AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಬಳಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ; 10 ಪೊಲಿಸರು ಅಮಾನತು-ಅಂಥದ್ದೇನಾಯ್ತು?

ಸಂಜೆ ಹೊತ್ತಿಗೆ ಪೊಲೀಸರು ನಮ್ಮ ಮನೆಗೇ ಬಂದರು. ಪತ್ನಿಗೂ ಹೊಡೆಯಲು ಪ್ರಾರಂಭಿಸಿದರು. ಇದರಿಂದ ಭಯಗೊಂಡ ನನ್ನ ಮಗ ಓಡಿಹೋದ ಎಂದು ಯುವಕನ ತಂದೆ ತಿಳಿಸಿದ್ದಾರೆ.

ಮನೆ ಬಳಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ; 10 ಪೊಲಿಸರು ಅಮಾನತು-ಅಂಥದ್ದೇನಾಯ್ತು?
ಉತ್ತರಪ್ರದೇಶದ ಕೊವಿಡ್​ 19 ಲಸಿಕಾ ಕೇಂದ್ರದಲ್ಲಿ ಗಲಾಟೆ
TV9 Web
| Edited By: |

Updated on: Jul 27, 2021 | 5:29 PM

Share

ಲಖನೌ: ಯುವಕನೊಬ್ಬ ಆತ್ಮಹತ್ಯೆ(Suicide) ಮಾಡಿಕೊಂಡ ಬೆನ್ನಲ್ಲೇ 10 ಮಂದಿ ಪೊಲೀಸರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಉತ್ತರಪ್ರದೇಶ (Uttar Pradesh)ದ ಬಾಗಪತ್​ ಜಿಲ್ಲೆಯ ಕೊವಿಡ್​ 19 ಲಸಿಕಾ ಕೇಂದ್ರದಲ್ಲಿ ಯುವಕ ಮತ್ತು ಪೊಲೀಸರ ಮಧ್ಯೆ ಜಗಳ ನಡೆದಿತ್ತು. ಹೀಗೆ ಪೊಲೀಸ(Cops)ರೊಂದಿಗೆ ಸಂಘರ್ಷ ನಡೆದ ದಿನ ಸಂಜೆ ಆ ಯುವಕ ತಮ್ಮ ಮನೆಯ ಬಳಿ ಇರುವ ಮರಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ.

ಲಸಿಕಾ ಕೇಂದ್ರದಲ್ಲಿ ಯುವಕನೊಂದಿಗೆ ಬೈದು, ಗಲಾಟೆ ಮಾಡಿದ್ದ ಆರೋಪದಡ 10 ಮಂದಿ ಪೊಲೀಸರನ್ನು ಅಮಾನತು ಮಾಡಲಾಗಿದೆ. ಅಷ್ಟೇ ಅಲ್ಲ ಅವರ ವಿರುದ್ಧ ಆತ್ಮಹತ್ಯೆ ಪ್ರಚೋದನೆ ಪ್ರಕರಣವೂ ದಾಖಲಾಗಿದೆ. ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಕೊವಿಡ್​ 19 ಲಸಿಕಾ ಕೇಂದ್ರದಲ್ಲಿದ್ದ ಪೊಲೀಸರೇ ಕಾರಣ ಎಂದು ಆತನ ಸಂಬಂಧಿಕರು ಆರೋಪ ಮಾಡಿದ್ದಾರೆ. ಕಾರಣವೇ ಇಲ್ಲದೆ ಯುವಕ ಮತ್ತು ಆತನ ತಾಯಿಗೆ ಹೊಡೆದಿದ್ದರು. ಅದೇ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಎಂದೂ ದೂರು ನೀಡಿದ್ದಾರೆ.

ಇನ್ನು ಕೊವಿಡ್​ 19 ಲಸಿಕಾ ಕೇಂದ್ರದಲ್ಲಿ ಈ ಯುವಕನಿಗೆ ಪೊಲೀಸರು ಹೊಡೆದ 90 ಸೆಕೆಂಡ್​ಗಳ ವಿಡಿಯೋ ಕೂಡ ವೈರಲ್ ಆಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮೃತ ಯುವಕನ ತಂದೆ, ನಾವೆಲ್ಲ ಕೊರೊನಾ ಲಸಿಕೆ ಪಡೆಯಲು ಹೋಗಿದ್ದೆವು. ಅಲ್ಲಿ ವೈದ್ಯಕೀಯ ಸಿಬ್ಬಂದಿ ಈತನ ಹೆಸರು ಕರೆದರೂ ಪೊಲೀಸರು ಒಳಗೆ ಬಿಡಲಿಲ್ಲ. ಅದರ ಬದಲು ಲಾಠಿಯಲ್ಲಿ ಹೊಡೆಯತೊಡಗಿದರು. ಅದು ಹೇಗೋ ಆತನನ್ನು ತಪ್ಪಿಸಿಕೊಂಡು ಕರೆದುಕೊಂಡು ಬಂದೆವು. ಆದರೆ ಸಂಜೆ ಹೊತ್ತಿಗೆ ಪೊಲೀಸರು ನಮ್ಮ ಮನೆಗೇ ಬಂದರು. ಪತ್ನಿಗೂ ಹೊಡೆಯಲು ಪ್ರಾರಂಭಿಸಿದರು. ಇದರಿಂದ ಭಯಗೊಂಡ ನನ್ನ ಮಗ ಓಡಿಹೋದ. ಆದರೆ ಕೊನೆಗೆ ಸಿಕ್ಕಿದ್ದು ಅವನ ಮೃತದೇಹ ಎಂದು ಕಣ್ಣಲ್ಲಿ ನೀರು ಹಾಕಿದ್ದಾರೆ.

ಇದನ್ನೂ ಓದಿ: ಜಯಪ್ರದಾ ಕುಟುಂಬದಿಂದ ಅನ್ಯಾಯವಾಗಿದೆ, ದಯವಿಟ್ಟು ನ್ಯಾಯ ಕೊಡಿಸಿ: ಸಂಸದೆ ಸುಮಲತಾ ಬಳಿ ಮನವಿ ಮಾಡಿದ ವಿಜಯಲಕ್ಷ್ಮಿ

Ten policemen Suspended from duty after a man commit Suicide In Uttar Pradesh

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು