AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಹಣಕ್ಕಾಗಿ ಬ್ಯಾಂಕ್ ಗೆ ಹೋದ ಮಹಿಳೆ, ಲಾಕರ್ ತೆರೆದು ನೋಡಿದಾಗ ಅಲ್ಲೇನಿತ್ತು!?

ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಮಹಿಳಾ ಗ್ರಾಹಕರೊಬ್ಬರು ಕಷ್ಟಪಟ್ಟು ದುಡಿದ ಹಣವನ್ನು ಲಾಕರ್‌ನಲ್ಲಿ ಇಟ್ಟಿದ್ದಕ್ಕೆ ಈಗ ಪರಿತಪಿಸುವಂತಾಗಿದೆ.

Viral: ಹಣಕ್ಕಾಗಿ ಬ್ಯಾಂಕ್ ಗೆ ಹೋದ ಮಹಿಳೆ, ಲಾಕರ್ ತೆರೆದು ನೋಡಿದಾಗ ಅಲ್ಲೇನಿತ್ತು!?
ಹಣಕ್ಕಾಗಿ ಬ್ಯಾಂಕ್ ಗೆ ಹೋದ ಮಹಿಳೆ, ಲಾಕರ್ ತೆರೆದು ನೋಡಿದಾಗ ಅಲ್ಲೇನಿತ್ತು!?
TV9 Web
| Edited By: |

Updated on: Feb 13, 2023 | 5:06 PM

Share

ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ -PNB) ನಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಕಷ್ಟಪಟ್ಟು ದುಡಿದ ಹಣವನ್ನು ಲಾಕರ್‌ನಲ್ಲಿ (Bank Locker) ಇಟ್ಟಿದ್ದಕ್ಕೆ ತಕ್ಕ ಶಾಸ್ತಿಯಾಗಿದೆ. ತಾವು ಲಾಕರ್​ನಲ್ಲಿಟ್ಟಿದ್ದ ಹಣ ನಾಶವಾಗಿದೆ ಎಂದು ಗ್ರಾಹಕರು ಅಲವತ್ತುಕೊಂಡಿದ್ದಾರೆ. ತಮ್ಮ ಹಣವನ್ನು ವಾಪಸ್ ಕೊಡುವಂತೆ ಬ್ಯಾಂಕ್ ಸಿಬ್ಬಂದಿಯನ್ನು ಅವರು ಆಕ್ರೋಶದಿಂದ ಕೇಳಿದ್ದಾರೆ. ಈ ಘಟನೆ ನಡೆದಿರುವುದು ರಾಜಸ್ಥಾನದ (Rajasthan) ಉದಯಪುರದಲ್ಲಿ. ಆ ಪ್ರಸಂಗ ಏನು ಅಂತ ನೋಡೋದಾದರೆ

ವಿವರ ಹೀಗಿದೆ.. ಸುನೀತಾ ಮೆಹ್ತಾ ಎಂಬ ಮಹಿಳೆ ಕಾಲಾಜಿ ಗೊರಜಿಯಲ್ಲಿರುವ ಪಿಎನ್‌ಬಿ ಶಾಖೆಯಲ್ಲಿ ರೂ. 2 ಲಕ್ಷದವರೆಗೆ ಹಣವನ್ನು ಲಾಕರ್​ನಲ್ಲಿ ಇಟ್ಟಿದ್ದರು. ಇತ್ತೀಚೆಗೆ ಆಕೆಗೆ ಹಣದ ಅಗತ್ಯವಿತ್ತು. ಹಾಗಾಗಿ ತಾವು ಲಾಕರ್‌ನಲ್ಲಿಟ್ಟಿದ್ದ ಹಣವನ್ನು ಬ್ಯಾಗ್​ ಸಮೇತ ಹಾಗೆಯೇ ಮನೆಗೆ ತಂದಿದ್ದಾರೆ. ಹಣ ತಂದಿದ್ದ ಬ್ಯಾಗ್ ತೆರೆದು ನೋಡಿದಾಗ ಕೆಲ ಕರೆನ್ಸಿ ನೋಟುಗಳು ಪುಡಿಪುಡಿಯಾಗಿರುವುದು ಕಂಡು ಬಂದಿದೆ.

ನೋಟುಗಳು ವಿರೂಪಗೊಂಡು ನಾಶವಾಗಿರುವುದನ್ನು ಕಂಡು ಆ ಮಹಿಳೆ ಕಂಗಾಲಾಗಿದ್ದಾರೆ. ಸುಮಾರು 15 ಸಾವಿರ ರೂಪಾಯಿವರೆಗಿನ ಎಲ್ಲಾ ಕರೆನ್ಸಿ ನೋಟುಗಳು ಸಂಪೂರ್ಣ ನಾಶವಾಗಿವೆ. ಇನ್ನು ಕೆಲವು ನೋಟುಗಳು ಭಾಗಶಃ ಹಾಳಾಗಿವೆ. ಯಾಕೆ ಹೀಗೆ ಎಂದು ನೋಡಿದಾಗ ಗೆದ್ದಲು ತಿಂದು (Termites) ಹಾಳಾಗಿರುವುದು ಪತ್ತೆಯಾಗಿದೆ.

ಕೂಡಲೇ, ಪುಡಿಪುಡಿಯಾಗಿರುವ ಆ ಹಣವನ್ನೇ ತೆಗೆದುಕೊಂಡು ಬ್ಯಾಂಕ್ ಗೆ ತೆರಳಿ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಸ್ಥಿಯಲ್ಲಿದ್ದ ತಮ್ಮ ಹಣವನ್ನು ಕೂಡಲೇ ವಾಪಸ್ ಕೊಡಿಸಬೇಕು ಎಂದು ಒತ್ತಾಯಿಸಿದ್ದಾರೆ. ಬ್ಯಾಂಕ್ ವ್ಯವಸ್ಥಾಪಕರಿಗೆ ಲಿಖಿತ ದೂರು ಸಹ ಸಲ್ಲಿಸಿದ್ದಾರೆ. ಕೊನೆಗೆ, ಸಂತ್ರಸ್ತ ಮಹಿಳೆಗೆ ಆಕೆ ಕಳೆದುಕೊಂಡ ಮೊತ್ತವನ್ನು ಬ್ಯಾಂಕ್ ಹಿಂದಿರುಗಿಸಿದೆ.

ಈ ಬೆಳವಣಿಗೆಯಿಂದ ಬ್ಯಾಂಕ್ ಅಧಿಕಾರಿಗಳೂ ಬೆಚ್ಚಿಬಿದ್ದಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಲಾಕರ್ ನಲ್ಲಿ ಇಚ್ಚಿಟ್ಟಿದ್ದ ಬಹುತೇಕ ಕರೆನ್ಸಿ ನೋಟುಗಳು ಚೆಲ್ಲಾಪಿಲ್ಲಿಯಾಗಿ, ಹರಿದಿದ್ದು, ನಿರುಪಯುಕ್ತವಾಗಿರುವುದನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಈ ಸುದ್ದಿ ಸ್ಥಳೀಯವಾಗಿ ಸಂಚಲನ ಮೂಡಿಸುತ್ತಿದ್ದಂತೆ ಗ್ರಾಹಕರು ಬ್ಯಾಂಕ್‌ಗೆ ಬಂದು ನೋಡಿಕೊಂಡು ಹೋಗಿದ್ದಾರೆ. ಜನ ಸಹ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow Us
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್