬದಲಾದಾಗ ಕೆವೈಸಿ ಹೆಚ್ಚುವರಿ ದಾಖಲೆ ಬೇಕಿಲ್ಲ. 4G, 5G ಟೆಕ್ನಾಲಜಿಯನ್ನು ಭಾರತದಲ್ಲಿ ತಯಾರಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.

ಕ್ಯಾಬಿನೆಟ್ ಸಭೆಯ ತೀರ್ಮಾನಗಳ ವಿವರ ನಾನ್ ಟೆಲಿಕಾಂ ಆದಾಯವನ್ನು ಎಜಿಆರ್ನಿಂದ ಹೊರಗಿಡಲಾಗುತ್ತದೆ. ನಾನ್ ಟೆಲಿಕಾಂ ಆದಾಯವು ಇನ್ನೂ ಮುಂದೆ ಎಜಿಆರ್ ಭಾಗವಾಗಿರುವುದಿಲ್ಲ. 20 ವರ್ಷದ ಬಳಿಕ ಸ್ಪೆಕ್ಟ್ರಮ್ ಅನ್ನು ಸರೆಂಡರ್ ಮಾಡಬಹುದು. ಸ್ಪೆಕ್ಟ್ರಮ್ ಕ್ಷೇತ್ರದಲ್ಲಿ ಶೇಕಡಾ 100ರಷ್ಟು ವಿದೇಶಿ‌ ನೇರ ಬಂಡವಾಳ ಹೂಡಿಕೆಗೆ ಒಪ್ಪಿಗೆ ನೀಡಲಾಗಿದೆ.

ಟೆಲಿಕಾಂ ಕಂಪನಿಗಳ ಎಜಿಆರ್ ಬಾಕಿ ಹಣದ ಪಾವತಿಗೆ ನಾಲ್ಕು ವರ್ಷಗಳ ಮಾರಾಟೋರಿಯಂಗೆ ಒಪ್ಪಿಗೆ ನೀಡಿದೆ. ಆದರೆ ಮಾರಾಟೋರಿಯಂನ‌ 4 ವರ್ಷದ ಅವಧಿಯ ಬಡ್ಡಿಯನ್ನು ಪಾವತಿಸಬೇಕು ಎಂದು ತಿಳಿಸಿರುವ ಅವರ ಘೋಷಣೆಯಿಂದ ಕೇಂದ್ರ ಸರ್ಕಾರ ವೋಡಾಪೋನ್ ಐಡಿಯಾ ಸೇರಿದಂತೆ ಟೆಲಿಕಾಂ ಕಂಪನಿಗಳಿಗೆ ಬಿಗ್ ರಿಲೀಫ್ ನೀಡಿದೆ.

ಟೆಲಿಕಾಂ ಕ್ಷೇತ್ರದಲ್ಲಿ ಆರೋಗ್ಯಕರ ಸ್ಪರ್ಧೆ ಇರಬೇಕು. ಹೆಚ್ಚಿನ ಕಂಪನಿಗಳು ಟೆಲಿಕಾಂ ಕ್ಷೇತ್ರದಲ್ಲಿ ಇರಬೇಕು ಎನ್ನುವುದು ಸರ್ಕಾರದ ಬಯಕೆಯಾಗಿದೆ. ಟೆಲಿಕಾಂ ಕ್ಷೇತ್ರದಲ್ಲಿ ಸ್ಪರ್ಧೆ ಇರಬೇಕು. ಗ್ರಾಹಕರಿಗೆ ಕಂಪನಿ ಸೇವೆ ಆಯ್ಕೆ ಮಾಡಿಕೊಳ್ಳಲು ಅವಕಾಶ ಇರಬೇಕು. ಮಾರಾಟೋರಿಯಂ ಅವಧಿಯಲ್ಲಿ ಮೊತ್ತದ ಬಡ್ಡಿ ಪಾವತಿಸುವುದರಿಂದ ಸರ್ಕಾರದ ಆದಾಯಕ್ಕೆ ರಕ್ಷಣೆ ಸಿಗಲಿದೆ. ಮಾರಾಟೋರಿಯಂ ಸೌಲಭ್ಯ ಇಡೀ ಟೆಲಿಕಾಂ ಕ್ಷೇತ್ರಕ್ಕೆ ಅನ್ವಯವಾಗಲಿದೆ.

ಆಟೋಮೊಬೈಲ್ ಕ್ಷೇತ್ರಕ್ಕೆ ಉತ್ಪಾದನೆ ಆಧರಿತ ಪೋತ್ಸಾಹಧನ ಯೋಜನೆ ಘೋಷಣೆ ಮಾಡಲಾಗಿದೆ. 5 ವರ್ಷಗಳ ಕಾಲ ಪಿಎಲ್ಐ ಸ್ಕೀಮ್ ಜಾರಿಗೊಳಿಸಲಾಗಿದೆ. ಇದರಿಂದಾಗಿ ಹೆಚ್ಚುವರಿ 7.6 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ಪಿಎಲ್ಐ ಸ್ಕೀಮ್ ನಿಂದ ಆಟೋಮೊಬೈಲ್ ಕ್ಷೇತ್ರದಲ್ಲಿ 42,500 ಕೋಟಿ ರೂಪಾಯಿ ಹೂಡಿಕೆ ನಿರೀಕ್ಷೆಯಿದೆ. ಡ್ರೋನ್ ಕ್ಷೇತ್ರದಲ್ಲಿ ಐದು ಸಾವಿರ ಕೋಟಿ ರೂಪಾಯಿ ಬಂಡವಾಳ ಆಕರ್ಷಣೆಯ ಗುರಿಯಿದೆ. ಡ್ರೋನ್ ಉತ್ಪಾದನೆಗೆ ಉತ್ಪಾದನೆ ಆಧರಿತ ಪೋತ್ಸಾಹಧನ ಯೋಜನೆ ಜಾರಿಗೊಳಿಸುತ್ತೇವೆ ಎಂದು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದ ಅನುರಾಗ್ ಠಾಕೂರ್ ತಿಳಿಸಿದರು.

ಇದನ್ನೂ ಓದಿ: 

ಜಿಯೋಗೆ ಕ್ರಾಂತಿಕಾರಿ 5 ವರ್ಷ: ಅಗ್ಗವಾಗಿಸಿದ ಮೊಬೈಲ್​ ಸೇವೆ, ಟೆಲಿಕಾಂ ಗ್ರಾಹಕರಿಗೆ ಹರ್ಷವೋ ಹರ್ಷ- ಭವಿಷ್ಯ ಇನ್ನೂ ಆಶಾದಾಯಕ

JioPhone Next: ಗಣೇಶ ಚತುರ್ಥಿಗೆ ಇದ್ದ ಜಿಯೋಫೋನ್​ ನೆಕ್ಸ್ಟ್ ಬಿಡುಗಡೆ ದೀಪಾವಳಿಗೆ ಮುಂದಕ್ಕೆ

(Telecom Reforms Minister Ashwini Vaishnav announce 100 percent FDI in telecom sim card buying process is fully digitalized in future)

Published On - 4:18 pm, Wed, 15 September 21

Follow Us
Web contact
Web contact

TV9 Kannada

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!