ಹೈದರಾಬಾದ್‌ನಲ್ಲಿ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ದಾಳಿ; ಉಗ್ರ ತರಬೇತುದಾರ ಟೆಕ್ಕಿ ಸೇರಿದಂತೆ 18 ವರ್ಷದ ಯುವತಿಯ ಸೆರೆ

Gujarat Anti Terrorism Squad: ಅಮೀರ್ ಪೇಟ್​​​ನಲ್ಲಿ ಟೆಕ್ಕಿಯಾಗಿರುವ ಜಾವೀದ್ ಬಕ್ರೀದ್ ನಿಮಿತ್ತ ನಾಲ್ಕು ದಿನಗಳ ಹಿಂದೆ ಮಗಳೊಂದಿಗೆ ರಾಮಗುಂಡಕ್ಕೆ ಹೋಗಿದ್ದ. ಹೈದರಾಬಾದಿನ ಅಮೀರ್ ಪೇಟ್​​​ನಲ್ಲಿ ಜಾವೀದ್ ಗೆ ಸೇರಿದ ಕೋಚಿಂಗ್ ಸೆಂಟರ್ ನ ಚಟುವಟಿಕೆಗಳ ಬಗ್ಗೆ ಎಟಿಎಸ್ ವಿಚಾರಣೆ ನಡೆಸುತ್ತಿದೆ.

ಹೈದರಾಬಾದ್‌ನಲ್ಲಿ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ದಾಳಿ; ಉಗ್ರ ತರಬೇತುದಾರ ಟೆಕ್ಕಿ ಸೇರಿದಂತೆ 18 ವರ್ಷದ ಯುವತಿಯ ಸೆರೆ
ಹೈದರಾಬಾದ್‌ನಲ್ಲಿ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ದಾಳಿ
Follow us
|

Updated on: Jun 28, 2023 | 10:10 AM

ತೆಲಂಗಾಣದಲ್ಲಿ ಮತ್ತೆ ಭಯೋತ್ಪಾದಕ ಚಟುವಟಿಕೆಗಳು (Terrorism) ಸಂಚಲನ ಮೂಡಿಸುತ್ತಿವೆ. ಗುಜರಾತಿನ ಭಯೋತ್ಪಾದಕ ಶಂಕಿತನ ಜೊತೆ ರಾಮಗುಂಡಂ ಯುವತಿ ಚಾಟ್ ಮಾಡಿರುವುದು ಇದೀಗ ಸಂಚಲನ ಮೂಡಿಸಿದೆ. ಫೇಸ್‌ಬುಕ್ (Facebook) ಮೂಲಕ ನಡೆದಿರುವ ಚಾಟಿಂಗ್​​ ಸಾಮಾನ್ಯ ಸಂಭಾಷಣೆಯಾಗಿದೆಯೇ ಅಥವಾ ಅದಕ್ಕೆ ಬೇರೆ ಯಾವುದಾದರೂ ಕೋನವಿದೆಯೇ ಎಂದು ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್ Gujarat Anti Terrorism Squad) ತನಿಖೆ ನಡೆಸುತ್ತಿದೆ. ಸದ್ಯ ಅನುಮಾನವಷ್ಟೇ ಇದೆ ಎಂದು ಹೇಳಿರುವ ಗುಜರಾತ್ ಎಟಿಎಸ್ ಅಧಿಕಾರಿಗಳು, ಯುವತಿಯನ್ನು ವಿಚಾರಣೆ ನಡೆಸಿದ ಬಳಿಕ ಸ್ಪಷ್ಟನೆ ನೀಡುವುದಾಗಿ ಹೇಳಿದ್ದಾರೆ.

ಹೈದರಾಬಾದ್‌ಗೆ ಧಾವಿಸಿ ಬಂದಿರುವ ಗುಜರಾತ್ ಎಟಿಎಸ್ ಅಧಿಕಾರಿಗಳು ಯುವತಿಯ ಫೋನ್ ಸಂಭಾಷಣೆಗಳು, ಫೇಸ್‌ಬುಕ್ ಚಾಟಿಂಗ್ ಮುಂತಾದ ವಿಷಯಗಳ ಬಗ್ಗೆ ಸಮಗ್ರ ತನಿಖೆ ನಡೆಸುತ್ತಿದ್ದಾರೆ. ಎಟಿಎಸ್ ಮಾಹಿತಿ ಪ್ರಕಾರ ಹುಡುಗಿಯ ವಯಸ್ಸು 18 ವರ್ಷಗಳು. ಆರನೇ ತರಗತಿಯ ನಂತರ ಅವಳು ಓದುವುದನ್ನು ನಿಲ್ಲಿಸಿದ್ದಾಳೆ.

ಮೊಬೈಲ್ ಇದ್ದರೆ ಆಗಾಗ ಗೇಮ್ ಆಡುತ್ತಾಳೆ ಅಂದುಕೊಂಡಿದ್ದೆವು ಎನ್ನುತ್ತಾರೆ ಆ ಯುವತಿಯ ಪಾಲಕರು. ಎಟಿಎಸ್ ಅಧಿಕಾರಿಗಳು ಬರುವವರೆಗೂ ಅವರ ಸಾಮಾಜಿಕ ಮಾಧ್ಯಮ ಖಾತೆಗಳ ಬಗ್ಗೆ ಅಥವಾ ಅವರ ಚಾಟ್‌ಗಳ ಬಗ್ಗೆ ನಮಗೆ ತಿಳಿದಿರಲಿಲ್ಲ ಎಂದು ಪೋಷಕರು ಆತಂಕದ ದನಿಯಲ್ಲಿ ಹೇಳಿದ್ದಾರೆ. ಆದರೆ ಈ ಹೇಳಿಕೆಯು ಕೇವಲ ಅನುಮಾನಾಸ್ಪದವಾಗಿದೆ ಮತ್ತು ಯಾವುದೇ ಭಯೋತ್ಪಾದನೆಯ ಅಂಶವನ್ನು ದೃಢಪಡಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಮತ್ತೊಂದೆಡೆ, ಎಟಿಎಸ್ ಅಧಿಕಾರಿಗಳು ಹೈದರಾಬಾದ್‌ನಲ್ಲಿ ವ್ಯಾಪಕ ಶೋಧ ನಡೆಸುತ್ತಿದ್ದಾರೆ. ಹೈದರಾಬಾದ್‌ನ ಹಲವು ಪ್ರದೇಶಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ. ರಾಮಗುಂಡಂನಲ್ಲಿ ಒಬ್ಬರನ್ನು, ವಾರಂಗಲ್‌ನ ಇಬ್ಬರು ಮತ್ತು ಹೈದರಾಬಾದ್‌ನಲ್ಲಿ ಇಬ್ಬರನ್ನು ಬಂಧಿಸಲಾಗಿದೆಯಂತೆ. ಸೋಮವಾರ ರಾತ್ರಿ ಕಾಲಾಪತ್ತಾರ್ (41) ಎಂಬುವರನ್ನು ಎಟಿಎಸ್ ಅಧಿಕಾರಿಗಳು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ. ಟೋಲಿ ಚೌಕಿ ನಿವಾಸಿ ಮೊಹಮ್ಮದ್ ಜಾವೀದ್ ಸಹ ಬಂಧಿತ ಆರೋಪಿ.

ಜಾವೀದ್ ಅಮೀರ್ ಪೇಟ್​​​ನ ಕೋಚಿಂಗ್ ಸೆಂಟರ್‌ನಲ್ಲಿ ಸಾಫ್ಟ್‌ವೇರ್ ಟ್ರೈನರ್ ಆಗಿ ಕೆಲಸ ಮಾಡುತ್ತಿದ್ದಾನೆ. ಬಕ್ರೀದ್ ನಿಮಿತ್ತ ನಾಲ್ಕು ದಿನಗಳ ಹಿಂದೆ ಮಗಳೊಂದಿಗೆ ರಾಮಗುಂಡಕ್ಕೆ ಹೋಗಿದ್ದ. ಜಾವೀದ್ ಗೆ ಸೇರಿದ ಕೋಚಿಂಗ್ ಸೆಂಟರ್ ನ ಚಟುವಟಿಕೆಗಳ ಬಗ್ಗೆ ಎಟಿಎಸ್ ವಿಚಾರಣೆ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಅಮೀರ್ ಪೇಟೆಯ gಲ್ಲಿ ಗಲ್ಲಿಗಳನ್ನು ಜರಡಿ ಹಿಡಿಯಲಾಗುತ್ತಿದೆ.

ಇನ್ನೂ ನಾಲ್ಕು ಕೋಚಿಂಗ್ ಸೆಂಟರ್‌ಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಉಗ್ರನಿಗೆ ಕೋಚಿಂಗ್ ರೂಪದಲ್ಲಿ ತರಬೇತಿ ನೀಡಲಾಗಿದೆ ಎಂದು ಗುಜರಾತ್ ಎಟಿಎಸ್ ಅಧಿಕಾರಿಗಳು ಶಂಕಿಸಿದ್ದಾರೆ. ಎಟಿಎಸ್ ಅಧಿಕಾರಿಗಳು ಅದರ ವಿವರಗಳನ್ನು ಸಂಪೂರ್ಣವಾಗಿ ತನಿಖೆ ಮಾಡುವ ನಿಟ್ಟಿನಲ್ಲಿ ಮಗ್ನರಾಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ