AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಯೋತ್ಪಾದನೆ ವಿಶ್ವ ಎದುರಿಸುತ್ತಿರುವ ಅತಿ ದೊಡ್ಡ ಸಮಸ್ಯೆ: ಪ್ರಧಾನಿ ಮೋದಿ | Terrorism is the biggest threat to the world: PM Modi

ಐದು ರಾಷ್ಟ್ರಗಳ 12ನೇ ಬ್ರಿಕ್ಸ್ (BRICS) ವರ್ಚ್ಯುಯಲ್ ಶೃಂಗಸಭೆಯನ್ನು ಉದ್ದೇಶಿಸಿ ಇಂದು ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಯೋತ್ಪಾದನೆ ವಿಶ್ವ ಎದುರಿಸುತ್ತಿರುವ ಅತಿ ದೊಡ್ಡ ಸಮಸ್ಯೆಯಾಗಿದೆ ಎಂದು ಹೇಳಿದರು. ಭಯೋತ್ಪಾದನೆಯನ್ನು ಪ್ರತಿಪಾದಿಸುವ, ಭಯೋತ್ಪಾದನೆಗೆ ಸಹಾಯ ಮತ್ತು ಪ್ರೋತ್ಸಾಹ ನೀಡುವ ರಾಷ್ಟ್ರಗಳು ತಮ್ಮ ತಪ್ಪನ್ನು ಅರಿತು, ಪರಾಮರ್ಶೆ ಮಾಡಿಕೊಳ್ಳಬೇಕು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಾ ಪಾಕಿಸ್ತಾನಕ್ಕೆ ಅಪರೋಕ್ಷವಾಗಿ ಎಚ್ಚರಿಕೆ ನೀಡಿದರು. ಭಯೋತ್ಪಾದನೆಯ ಸಮಸ್ಯೆಯನ್ನು ಸಂಘಟಿತವಾಗಿ ಹಿಮ್ಮೆಟ್ಟಿಸುವ ಅವಶ್ಯಕತೆಯಿದೆ ಎಂದ ಪ್ರಧಾನಿ, ವಿಶ್ವಸಂಸ್ಥೆಯ ಭದ್ರತಾ ಮಂಡಳಿ, ವಿಶ್ವ ವ್ಯಾಪಾರ ಸಂಸ್ಥೆ, […]

ಭಯೋತ್ಪಾದನೆ ವಿಶ್ವ ಎದುರಿಸುತ್ತಿರುವ ಅತಿ ದೊಡ್ಡ ಸಮಸ್ಯೆ: ಪ್ರಧಾನಿ ಮೋದಿ | Terrorism is the biggest threat to the world: PM Modi
ಅರುಣ್​ ಕುಮಾರ್​ ಬೆಳ್ಳಿ
|

Updated on: Nov 17, 2020 | 8:32 PM

Share

ಐದು ರಾಷ್ಟ್ರಗಳ 12ನೇ ಬ್ರಿಕ್ಸ್ (BRICS) ವರ್ಚ್ಯುಯಲ್ ಶೃಂಗಸಭೆಯನ್ನು ಉದ್ದೇಶಿಸಿ ಇಂದು ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಯೋತ್ಪಾದನೆ ವಿಶ್ವ ಎದುರಿಸುತ್ತಿರುವ ಅತಿ ದೊಡ್ಡ ಸಮಸ್ಯೆಯಾಗಿದೆ ಎಂದು ಹೇಳಿದರು. ಭಯೋತ್ಪಾದನೆಯನ್ನು ಪ್ರತಿಪಾದಿಸುವ, ಭಯೋತ್ಪಾದನೆಗೆ ಸಹಾಯ ಮತ್ತು ಪ್ರೋತ್ಸಾಹ ನೀಡುವ ರಾಷ್ಟ್ರಗಳು ತಮ್ಮ ತಪ್ಪನ್ನು ಅರಿತು, ಪರಾಮರ್ಶೆ ಮಾಡಿಕೊಳ್ಳಬೇಕು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಾ ಪಾಕಿಸ್ತಾನಕ್ಕೆ ಅಪರೋಕ್ಷವಾಗಿ ಎಚ್ಚರಿಕೆ ನೀಡಿದರು.

ಭಯೋತ್ಪಾದನೆಯ ಸಮಸ್ಯೆಯನ್ನು ಸಂಘಟಿತವಾಗಿ ಹಿಮ್ಮೆಟ್ಟಿಸುವ ಅವಶ್ಯಕತೆಯಿದೆ ಎಂದ ಪ್ರಧಾನಿ, ವಿಶ್ವಸಂಸ್ಥೆಯ ಭದ್ರತಾ ಮಂಡಳಿ, ವಿಶ್ವ ವ್ಯಾಪಾರ ಸಂಸ್ಥೆ, ಅಂತಾರಾಷ್ಟ್ರೀಯ ಹಣಕಾಸು ನಿಧಿ ಮುಂತಾದವುಗಳನ್ನು ಸುಧಾರಣೆಗೊಳಿಸಬೇಕಿರುವ ಅಗತ್ಯವಿದೆ ಎಂದರು. ಭಯೋತ್ಪಾದನೆ ವಿರುದ್ಧದ ನೀತಿಗೆ ಸ್ಪಷ್ಟ ‌ರೂಪ ನೀಡದ ಹೊರತು ಈ ಪೀಡೆಯನ್ನು ಬೇರುಸಹಿತ ಕಿತ್ತುಹಾಕಲಾಗದು ಎಂದು ಮೋದಿ ಹೇಳಿದರು.

ಕೊರೊನಾ ಮಾಹಾಮಾರಿಯ ನಿಯಂತ್ರಣ ಕುರಿತು ಮಾತನಾಡಿದ ಮೋದಿಯವರು, ಭಾರತದಲ್ಲಿ ಲಸಿಕೆ ತಯಾರಿಕೆ ಮತ್ತು ವಿತರಣೆಯ ಕೆಲಸವು ಮಾನವೀಯ ನೆಲೆಗಟ್ಟಿನಲ್ಲಿ ನಡೆಯಲಿದೆ ಎಂದರು. ಆತ್ಮನಿರ್ಭರ ಭಾರತದ ಬಗ್ಗೆಯೂ ಮಾತನಾಡಿದ ಪ್ರಧಾನ ಮಂತ್ರಿಗಳು ಭಾರತ ಕೈಗೆತ್ತಿಕೊಂಡಿರುವ ಸುಧಾರಣೆ ಕ್ರಮಗಳ ಬಗ್ಗೆ ವಿವರಿಸಿದರು. ಆತ್ಮನಿರ್ಭರ ಭಾರತವು ವಿಶ್ವದ ಆರ್ಥಿಕತೆಯ ಪುನಶ್ಚೇತನಕ್ಕೆ ಇಂಜಿನ್‌ ಆಗುವ ಸಾಮರ್ಥ್ಯವಿದೆ ಎಂದು ಅವರು ಹೆಮ್ಮೆಯಿಂದ ಹೇಳಿದರು. ಕೊರೊನಾ ಸಂಕಷ್ಟದ ಸಮಯದಲ್ಲಿ ವಿಶ್ವದ 150 ದೇಶಗಳಿಗೆ ಭಾರತ ಔಷಧಿ ರವಾನಿಸಿದೆ ಎನ್ನುವುದನ್ನು ಪ್ರಧಾನ ಮಂತ್ರಿ ಮೋದಿ ಬ್ರಿಕ್ಸ್ ರಾಷ್ಟ್ರಗಳಿಗೆ ನೆನಪು ಮಾಡಿಕೊಟ್ಟರು.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!