AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಕರನನ್ನು ಮರಕ್ಕೆ ಕಟ್ಟಿ ಥಳಿಸಿ ಕೊಂದ ಗೆಳತಿಯ ಕುಟುಂಬಸ್ಥರು, ನ್ಯಾಯಾಲಯ ನೀಡಿತು ಸಂಚಲನದ ತೀರ್ಪು!

ಮಗಳ ಸಾವಿಗೆ ನೀನೇ ಕಾರಣ ಎಂದು ಜಾಸ್ಮಿನ್ ಕುಟುಂಬಸ್ಥರು ಶ್ರೀಸಾಯಿ ಹಾಗೂ ಪವನಕುಮಾರ್ ಎಂಬಾತನನ್ನು ಮರಕ್ಕೆ ಕಟ್ಟಿ ಹಾಕಿದ್ದಾರೆ. ಅವರಿಬ್ಬರ ಕಣ್ಣಿಗೆ ಮೆಣಸಿನ ಖಾರದ ಪುಡಿ ಎರಚಿ ಹಲ್ಲೆ ನಡೆಸಿದ್ದರು.

ಪ್ರಿಯಕರನನ್ನು ಮರಕ್ಕೆ ಕಟ್ಟಿ ಥಳಿಸಿ ಕೊಂದ ಗೆಳತಿಯ ಕುಟುಂಬಸ್ಥರು, ನ್ಯಾಯಾಲಯ ನೀಡಿತು ಸಂಚಲನದ ತೀರ್ಪು!
ಪ್ರಿಯಕರನ ಕೊಂದ ಗೆಳತಿಯ ಕುಟುಂಬಸ್ಥರು, ನ್ಯಾಯಾಲಯ ಸಂಚಲನದ ತೀರ್ಪು!
ಸಾಧು ಶ್ರೀನಾಥ್​
|

Updated on: Jun 22, 2023 | 12:23 PM

Share

ಗುಂಟೂರು ಜಿಲ್ಲೆಯಲ್ಲಿ 2016ರಲ್ಲಿ ನಡೆದ ಈ ಘಟನೆ ಎಲ್ಲರನ್ನೂ ಬೆಚ್ಚಿ ಬೀಳಿಸಿತ್ತು. ರಾಜ್ಯಾದ್ಯಂತ ಸಂಚಲನ ಮೂಡಿಸಿತ್ತು. ವೇಮುಲ ಶ್ರೀಸಾಯಿ ಷಣ್ಮುಖ ಎಂಬ ಯುವಕನನ್ನು ನಿಜಾಂಪಟ್ನಂ ಮಂಡಲದ ಮೊಹಮ್ಮದೀಯ ಪಾಲೆಂನಲ್ಲಿ ಮರಕ್ಕೆ ಕಟ್ಟಿಹಾಕಿ ಥಳಿಸಿ ಕೊಂದಿದ್ದರು. ಏಳು ವರ್ಷಗಳ ನಂತರ, ಕೋರ್ಟ್ (Tenali court)​​ ಅಂತಿಮವಾಗಿ ಆರೋಪಿಗಳಿಗೆ ಶಿಕ್ಷೆ ವಿಧಿಸಿದೆ. ತೆನಾಲಿ ನ್ಯಾಯಾಲಯ 13 ಮಂದಿಗೆ ಜೀವಾವಧಿ ಶಿಕ್ಷೆ (life imprisonment) ವಿಧಿಸಿ ಸಂಚಲನ ಮೂಡಿಸಿದೆ. ಷಣ್ಮುಖನನ್ನು ಕೊಂದಿದ್ದು ಏಕೆ? ಎಂದರೆ ಪ್ರೀತಿಸಿದ್ದು (love relationship) ಅವನ ಮಾಡಿದ ತಪ್ಪಾಗಿತ್ತು. ಹೌದು.. ಶ್ರೀಸಾಯಿ ಮಾಡಿದ ಕೆಟ್ಟ ತಪ್ಪು ಎಂದರೆ ಜಾಸ್ಮಿನ್ ಳನ್ನು ಪ್ರೀತಿಸಿದ್ದು.

ಜುಲೈ 17, 2016 ರಂದು ಜಾಸ್ಮಿನ್ ಕರೆ ಮಾಡಿದಳು ಎಂದು… ಅವನು ಅವಳ ಮನೆಗೆ ಹೋಗಿದ್ದಾನೆ. ಸ್ವಲ್ಪ ಹೊತ್ತು ಜಾಸ್ಮಿನ್​ ಜೊತೆ ಮಾತಾಡಿ ವಾಪಸಾಗಿದ್ದ. ಅದನ್ನು ತಿಳಿದ ಕುಟುಂಬಸ್ಥರು ಜಾಸ್ಮಿನ್ ಳನ್ನು ನಿಂದಿಸಿದ್ದಾರೆ. ಇದರಿಂದ ಮನನೊಂದ ಆಕೆ.. ಕೋಪದಲ್ಲಿ ನೇಣು ಹಾಕಿಕೊಂಡಿದ್ದಾಳೆ. ಅದಕ್ಕೂ ಮೊದಲು ತನ್ನ ಪ್ರಿಯತಮ ಶ್ರೀಸಾಯಿ ಜಾಸ್ಮಿನ್ ಗೆ ದೂರವಾಣಿ ಕರೆ ಮಾಡಿ, ತಾನು ಸಾಯುತ್ತಿರುವುದಾಗಿ ಹೇಳಿದ್ದಳು. ಅವನು ತಕ್ಷಣ ಜಾಸ್ಮಿನ್ ಮನೆಗೆ ಧಾವಿಸಿದ್ದಾನೆ. ಆದರೆ ಜಾಸ್ಮಿನ್ ಆ ವೇಳೆಗಾಗಲೇ ಸಾವನ್ನಪ್ಪಿದ್ದಳು.

ಇದರಿಂದಾಗಿ ಮಗಳ ಸಾವಿಗೆ ನೀನೇ ಕಾರಣ ಎಂದು ಜಾಸ್ಮಿನ್ ಕುಟುಂಬಸ್ಥರು ಶ್ರೀಸಾಯಿ ಹಾಗೂ ಪವನಕುಮಾರ್ ಎಂಬಾತನನ್ನು ಮರಕ್ಕೆ ಕಟ್ಟಿ ಹಾಕಿದ್ದಾರೆ. ಅವರಿಬ್ಬರ ಕಣ್ಣಿಗೆ ಮೆಣಸಿನ ಖಾರದ ಪುಡಿ ಎರಚಿ ಹಲ್ಲೆ ನಡೆಸಿದ್ದಾರೆ. ಅವರ ಬಟ್ಟೆಗಳನ್ನು ಬಿಚ್ಚಿ, ಇಬ್ಬರನ್ನೂ ಮರಕ್ಕೆ ಕಟ್ಟಿ ಹಾಕಿದ್ದಾರೆ. ಪೊಲೀಸರು ಬಂದರೂ ಹಿಂದೆ ಸರಿಯಲಿಲ್ಲ. ಗಂಭೀರವಾಗಿ ಗಾಯಗೊಂಡವರಿಗೆ ಜೀವಾನಾಧಾರಕ್ಕೆ ಕನಿಷ್ಠ ನೀರು ಸಹ ಕೊಡಲಿಲ್ಲ. ಹೆಚ್ಚುವರಿ ಪೊಲೀಸ್ ಪಡೆಗಳ ಆಗಮನದ ನಂತರ, ಆ ಇಬ್ಬರೂ ಯುವಕರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆ ವೇಳೆಗೆ ಶ್ರೀಸಾಯಿ ಸಾವನ್ನಪ್ಪಿದ್ದಾನೆ. ಈ ಘಟನೆ ಅಂದು ಭಾರೀ ಸಂಚಲನ ಮೂಡಿಸಿತ್ತು.

Also read:  ಅಧಿಕಾರದಲ್ಲಿದ್ದಾಗ 6ರ ಬದಲು 66 ಮರ ಕಡಿಯಲು ಅಕ್ರಮವಾಗಿ ಅನುಮತಿ ನೀಡಿದ್ದ ಐಎಫ್​ಎಸ್​ ಅಧಿಕಾರಿ ಸಸ್ಪೆಂಡ್

ಶ್ರೀಸಾಯಿ ಪೋಷಕರ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ತೆನಾಲಿಯ 11ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ಪೂರ್ಣಗೊಳಿಸಿ ನ್ಯಾಯಾಧೀಶೆ ಮಾಲತಿ ಅಂತಿಮ ತೀರ್ಪು ನೀಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 21 ಆರೋಪಿಗಳ ಪೈಕಿ ನಾಲ್ವರು ಈಗಾಗಲೇ ಮೃತಪಟ್ಟಿದ್ದು, ಸೂಕ್ತ ಸಾಕ್ಷ್ಯಾಧಾರಗಳ ಕೊರತೆಯಿಂದ ಇನ್ನೂ ನಾಲ್ವರು ಮಹಿಳೆಯರನ್ನು ಬಿಡುಗಡೆ ಮಾಡಲಾಗಿದೆ. ಆದರೆ ನ್ಯಾಯಾಲಯ 13 ಮಂದಿಯನ್ನು ತಪ್ಪಿತಸ್ಥರೆಂದು ಪರಿಗಣಿಸಿ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಆದರೆ, ತಪ್ಪಿತಸ್ಥರಿಗೆ ಶಿಕ್ಷೆಯಾಗಿದ್ದರೂ ಪೊಲೀಸರು ಯುವಕರ ಮೇಲಿನ ಹಲ್ಲೆಯನ್ನು ತಡೆದು ಅವರ ಪ್ರಾಣ ಉಳಿಸುವಲ್ಲಿ ವಿಫಲರಾಗಿದ್ದಾರೆ ಎಂಬ ಟೀಕೆಗಳನ್ನು ಎದುರಿಸಬೇಕಾಯಿತು. ಆ ವೇಳೆ ಅರಣ್ಯ ಇಲಾಖೆ ಎಸ್‌ಐ ವಿರುದ್ಧವೂ ಕ್ರಮ ಕೈಗೊಳ್ಳಲಾಗಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?