AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Terrorists Encounter: ಕಾಶ್ಮೀರದಲ್ಲಿ ಉಗ್ರರ ಹುಟ್ಟಡಗಿಸಿದ ಸೈನಿಕರು; ರಾಜೌರಿಯಲ್ಲಿ 6 ಎಲ್​ಇಟಿ ಉಗ್ರರ ಹತ್ಯೆ

ಇದೇ ರಾಜೌರಿ ಅರಣ್ಯದಲ್ಲಿ 9 ಭಾರತೀಯ ಯೋಧರನ್ನು ಉಗ್ರರನ್ನು ಹತ್ಯೆ ಮಾಡಿದ್ದರು. ಅದಕ್ಕೆ ಪ್ರತಿಯಾಗಿ ಎನ್​ಕೌಂಟರ್ ಕಾರ್ಯಾಚರಣೆ ನಡೆಸಿರುವ ಸೇನಾಪಡೆ 6 ಎಲ್​ಇಟಿ ಉಗ್ರರನ್ನು ಬಲಿ ಪಡೆದಿದೆ.

Terrorists Encounter: ಕಾಶ್ಮೀರದಲ್ಲಿ ಉಗ್ರರ ಹುಟ್ಟಡಗಿಸಿದ ಸೈನಿಕರು; ರಾಜೌರಿಯಲ್ಲಿ 6 ಎಲ್​ಇಟಿ ಉಗ್ರರ ಹತ್ಯೆ
ಪ್ರಾತಿನಿಧಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on:Oct 19, 2021 | 5:45 PM

Share

ರಾಜೌರಿ: ಜಮ್ಮು ಕಾಶ್ಮೀರದ ರಾಜೌರಿ ವಲಯದಲ್ಲಿನ ಕಾಡಿನಲ್ಲಿ ಭಾರತೀಯ ಸೇನಾ ಸಿಬ್ಬಂದಿ ಎನ್​ಕೌಂಟರ್ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಪಾಕಿಸ್ತಾನ ಮೂಲದ ಲಷ್ಕರ್-ಇ-ತೊಯ್ಬಾ (ಎಲ್​ಇಟಿ) ಸಂಘಟನೆಯ 6 ಉಗ್ರರನ್ನು ಭಾರತೀಯ ಸೈನಿಕರು ಹತ್ಯೆ ಮಾಡುವ ಮೂಲಕ ಉಗ್ರರ ಬೇಟೆಯನ್ನು ಮುಂದುವರೆಸಿದ್ದಾರೆ.

ರಾಜೌರಿಯ ದಟ್ಟ ಕಾಡಿನಲ್ಲಿ ಉಗ್ರರು ಮತ್ತು ಭಾರತೀಯ ಸೇನೆಯ ನಡುವೆ ಗುಂಡಿನ ಚಕಮಕಿ ಮುಂದುವರೆದಿದೆ. ಕಳೆದೊಂದು ವಾರದಿಂದ ಕಾಶ್ಮೀರ ಕಣಿವೆಯಲ್ಲಿ ಭಾರತೀಯ ಸೇನೆ ಮತ್ತು ಕಾಶ್ಮೀರದ ಪೊಲೀಸರಿಂದ ಎನ್​ಕೌಂಟರ್ ಕಾರ್ಯಾಚರಣೆ ನಡೆಯುತ್ತಿದೆ. ಈಗಾಗಲೇ ಹಲವು ಉಗ್ರರನ್ನು ಹೊಡೆದುರುಳಿಸಲಾಗಿದ್ದು, ಕೆಲವು ಸೈನಿಕರು ಕೂಡ ಹುತಾತ್ಮರಾಗಿದ್ದಾರೆ. ಇದೇ ರಾಜೌರಿ ಅರಣ್ಯದಲ್ಲಿ 9 ಭಾರತೀಯ ಯೋಧರನ್ನು ಉಗ್ರರನ್ನು ಹತ್ಯೆ ಮಾಡಿದ್ದರು. ಅದಕ್ಕೆ ಪ್ರತಿಯಾಗಿ ಎನ್​ಕೌಂಟರ್ ಕಾರ್ಯಾಚರಣೆ ನಡೆಸಿರುವ ಸೇನಾಪಡೆ 6 ಎಲ್​ಇಟಿ ಉಗ್ರರನ್ನು ಬಲಿ ಪಡೆದಿದೆ.

ಪಾಕಿಸ್ತಾನದಿಂದ ಸುಮಾರು 10 ಲಷ್ಕರ್-ಇ-ತೊಯ್ಬಾ ಸಂಘಟನೆಯ ಉಗ್ರರು ಕಳೆದ 2-3 ತಿಂಗಳಲ್ಲಿ ರಾಜೌರಿ-ಪೂಂಚ್ ಜಿಲ್ಲೆಯ ಗಡಿಯಲ್ಲಿರುವ ಅರಣ್ಯದೊಳಗೆ ನುಸುಳಿದ್ದಾರೆ. ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಪಾಕ್ ಉಗ್ರರು ನುಸುಳಲು ಕಾಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Tral Encounter: ಕಾಶ್ಮೀರದ ತ್ರಾಲ್​ನಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಜೈಷ್ ಉಗ್ರ ಸಂಘಟನೆಯ ಕಮಾಂಡರ್ ಹತ್ಯೆ

Terrorist Encounter: ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನಿ ಉಗ್ರರ ಎನ್​ಕೌಂಟರ್, ಹುತಾತ್ಮರಾದ ಇಬ್ಬರು ಭಾರತೀಯ ಯೋಧರು

Published On - 5:39 pm, Tue, 19 October 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ