ಭಯೋತ್ಪಾದನೆ ವಿಶ್ವ ಎದುರಿಸುತ್ತಿರುವ ಅತಿ ದೊಡ್ಡ ಸಮಸ್ಯೆ: ಪ್ರಧಾನಿ ಮೋದಿ | Terrorism is the biggest threat to the world: PM Modi

ಐದು ರಾಷ್ಟ್ರಗಳ 12ನೇ ಬ್ರಿಕ್ಸ್ (BRICS) ವರ್ಚ್ಯುಯಲ್ ಶೃಂಗಸಭೆಯನ್ನು ಉದ್ದೇಶಿಸಿ ಇಂದು ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಯೋತ್ಪಾದನೆ ವಿಶ್ವ ಎದುರಿಸುತ್ತಿರುವ ಅತಿ ದೊಡ್ಡ ಸಮಸ್ಯೆಯಾಗಿದೆ ಎಂದು ಹೇಳಿದರು. ಭಯೋತ್ಪಾದನೆಯನ್ನು ಪ್ರತಿಪಾದಿಸುವ, ಭಯೋತ್ಪಾದನೆಗೆ ಸಹಾಯ ಮತ್ತು ಪ್ರೋತ್ಸಾಹ ನೀಡುವ ರಾಷ್ಟ್ರಗಳು ತಮ್ಮ ತಪ್ಪನ್ನು ಅರಿತು, ಪರಾಮರ್ಶೆ ಮಾಡಿಕೊಳ್ಳಬೇಕು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಾ ಪಾಕಿಸ್ತಾನಕ್ಕೆ ಅಪರೋಕ್ಷವಾಗಿ ಎಚ್ಚರಿಕೆ ನೀಡಿದರು. ಭಯೋತ್ಪಾದನೆಯ ಸಮಸ್ಯೆಯನ್ನು ಸಂಘಟಿತವಾಗಿ ಹಿಮ್ಮೆಟ್ಟಿಸುವ ಅವಶ್ಯಕತೆಯಿದೆ ಎಂದ ಪ್ರಧಾನಿ, ವಿಶ್ವಸಂಸ್ಥೆಯ ಭದ್ರತಾ ಮಂಡಳಿ, ವಿಶ್ವ ವ್ಯಾಪಾರ ಸಂಸ್ಥೆ, […]

ಭಯೋತ್ಪಾದನೆ ವಿಶ್ವ ಎದುರಿಸುತ್ತಿರುವ ಅತಿ ದೊಡ್ಡ ಸಮಸ್ಯೆ: ಪ್ರಧಾನಿ ಮೋದಿ | Terrorism is the biggest threat to the world: PM Modi
ಅರುಣ್​ ಕುಮಾರ್​ ಬೆಳ್ಳಿ

Updated on: Nov 17, 2020 | 8:32 PM

ಐದು ರಾಷ್ಟ್ರಗಳ 12ನೇ ಬ್ರಿಕ್ಸ್ (BRICS) ವರ್ಚ್ಯುಯಲ್ ಶೃಂಗಸಭೆಯನ್ನು ಉದ್ದೇಶಿಸಿ ಇಂದು ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಯೋತ್ಪಾದನೆ ವಿಶ್ವ ಎದುರಿಸುತ್ತಿರುವ ಅತಿ ದೊಡ್ಡ ಸಮಸ್ಯೆಯಾಗಿದೆ ಎಂದು ಹೇಳಿದರು. ಭಯೋತ್ಪಾದನೆಯನ್ನು ಪ್ರತಿಪಾದಿಸುವ, ಭಯೋತ್ಪಾದನೆಗೆ ಸಹಾಯ ಮತ್ತು ಪ್ರೋತ್ಸಾಹ ನೀಡುವ ರಾಷ್ಟ್ರಗಳು ತಮ್ಮ ತಪ್ಪನ್ನು ಅರಿತು, ಪರಾಮರ್ಶೆ ಮಾಡಿಕೊಳ್ಳಬೇಕು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಾ ಪಾಕಿಸ್ತಾನಕ್ಕೆ ಅಪರೋಕ್ಷವಾಗಿ ಎಚ್ಚರಿಕೆ ನೀಡಿದರು.

ಭಯೋತ್ಪಾದನೆಯ ಸಮಸ್ಯೆಯನ್ನು ಸಂಘಟಿತವಾಗಿ ಹಿಮ್ಮೆಟ್ಟಿಸುವ ಅವಶ್ಯಕತೆಯಿದೆ ಎಂದ ಪ್ರಧಾನಿ, ವಿಶ್ವಸಂಸ್ಥೆಯ ಭದ್ರತಾ ಮಂಡಳಿ, ವಿಶ್ವ ವ್ಯಾಪಾರ ಸಂಸ್ಥೆ, ಅಂತಾರಾಷ್ಟ್ರೀಯ ಹಣಕಾಸು ನಿಧಿ ಮುಂತಾದವುಗಳನ್ನು ಸುಧಾರಣೆಗೊಳಿಸಬೇಕಿರುವ ಅಗತ್ಯವಿದೆ ಎಂದರು. ಭಯೋತ್ಪಾದನೆ ವಿರುದ್ಧದ ನೀತಿಗೆ ಸ್ಪಷ್ಟ ‌ರೂಪ ನೀಡದ ಹೊರತು ಈ ಪೀಡೆಯನ್ನು ಬೇರುಸಹಿತ ಕಿತ್ತುಹಾಕಲಾಗದು ಎಂದು ಮೋದಿ ಹೇಳಿದರು.

ಕೊರೊನಾ ಮಾಹಾಮಾರಿಯ ನಿಯಂತ್ರಣ ಕುರಿತು ಮಾತನಾಡಿದ ಮೋದಿಯವರು, ಭಾರತದಲ್ಲಿ ಲಸಿಕೆ ತಯಾರಿಕೆ ಮತ್ತು ವಿತರಣೆಯ ಕೆಲಸವು ಮಾನವೀಯ ನೆಲೆಗಟ್ಟಿನಲ್ಲಿ ನಡೆಯಲಿದೆ ಎಂದರು. ಆತ್ಮನಿರ್ಭರ ಭಾರತದ ಬಗ್ಗೆಯೂ ಮಾತನಾಡಿದ ಪ್ರಧಾನ ಮಂತ್ರಿಗಳು ಭಾರತ ಕೈಗೆತ್ತಿಕೊಂಡಿರುವ ಸುಧಾರಣೆ ಕ್ರಮಗಳ ಬಗ್ಗೆ ವಿವರಿಸಿದರು. ಆತ್ಮನಿರ್ಭರ ಭಾರತವು ವಿಶ್ವದ ಆರ್ಥಿಕತೆಯ ಪುನಶ್ಚೇತನಕ್ಕೆ ಇಂಜಿನ್‌ ಆಗುವ ಸಾಮರ್ಥ್ಯವಿದೆ ಎಂದು ಅವರು ಹೆಮ್ಮೆಯಿಂದ ಹೇಳಿದರು. ಕೊರೊನಾ ಸಂಕಷ್ಟದ ಸಮಯದಲ್ಲಿ ವಿಶ್ವದ 150 ದೇಶಗಳಿಗೆ ಭಾರತ ಔಷಧಿ ರವಾನಿಸಿದೆ ಎನ್ನುವುದನ್ನು ಪ್ರಧಾನ ಮಂತ್ರಿ ಮೋದಿ ಬ್ರಿಕ್ಸ್ ರಾಷ್ಟ್ರಗಳಿಗೆ ನೆನಪು ಮಾಡಿಕೊಟ್ಟರು.

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Follow Us