AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುತ್ತಿದ್ದ ಬಸ್​ನಿಂದ ಕೆಳಗೆ ಬಿದ್ದ ಮಹಿಳೆ, ಭಯಾನಕ ವಿಡಿಯೋ ಇಲ್ಲಿದೆ

ಚಲಿಸುತ್ತಿರುವ ಬಸ್​ನಿಂದ ಮಹಿಳೆಯೊಬ್ಬರು ಬಿದ್ದಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ, ಅದೃಷ್ಟವಶಾತ್​ ಅವರ ಪ್ರಾಣಕ್ಕೆ ಯಾವುದೇ ಅಪಾಯವಾಗಿಲ್ಲ. ಕೂಡಲೇ ಅವರನ್ನು ಸೇಲಂ ಆಸ್ಪತ್ರೆಗೆ ದಾಖಲಿಸಲಾಯಿತು, ಅವರು ಗಂಭೀರವಾಗಿ ಗಾಯಗೊಂಡಿದ್ದು, ಜೀವಕ್ಕೆ ಅಪಾಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ.

ಚಲಿಸುತ್ತಿದ್ದ ಬಸ್​ನಿಂದ ಕೆಳಗೆ ಬಿದ್ದ ಮಹಿಳೆ, ಭಯಾನಕ ವಿಡಿಯೋ ಇಲ್ಲಿದೆ
ಬಸ್
ನಯನಾ ರಾಜೀವ್
|

Updated on: Jul 05, 2024 | 9:38 AM

Share

ಸಾಮಾನ್ಯವಾಗಿ ಬಸ್​ಗಳಲ್ಲಿ ಸೀಟುಗಳಿರುವುದಕ್ಕಿಂತ ಹೆಚ್ಚು ಮಂದಿ ಸಂಚರಿಸುತ್ತಾರೆ.  ಸಾಕಷ್ಟು ಪ್ರಯಾಣಿಕರು ನಿಂತೇ ಪ್ರಯಾಣಿಸುತ್ತಾರೆ. ಕೆಲವು ಬಸ್​ಗಳಲ್ಲಿ ಬಾಗಿಲು ತೆರೆದೇ ಇರುತ್ತದೆ, ಇನ್ನೂ ಕೆಲವು ಬಸ್​ಗಳನ್ನು ಬಾಗಿಲುಗಳು ಅಷ್ಟು ಗಟ್ಟಿ ಇರುವುದಿಲ್ಲ. ಒಮ್ಮೆ ಒರಗಿದರೂ ಕೆಳಗೆ ಬೀಳುವಂತಿರುತ್ತೆ.

ತಮಿಳುನಾಡಿನ ನಾಮಕ್ಕಲ್​ನಲ್ಲಿ ಇದೇ ರೀತಿಯ ಘಟನೆ ನಡೆದಿದೆ. ಮಹಿಳೆಯೊಬ್ಬರು ಚಲಿಸುತ್ತಿರುವ ಬಸ್​ನಿಂದ ಕೆಳಗೆ ಬಿದ್ದಿದ್ದಾರೆ. ಆ ಸಮಯದಲ್ಲಿ ಬಸ್​ನ ವೇಗವೂ ಹೆಚ್ಚಿತ್ತು, ಈ ದೃಶ್ಯ ಖಾಸಗಿ ಬಸ್​ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಹಿಳೆಗೆ ಗಂಭೀರ ಗಾಯಗಳಾಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಶಾರದಾ ಎಂಬ ಮಹಿಳೆ ಬಟ್ಟೆ ಖರೀದಿಸಲು ಜೇಡರಪಾಳ್ಯಂನಿಂದ ಸೇಲಂಗೆ ತೆರಳಿದ್ದು, ಖಾಸಗಿ ಬಸ್​ನಲ್ಲಿ ಮನೆಗೆ ಮರಳುತ್ತಿದ್ದರು. ಆಕೆ ಬಸ್​ನಿಂದ ಸುಮಾರು 20 ಅಡಿ ದೂರದಲ್ಲಿ ಬಿದ್ದಿದ್ದಾಳೆ, ಗಾಬರಿಗೊಂಡ ಪ್ರಯಾಣಿಕರು ಕಂಡಕ್ಟರ್​ಗೆ ಮಾಹಿತಿ ನೀಡಿ ಬಸ್​ ನಿಲ್ಲಿಸಿದ್ದಾರೆ. ಪ್ರಯಾಣಿಕರು ಶಾರದಾಗೆ ಸಹಾಯ ಮಾಡಿದರು. ಚಿಕಿತ್ಸೆಗಾಗಿ ಸೇಲಂನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಮತ್ತಷ್ಟು ಓದಿ: Viral News: ಬೇಗ ಅಪಘಾತ ಮಾಡಿ; ಸಿಕ್ಕಾಪಟ್ಟೆ ಟ್ರೋಲ್ ಆಯ್ತು ಮಂಗಳೂರು- ಮಡಿಕೇರಿ ಹೆದ್ದಾರಿಯ ಬೋರ್ಡ್ 

ಗಂಭೀರವಾಗಿ ಗಾಯಗೊಂಡಿದ್ದರೂ ಜೀವಕ್ಕೆ ಅಪಾಯವಿಲ್ಲ ಎಂಬುದು ತಿಳಿದುಬಂದಿದೆ. ಈ ವಿಡಿಯೋದಲ್ಲಿ ಹಲವು ಮಹಿಳೆಯರು ನಿಂತು ಪ್ರಯಾಣಿಸುತ್ತಿರುವುದು ಕಂಡು ಬಂದಿದೆ, ಅವರಲ್ಲಿ ಶಾರದಾ ಬಾಗಿಲ ಮುಂದೆಯೇ ನಿಂತಿದ್ದರು, ಬಾಗಿಲು ತೆರೆದಿತ್ತು, ಮಹಿಳೆಯರು ಮತ್ತು ಮಕ್ಕಳು ಬಸ್ಸಿನ ಮುಂಭಾಗದಲ್ಲಿ ನಿಂತಿದ್ದರೆ, ಪುರುಷರು ಹಿಂಭಾಗದಲ್ಲಿ ನಿಂತಿದ್ದರು.

ಈ ವೇಳೆ ಶಾರದಾ ಪೋಲ್ ಹಿಡಿದು ನಿಂತಿದ್ದರು, ಬಸ್​ ಕರ್ವಿಂಗ್​ನಲ್ಲಿ ತಿರುಗಿದಾಗ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾರೆ. ಇದನ್ನು ಕಂಡು ಗಾಬರಿಗೊಂಡ ಜನರು ಬಸ್ ನಿಲ್ಲಿಸುವಂತೆ ಮನವಿ ಮಾಡಿದ್ದಾರೆ. ವಿಡಿಯೋ ಎರಡನೇ ಭಾಗದಲ್ಲಿ ಶಾರದಾ ಎಷ್ಟು ವೇಗವಾಗಿ ಬಿದ್ದಿದ್ದಾಳೆಂಬುದನ್ನು ಕಾಣಬಹುದು. ಬಸ್ ನಿಂತ ತಕ್ಷಣ ಜನರು ಆಕೆಯ ಸಹಾಯಕ್ಕಾಗಿ ಓಡಿದರು, ಬಳಿಕ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ