AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಕಾಶ್ಮೀರದಲ್ಲಿ ಸೇನಾ ನೆಲೆ ಮೇಲೆ ಭಯೋತ್ಪಾದಕ ದಾಳಿ, ಓರ್ವ ಯೋಧನಿಗೆ ಗಾಯ

ಜಮ್ಮು ಕಾಶ್ಮೀರದಲ್ಲಿ ಉಗ್ರರು ಸೇನಾ ನೆಲೆಯ ಮೇಲೆ ಗುಂಡಿನ ದಾಳಿ ನಡೆಸಿದ್ದು, ಓರ್ವ ಯೋಧ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಂಜಕೋಟೆ ಪ್ರದೇಶದ ಗಲೂತಿ ಗ್ರಾಮದ ಟೆರಿಟೋರಿಯಲ್ ಆರ್ಮಿಯ ಸೆಂಟ್ರಿ ಪೋಸ್ಟ್ ಮೇಲೆ ಬೆಳಗ್ಗೆ 4 ಗಂಟೆ ಸುಮಾರಿಗೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಸೇನಾ ನೆಲೆ ಮೇಲೆ ಭಯೋತ್ಪಾದಕ ದಾಳಿ, ಓರ್ವ ಯೋಧನಿಗೆ ಗಾಯ
ಭಾರತೀಯ ಸೇನೆ
ನಯನಾ ರಾಜೀವ್
|

Updated on:Jul 07, 2024 | 11:43 AM

Share

ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಹಳ್ಳಿಯೊಂದರ ಸೇನಾ ಶಿಬಿರದ ಮೇಲೆ ಇಂದು ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಓರ್ವ ಯೋಧ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಜಕೋಟೆ ಪ್ರದೇಶದ ಗಲೂತಿ ಗ್ರಾಮದ ಟೆರಿಟೋರಿಯಲ್ ಆರ್ಮಿಯ ಸೆಂಟ್ರಿ ಪೋಸ್ಟ್ ಮೇಲೆ ಬೆಳಗ್ಗೆ 4 ಗಂಟೆ ಸುಮಾರಿಗೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಓರ್ವ ಯೋಧ ಗಾಯಗೊಂಡಿದ್ದು, ನಂತರ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸೇನಾ ಶಿಬಿರದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು, ಪ್ರತಿದಾಳಿ ನಡೆಸಿದ ಸೈನಿಕರು ದಾಳಿಯನ್ನು ವಿಫಲಗೊಳಿಸಿದ್ದು, ಉಗ್ರರು ಪಲಾಯನಗೈದಿದ್ದಾರೆ ಎಂದು ಪ್ರಾಥಮಿಕ ವರದಿಗಳು ಸೂಚಿಸಿವೆ.

ಎರಡು ಕಡೆಯವರ ನಡುವೆ 30 ನಿಮಿಷಗಳ ಕಾಲ ಗುಂಡಿನ ಚಕಮಕಿ ಮುಂದುವರೆದಿದೆ ಆದರೆ ಭಯೋತ್ಪಾದಕರು ಹತ್ತಿರದ ಅರಣ್ಯಕ್ಕೆ ಹೋಗಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು.

ದಾಳಿಕೋರರನ್ನು ಪತ್ತೆಹಚ್ಚಲು ಸೇನೆ ಮತ್ತು ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ಶನಿವಾರ, ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಕನಿಷ್ಠ ನಾಲ್ವರು ಭಯೋತ್ಪಾದಕರು ಹತರಾಗಿದ್ದಾರೆ ಮತ್ತು ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ.

ಮತ್ತಷ್ಟು ಓದಿ: Terror Attack: ಜಮ್ಮು ಕಾಶ್ಮೀರದಲ್ಲಿ 3 ದಿನಗಳಲ್ಲಿ ಮೂರನೇ ಉಗ್ರ ದಾಳಿ, ಸೇನಾ ನೆಲೆ ಮೇಲೆ ಉಗ್ರರಿಂದ ಗುಂಡಿನ ದಾಳಿ

ದಕ್ಷಿಣ ಕಾಶ್ಮೀರ ಜಿಲ್ಲೆಯ ಫ್ರಿಸಲ್ ಚಿನ್ನಿಗಮ್ ಮತ್ತು ಮೊಡೆರ್ಗಾಮ್ ಪ್ರದೇಶಗಳಲ್ಲಿ ಎನ್‌ಕೌಂಟರ್‌ಗಳು ನಡೆದಿವೆ. ಎನ್‌ಕೌಂಟರ್ ಸೈಟ್‌ನ ಡ್ರೋನ್ ದೃಶ್ಯಗಳಲ್ಲಿ ನಾಲ್ಕು ಶವಗಳು ಅಲ್ಲಿ ಬಿದ್ದಿರುವುದನ್ನು ತೋರಿಸಿದೆ, ಆದರೆ ಇನ್ನೂ ಗುಂಡಿನ ದಾಳಿ ನಡೆಯುತ್ತಿರುವುದರಿಂದ ಅವುಗಳನ್ನು ಇನ್ನೂ ಹಿಂಪಡೆಯಲು ಸಾಧ್ಯವಾಗಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:42 am, Sun, 7 July 24

Follow Us
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​