ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ, 5 ಸಾವು, 60 ಮಂದಿಗೆ ಗಾಯ

ಇಂದು (ನ.11) ಮುಂಜಾನೆ ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಜ್ಯ ಸರ್ಕಾರಿ ಬಸ್ ಮತ್ತು ಓಮ್ನಿಬಸ್ ಮುಖಾಮುಖಿ ಡಿಕ್ಕಿಯಾಗಿ ಐವರು ಸಾವನ್ನಪ್ಪಿದ್ದು, ಸುಮಾರು 60 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎರಡು ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಹತ್ತು ಆಂಬ್ಯುಲೆನ್ಸ್‌ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಇನ್ನು ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ರಾಜ್ಯ ಎಕ್ಸ್‌ಪ್ರೆಸ್ ಸಾರಿಗೆ ಸಂಸ್ಥೆಯ ಬಸ್ ಮತ್ತು ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದ ಓಮ್ನಿ ಬಸ್ ಡಿಕ್ಕಿ ಹೊಡೆದಿದೆ.

ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ, 5 ಸಾವು, 60 ಮಂದಿಗೆ ಗಾಯ
ಸಾಂದರ್ಭಿಕ ಚಿತ್ರ
Follow us
|

Updated on: Nov 11, 2023 | 12:43 PM

ತಮಿಳುನಾಡು, ನ.11: ಇಂದು (ನ.11) ಮುಂಜಾನೆ ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ (Chennai-Bangalore National Highway) ರಾಜ್ಯ ಸರ್ಕಾರಿ ಬಸ್ ಮತ್ತು ಓಮ್ನಿಬಸ್ ಮುಖಾಮುಖಿ ಡಿಕ್ಕಿಯಾಗಿ ಐವರು ಸಾವನ್ನಪ್ಪಿದ್ದು, ಸುಮಾರು 60 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎರಡು ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಹತ್ತು ಆಂಬ್ಯುಲೆನ್ಸ್‌ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಇನ್ನು ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ರಾಜ್ಯ ಎಕ್ಸ್‌ಪ್ರೆಸ್ ಸಾರಿಗೆ ಸಂಸ್ಥೆಯ ಬಸ್ ಮತ್ತು ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದ ಓಮ್ನಿ ಬಸ್ ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ಓರ್ವ ಮಹಿಳೆ ಸೇರಿ ನಾಲ್ಕು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ರಾಜ್ಯ ಎಕ್ಸ್‌ಪ್ರೆಸ್ ಸಾರಿಗೆ ಸಂಸ್ಥೆಯ ಬಸ್ ಮತ್ತು ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದ ಓಮ್ನಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಸಾವನ್ನಪ್ಪಿರುವವರನ್ನು ಗುಡುವಂಚೇರಿಯ ರಿತಿಕಾ (32), ವಾಣಿಯಂಬಾಡಿಯ ಮೊಹಮ್ಮದ್ ಫಿರೋಜ್ (37), ಎಸ್‌ಇಟಿಸಿ ಬಸ್ ಚಾಲಕ ಕೆ ಎಲುಮಲೈ (47) ಮತ್ತು ಚಿತ್ತೂರಿನ ಬಿ ಅಜಿತ್ (25) ಹಾಗೂ ಓಮ್ನಿಬಸ್ ಚಾಲಕ ಎನ್ ಸೈಯದ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಗುರುಗ್ರಾಮ್​ದ ಬಳಿ ಭೀಕರ ಅಪಘಾತ, ಸ್ಥಳದಲ್ಲೇ ನಾಲ್ವರು ಸಾವು

ಮುಂಜಾನೆ ಸುಮಾರು 4.00 ವೇಳೆ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ತಿರುಪತ್ತೂರು ಜಿಲ್ಲೆಯ ವಾಣಿಯಂಬಾಡಿ ಸರ್ಕಾರಿ ಆಸ್ಪತ್ರೆಗೆ ಮತ್ತು ವೆಲ್ಲೂರಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಸಾವನ್ನಪ್ಪಿರುವವರ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದೆ. ಅಪಘಾತದ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್​​ ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್ ಶೋನಿಂದ ಒಳ್ಳೆಯ ಪೇಮೆಂಟ್ ಸಿಕ್ತಾ? ಉತ್ತರ ನೀಡಿದ ಹಂಸಾ
ಬಿಗ್ ಬಾಸ್ ಶೋನಿಂದ ಒಳ್ಳೆಯ ಪೇಮೆಂಟ್ ಸಿಕ್ತಾ? ಉತ್ತರ ನೀಡಿದ ಹಂಸಾ
ಅಗಲಿದ ಪ್ರೀತಿಯ ಸಹೋದರನ ಸಮಾಧಿಗೆ ಶಿವಣ್ಣ ದಂಪತಿ ಪೂಜೆ
ಅಗಲಿದ ಪ್ರೀತಿಯ ಸಹೋದರನ ಸಮಾಧಿಗೆ ಶಿವಣ್ಣ ದಂಪತಿ ಪೂಜೆ
ಚನ್ನಪಟ್ಟಣ ಟಿಕೆಟ್ ತಪ್ಪಿತು ಯಾಕೆ ಅನ್ನೋದನ್ನು ವಿವರಿಸಿದ ರಘುನಂದನ್ ರಾಮಣ್ಣ
ಚನ್ನಪಟ್ಟಣ ಟಿಕೆಟ್ ತಪ್ಪಿತು ಯಾಕೆ ಅನ್ನೋದನ್ನು ವಿವರಿಸಿದ ರಘುನಂದನ್ ರಾಮಣ್ಣ
ಹಾಸನಾಂಬೆಯ ದರ್ಶನಕ್ಕೆ ಪ್ರತಿದಿನ ಆಗಮಿಸುತ್ತಿರುವ ರಾಜ್ಯದ ಗಣ್ಯರ ದಂಡು
ಹಾಸನಾಂಬೆಯ ದರ್ಶನಕ್ಕೆ ಪ್ರತಿದಿನ ಆಗಮಿಸುತ್ತಿರುವ ರಾಜ್ಯದ ಗಣ್ಯರ ದಂಡು
ಪ್ರಿಯಾಂಕಾ ವಯನಾಡ್​ನಿಂದ ಸ್ಪರ್ಧಿಸುವುದು ಕಾಂಗ್ರೆಸ್​ಗೆ ಸರಿ: ಕುಮಾರಸ್ವಾಮಿ
ಪ್ರಿಯಾಂಕಾ ವಯನಾಡ್​ನಿಂದ ಸ್ಪರ್ಧಿಸುವುದು ಕಾಂಗ್ರೆಸ್​ಗೆ ಸರಿ: ಕುಮಾರಸ್ವಾಮಿ
ಕುಮಾರಸ್ವಾಮಿ ಮತ್ತು ದೇವೇಗೌಡರ ವಿರುದ್ಧ ಕಾಮೆಂಟ್ ಮಾಡಲ್ಲ: ಡಿಕೆ ಶಿವಕುಮಾರ್
ಕುಮಾರಸ್ವಾಮಿ ಮತ್ತು ದೇವೇಗೌಡರ ವಿರುದ್ಧ ಕಾಮೆಂಟ್ ಮಾಡಲ್ಲ: ಡಿಕೆ ಶಿವಕುಮಾರ್
ರೈತರ ಜಮೀನು ಯಾವ ಕಾರಣಕ್ಕೂ ವಕ್ಫ್ ಬೋರ್ಡ್​ಗೆ ಹೋಗಲ್ಲ: ಸಿದ್ದರಾಮಯ್ಯ
ರೈತರ ಜಮೀನು ಯಾವ ಕಾರಣಕ್ಕೂ ವಕ್ಫ್ ಬೋರ್ಡ್​ಗೆ ಹೋಗಲ್ಲ: ಸಿದ್ದರಾಮಯ್ಯ
ಪುನೀತ್ 3ನೇ ವರ್ಷದ ಪುಣ್ಯಸ್ಮರಣೆ; ಅಪ್ಪು ದೇವಾಲಯದಲ್ಲಿ ವಿಶೇಷ ಪೂಜೆ
ಪುನೀತ್ 3ನೇ ವರ್ಷದ ಪುಣ್ಯಸ್ಮರಣೆ; ಅಪ್ಪು ದೇವಾಲಯದಲ್ಲಿ ವಿಶೇಷ ಪೂಜೆ
ಹಾಸನಾಂಬೆಗೆ ಖಡ್ಗಮಾಲಾ ಸ್ತೋತ್ರ ಅರ್ಚನೆ ಮಾಡಿಸಿದ ಸಿಎಂ ಸಿದ್ದರಾಮಯ್ಯ
ಹಾಸನಾಂಬೆಗೆ ಖಡ್ಗಮಾಲಾ ಸ್ತೋತ್ರ ಅರ್ಚನೆ ಮಾಡಿಸಿದ ಸಿಎಂ ಸಿದ್ದರಾಮಯ್ಯ
ನಸುಕಿನ ಜಾವದಿಂದಲೇ ಕಂಠೀರವ ಸ್ಟುಡಿಯೋ ಮುಂದೆ ನೆರೆದಿದ್ದ ಅಭಿಮಾನಿಗಳು
ನಸುಕಿನ ಜಾವದಿಂದಲೇ ಕಂಠೀರವ ಸ್ಟುಡಿಯೋ ಮುಂದೆ ನೆರೆದಿದ್ದ ಅಭಿಮಾನಿಗಳು