AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಾಲಯದ ಮಾಲೀಕತ್ವದ ವಿವಾದ; ಅಯೋಧ್ಯೆಯಲ್ಲಿ ಸಾಧು ಮೇಲೆ ಹಲ್ಲೆ ನಡೆಸಿದ ಜನರ ಗುಂಪು, ಕೃತ್ಯ ವಿಡಿಯೊದಲ್ಲಿ ಸೆರೆ

ಪೊಲೀಸರ ಪ್ರಕಾರ, ನಗರದ ಗುಪ್ತರ್ ಘಾಟ್ ಬಳಿ 20 ಕ್ಕೂ ಹೆಚ್ಚು ಜನರ ಗುಂಪು ಮಹಂತ್ ಚತುರ್ಭುಜ್ ದಾಸ್ ಅಲಿಯಾಸ್ ಚಂದಾ ಮೇಲೆ ಹಲ್ಲೆ ನಡೆಸಿದೆ. ಹಳೆ ಆಸ್ತಿ ವಿವಾದವೇ ದಾಳಿಗೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ.

ರಶ್ಮಿ ಕಲ್ಲಕಟ್ಟ
|

Updated on: Jul 28, 2023 | 2:31 PM

Share

ಲಕ್ನೋ ಜುಲೈ 28: ನ್ಯಾಯಾಲಯದಿಂದ ಅನುಮತಿ ಪಡೆದುಕೊಂಡು ಕೇಂದ್ರ ಸರ್ಕಾರ ರಾಮಮಂದಿರ ನಿರ್ಮಾಣವನ್ನು ಘೋಷಿಸಿದ ನಂತರ ಅಯೋಧ್ಯೆಯಲ್ಲಿನ (Ayodhya) ಆಸ್ತಿ ದರದಲ್ಲಿ ಭಾರಿ ಏರಿಕೆ ಕಂಡಿದೆ. ಆಸ್ತಿ ದರಗಳಲ್ಲಿನ ಹಠಾತ್ ಏರಿಕೆ ಸ್ಥಳೀಯರಿಗೆ ಆರ್ಥಿಕವಾಗಿ ಸಹಾಯ ಮಾಡಿದರೆ, ಆಸ್ತಿ ಸಂಬಂಧಿತ ವಿವಾದಗಳ ಸಂಖ್ಯೆಯಲ್ಲೂ ಹೆಚ್ಚಳವಾಗಿದೆ. ಆಸ್ತಿಗೆ ಸಂಬಂಧಿಸಿದ  ಪ್ರಕರಣವೊಂದರಲ್ಲಿ ಇಲ್ಲಿನ ದೇವಸ್ಥಾನವೊಂದರ ಮಾಲೀಕತ್ವದ (Temple ownership dispute) ವಿಚಾರವಾಗಿ ಜನರ ಗುಂಪೊಂದು ಸಾಧುವಿನ ಮೇಲೆ ಗಂಭೀರ ಹಲ್ಲೆ ನಡೆಸಿದೆ.

ಪೊಲೀಸರ ಪ್ರಕಾರ, ನಗರದ ಗುಪ್ತರ್ ಘಾಟ್ ಬಳಿ 20 ಕ್ಕೂ ಹೆಚ್ಚು ಜನರ ಗುಂಪು ಮಹಂತ್ ಚತುರ್ಭುಜ್ ದಾಸ್ ಅಲಿಯಾಸ್ ಚಂದಾ ಮೇಲೆ ಹಲ್ಲೆ ನಡೆಸಿದೆ. ಹಳೆ ಆಸ್ತಿ ವಿವಾದವೇ ದಾಳಿಗೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ.

ಜುಲೈ 24 ರಂದು ರಾತ್ರಿ 9.45 ರ ಸುಮಾರಿಗೆ ಆರತಿಯಲ್ಲಿ ಭಾಗವಹಿಸಿ ಗುಪ್ತರ್ ಘಾಟ್‌ನಿಂದ ಹಿಂದಿರುಗುತ್ತಿದ್ದಾಗ ವಿಮಲ್ ದಾಸ್, ಮಿಥಿಲೇಶ್ ಮತ್ತು ರಾಕೇಶ್ ನಿಶಾದ್ ಸೇರಿದಂತೆ 20 ಕ್ಕೂ ಹೆಚ್ಚು ಜನರ ತಂಡವು ತನ್ನ ಮೇಲೆ ದಾಳಿ ಮಾಡಿದೆ ಎಂದು ಮಹಂತ್ ಚತುರ್ಭುಜ್ ದಾಸ್ ತಮ್ಮ ಎಫ್‌ಐಆರ್‌ನಲ್ಲಿ ಆರೋಪಿಸಿದ್ದಾರೆ.

52 ಸೆಕೆಂಡುಗಳ ವಿಡಿಯೊದಲ್ಲಿ, ಚತುರ್ಭುಜ್ ದಾಸ್ ಅವರ ಮೇಲೆ ಜನರ ಗುಂಪು ಹಲ್ಲೆ ಮಾಡಿರುವುದನ್ನು ಕಾಣಬಹುದು. ನಂತರ ಅವರನ್ನು ದೇವಾಲಯದ ಆವರಣಕ್ಕೆ ಕರೆದೊಯ್ಯಲಾಯಿತು. ಅಲ್ಲಿ ಮತ್ತೆ ರಾಡ್ ಮತ್ತು ದೊಣ್ಣೆಗಳಿಂದ ಹಲ್ಲೆ ನಡೆಸಲಾಗಿದೆ.

ಇದನ್ನೂ ಓದಿ: ಪವನ್ ಕಲ್ಯಾಣ್ ಅವರನ್ನು ಆಂಧ್ರ ಪ್ರದೇಶ ಸಿಎಂ ಎಂದ ಊರ್ವಶಿ ರೌಟೇಲಾ; ಸೋಶಿಯಲ್ ಮೀಡಿಯಾದಲ್ಲಿ ಟೀಕೆ

ಚತುರ್ಭುಜ್ ದಾಸ್ ಅವರ ತಲೆ ಮತ್ತು ಮುಖದ ಮೇಲೆ ಗಾಯಗಳಾಗಿವೆ, ಅವರ ಎಡಗೈ ಮುರಿದಿದೆ. ದಾಳಿಕೋರರು ಕೊಂದು ಸರಯೂ ನದಿಗೆ ಎಸೆಯುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದಾಸ್ ಆರೋಪಿಸಿದ್ದಾರೆ.

ವರದಿಗಳ ಪ್ರಕಾರ, ದಾಸ್ ಮತ್ತು ಆರೋಪಿಗಳ ನಡುವೆ ಕಳೆದ ಕೆಲವು ವರ್ಷಗಳಿಂದ ದೇವಾಲಯದ ಮಾಲೀಕತ್ವದ ವಿವಾದವಿದೆ.ಘಟನೆಯ ವಿಡಿಯೋವನ್ನು ಸ್ಥಳೀಯರು ವ್ಯಾಪಕವಾಗಿ ಹಂಚಿಕೊಂಡಿದ್ದಾರೆ. ಭಗವಾನ್ ರಾಮನ ಜನ್ಮಸ್ಥಳವಾದ ಅಯೋಧ್ಯೆಯು ಹಲವಾರು ಪುರಾತನ ದೇವಾಲಯಗಳು ಮತ್ತು ಆಶ್ರಮಗಳಿಗೆ ನೆಲೆಯಾಗಿದೆ. ಧಾರ್ಮಿಕ ಪ್ರವಾಸಿಗರಿಗೆ ನಗರವು ಪ್ರಮುಖ ಆಕರ್ಷಣೆಯಾಗಿದೆ. ಬೃಹತ್ ರಾಮಮಂದಿರವನ್ನು ನಿರ್ಮಿಸುವ ಸರ್ಕಾರದ ಘೋಷಣೆಯ ನಂತರ ನಗರವು ಬೃಹತ್ ಅಭಿವೃದ್ಧಿ ಮತ್ತು ಆಸ್ತಿ ದರದಲ್ಲಿ ಏರಿಕೆ ಕಂಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ