ಪಹಲ್ಗಾಮ್ ದಾಳಿಯ ತನಿಖೆ ಪಾಕಿಸ್ತಾನವನ್ನು ಇಕ್ಕಟ್ಟಿಗೆ ಸಿಲುಕಿಸಿದೆ; ಅಮಿತ್ ಶಾ
ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಯೋಜಿಸಿದವರನ್ನು ಆಪರೇಷನ್ ಸಿಂಧೂರ್ ಮೂಲಕ ಭದ್ರತಾ ಪಡೆಗಳು ಶಿಕ್ಷಿಸಿದವು. ಆಪರೇಷನ್ ಮಹಾದೇವ್ ಮೂಲಕ ಅದನ್ನು ನಡೆಸಿದವರನ್ನು ತಟಸ್ಥಗೊಳಿಸಿದವು. ಇದು ಭಯೋತ್ಪಾದನೆಗೆ ಭಾರತ ನೀಡಿದ ನಿರ್ಣಾಯಕ ಪ್ರತಿಕ್ರಿಯೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ನವದೆಹಲಿಯಲ್ಲಿ ನಡೆದ ಭಯೋತ್ಪಾದನಾ ವಿರೋಧಿ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ್ದಾರೆ.

ನವದೆಹಲಿ, ಡಿಸೆಂಬರ್ 26: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಯಶಸ್ವಿ ತನಿಖೆ ನಡೆಸುವ ಮೂಲಕ ಪಾಕಿಸ್ತಾನದ ಭಯೋತ್ಪಾದಕ ಮಾಸ್ಟರ್ಮೈಂಡ್ಗಳಿಗೆ ಬಲವಾದ ಮತ್ತು ಸೂಕ್ತವಾದ ಉತ್ತರವನ್ನು ನೀಡಲಾಗಿದೆ. ಪಹಲ್ಗಾಮ್ ತನಿಖೆಯು ಪಾಕಿಸ್ತಾನದ ಅಸಲಿ ಮುಖವನ್ನು ಜಗತ್ತಿನೆದುರು ಮತ್ತೊಮ್ಮೆ ಬಯಲು ಮಾಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ. ಏಪ್ರಿಲ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ದಾಳಿಕೋರರು 26 ಜನರನ್ನು ಕೊಲ್ಲಲಾಗಿತ್ತು. ಅವರಲ್ಲಿ ಹೆಚ್ಚಿನವರು ಪ್ರವಾಸಿಗರು. ಇದು ಭಾರತ ಮತ್ತು ಪಾಕಿಸ್ತಾನದ ನಡುವೆ ದಿನಗಳ ಕಾಲ ನಡೆದ ಸಂಘರ್ಷಕ್ಕೆ ಕಾರಣವಾಯಿತು.
ರಾಷ್ಟ್ರೀಯ ತನಿಖಾ ಸಂಸ್ಥೆ ಆಯೋಜಿಸಿದ್ದ ಭಯೋತ್ಪಾದನಾ ವಿರೋಧಿ ಸಮ್ಮೇಳನ-2025 ಉದ್ಘಾಟಿಸಿ ಮಾತನಾಡಿದ ಅಮಿತ್ ಶಾ ಈ ಹೇಳಿಕೆಗಳನ್ನು ನೀಡಿದ್ದಾರೆ. ಎರಡು ಡೇಟಾಬೇಸ್ಗಳ ಜೊತೆಗೆ NIAಯ ನವೀಕರಿಸಿದ ಅಪರಾಧ ಕೈಪಿಡಿಯನ್ನು ಸಹ ಅವರು ಅನಾವರಣಗೊಳಿಸಿದರು.
ಇದನ್ನೂ ಓದಿ: ಅಸಮರ್ಥರನ್ನು ಜಗದೇಕ ವೀರ ಎನ್ನಬೇಕೆ?; ಅಮಿತ್ ಶಾ ವಿರುದ್ಧ ಪ್ರಿಯಾಂಕ್ ಖರ್ಗೆ ಟೀಕಾಪ್ರಹಾರ
ಭಯೋತ್ಪಾದನಾ ಕೃತ್ಯವನ್ನು ಯೋಜಿಸಿದವರನ್ನು ಆಪರೇಷನ್ ಸಿಂಧೂರ್ ಮೂಲಕ ಶಿಕ್ಷಿಸಲಾಯಿತು. ಅವರಿಗೆ ಒದಗಿಸಲಾದ ಶಸ್ತ್ರಾಸ್ತ್ರಗಳಿಂದ ಅದನ್ನು ಕಾರ್ಯಗತಗೊಳಿಸಿದವರನ್ನು ಆಪರೇಷನ್ ಮಹಾದೇವ್ ಮೂಲಕ ತಟಸ್ಥಗೊಳಿಸಲಾಯಿತು ಎಂದು ಹೇಳಿದ್ದಾರೆ.
ಬೈಸರನ್ ಕಣಿವೆಯಲ್ಲಿ ನಡೆದ ದಾಳಿಯನ್ನು ಉಲ್ಲೇಖಿಸಿದ ಅಮಿತ್ ಶಾ, ಈ ಘಟನೆಯು ದೇಶವನ್ನು ಬೆಚ್ಚಿಬೀಳಿಸಿದೆ. ಕೋಮು ಸಾಮರಸ್ಯವನ್ನು ಅಡ್ಡಿಪಡಿಸುವ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿ ಮತ್ತು ಪ್ರವಾಸೋದ್ಯಮದ ಮೇಲಿನ ನವೀಕೃತ ಗಮನವನ್ನು ಹಳಿತಪ್ಪಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




