AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದ ನಾಸಿಕ್ ಬಳಿ ಹಳಿತಪ್ಪಿದ ಲೋಕಮಾನ್ಯ ತಿಲಕ್-ಜಯನಗರ ಎಕ್ಸ್‌ಪ್ರೆಸ್ ರೈಲು; ಇಬ್ಬರಿಗೆ ಗಾಯ

ಭಾನುವಾರ ಮಧ್ಯಾಹ್ನ 3:10 ರ ಸುಮಾರಿಗೆ ಸೆಂಟ್ರಲ್ ರೈಲ್ವೇ ಭುಸಾವಲ್ ವಿಭಾಗದ ಲಹವಿತ್ ಮತ್ತು ದೇವ್ಲಾಲಿ ನಡುವೆ ಸಂಭವಿಸಿದ ಅಪಘಾತದಲ್ಲಿ ಹೆಚ್ಚಿನ ಗಾಯಗಳು ವರದಿಯಾಗಿಲ್ಲ ಎಂದು ರೈಲ್ವೆ ಹೇಳಿದೆ

ಮಹಾರಾಷ್ಟ್ರದ ನಾಸಿಕ್ ಬಳಿ ಹಳಿತಪ್ಪಿದ ಲೋಕಮಾನ್ಯ ತಿಲಕ್-ಜಯನಗರ ಎಕ್ಸ್‌ಪ್ರೆಸ್ ರೈಲು; ಇಬ್ಬರಿಗೆ ಗಾಯ
ಪ್ರಾತಿನಿಧಿಕ ಚಿತ್ರ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Apr 03, 2022 | 7:51 PM

Share

ಭಾನುವಾರ ಮಧ್ಯಾಹ್ನ ಮಹಾರಾಷ್ಟ್ರ(Maharashtra) ನಾಸಿಕ್ (Nashik)ಬಳಿ ಲೋಕಮಾನ್ಯ ತಿಲಕ್-ಜಯನಗರ ಎಕ್ಸ್‌ಪ್ರೆಸ್​ನ (ಪವನ್ ಎಕ್ಸ್‌ಪ್ರೆಸ್) (Lokmanya Tilak-Jaynagar Express) ಹತ್ತು ಬೋಗಿಗಳು ಹಳಿತಪ್ಪಿವೆ ಎಂದು ರೈಲ್ವೆ ತಿಳಿಸಿದೆ. ಮಧ್ಯಾಹ್ನ 3:10 ರ ಸುಮಾರಿಗೆ ಸೆಂಟ್ರಲ್ ರೈಲ್ವೇ ಭುಸಾವಲ್ ವಿಭಾಗದ ಲಹವಿತ್ ಮತ್ತು ದೇವ್ಲಾಲಿ ನಡುವೆ ಸಂಭವಿಸಿದ ಅಪಘಾತದಲ್ಲಿ ಹೆಚ್ಚಿನ ಗಾಯಗಳು ವರದಿಯಾಗಿಲ್ಲ ಎಂದು ರೈಲ್ವೆ ಹೇಳಿದೆ. ಮನ್ಮಾಡ್‌ನಿಂದ ಅಪಘಾತ ಪರಿಹಾರ ರೈಲು, ಭೂಸಾವಲ್‌ನಿಂದ ಅಪಘಾತ ಪರಿಹಾರ ವೈದ್ಯಕೀಯ ಉಪಕರಣಗಳ ರೈಲು ಮತ್ತು ಇಗತ್‌ಪುರಿಯಿಂದ ವೈದ್ಯಕೀಯ ವ್ಯಾನ್ ಅನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಕೇಂದ್ರ ರೈಲ್ವೆಯ ವಕ್ತಾರರು ತಿಳಿಸಿದ್ದಾರೆ. ಅಪಘಾತದಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಮತ್ತು ಸಣ್ಣ ಪುಟ್ಟ ಗಾಯ ಮಾತ್ರ ವರದಿಯಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಸಹಾಯವಾಣಿ ಸಂಖ್ಯೆ 022-22694040 ಮತ್ತು 022-67455993 ಅನ್ನು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ನಲ್ಲಿ ನೀಡಲಾಗಿದೆ. ನಾಸಿಕ್ ರಸ್ತೆಗೆ 0253-2465816, ಭೂಸಾವಲ್ 02582-220167 ಮತ್ತು ಡಿಸಾಸ್ಟರ್ ಮ್ಯಾನೇಜ್‌ಮೆಂಟ್ ರೂಮ್‌ಗಾಗಿ 54173 ನಂಬರ್ ನೀಡಲಾಗಿದೆ. ರೈಲು ಹಳಿ ತಪ್ಪಿರುವುದರಿಂದ 12617 ನಿಜಾಮುದ್ದೀನ್ ಮಂಗಳಾ ಎಕ್ಸ್‌ಪ್ರೆಸ್, 12071 ಜಲ್ನಾ ಜನಶತಾಬ್ದಿ ಎಕ್ಸ್‌ಪ್ರೆಸ್, 12188 ಜಬಲ್‌ಪುರ್ ಗರೀಬ್​​ರಥ್, 11071 ವಾರಣಾಸಿ ಎಕ್ಸ್‌ಪ್ರೆಸ್ ಮತ್ತು 01027 ಎಲ್‌ಟಿಟಿ-ಗೋರಖ್‌ಪುರ ವಿಶೇಷ ರೈಲ್ವೇ ಸೇರಿದಂತೆ ಐದು ರೈಲುಗಳ ಸಮಯ ಮರುಹೊಂದಿಸಲಾಗಿದೆ.

22221 ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ಅನ್ನು ದಿವಾ-ವಸಾಯಿ ಮಾರ್ಗದ ಮೂಲಕ ತಿರುಗಿಸಲಾಗಿದೆ ಎಂದು ಅದು ಹೇಳಿದೆ.

ನಾಸಿಕ್ ಬಳಿ ರೈಲು ಹಳಿತಪ್ಪಿದ ಪರಿಣಾಮ ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ ಎಂದು ಕೇಂದ್ರ ರೈಲ್ವೆ ಭಾನುವಾರ ತಿಳಿಸಿದೆ.

“ನಾಸಿಕ್‌ನಲ್ಲಿ ರೈಲು ಹಳಿತಪ್ಪಿ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಗೊಂಡ ಇಬ್ಬರಿಗೂ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸುವ ಅಗತ್ಯವಿಲ್ಲ ಮತ್ತು ಘಟನೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ” ಎಂದು ಕೇಂದ್ರ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ (CPRO) ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂದೂ ಮಹಾಪಂಚಾಯತ್: ಶಸ್ತ್ರಾಸ್ತ್ರ ಕೈಗೆತ್ತಿಕೊಳ್ಳಲು ಹಿಂದೂಗಳಿಗೆ ಕರೆ ನೀಡಿದ ಯತಿ ನರಸಿಂಗಾನಂದ್

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!