AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tral Encounter: ಕಾಶ್ಮೀರದ ತ್ರಾಲ್​ನಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಜೈಷ್ ಉಗ್ರ ಸಂಘಟನೆಯ ಕಮಾಂಡರ್ ಹತ್ಯೆ

ಆವಂತಿಪುರ ಜಿಲ್ಲೆಯ ತ್ರಾಲ್​ನಲ್ಲಿ ಜೈಷ್-ಇ-ಮೊಹಮ್ಮದ್ ಸಂಘಟನೆಯ ಕಮಾಂಡರ್ ಶ್ಯಾಮ್ ಸೋಫಿಯನ್ನು ಎನ್​ಕೌಂಟರ್​ನಲ್ಲಿ ಕೊಲ್ಲಲಾಗಿದೆ.

Tral Encounter: ಕಾಶ್ಮೀರದ ತ್ರಾಲ್​ನಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಜೈಷ್ ಉಗ್ರ ಸಂಘಟನೆಯ ಕಮಾಂಡರ್ ಹತ್ಯೆ
ಎನ್​ಕೌಂಟರ್​ನಲ್ಲಿ ಹತನಾದ ಜೈಷ್ ಸಂಘಟನೆಯ ಕಮಾಂಡರ್ ಶಾಮ್ ಸೋಫಿ
TV9 Web
| Edited By: |

Updated on:Oct 13, 2021 | 4:10 PM

Share

ಶ್ರೀನಗರ: ಜಮ್ಮು ಕಾಶ್ಮೀರದ ಆವಂತಿಪುರ ಜಿಲ್ಲೆಯ ತ್ರಾಲ್ ಪ್ರದೇಶದಲ್ಲಿ (Tral Encounter) ಇಂದು ನಡೆದ ಎನ್​ಕೌಂಟರ್ ಕಾರ್ಯಾಚರಣೆಯಲ್ಲಿ ಜೈಷ್-ಇ-ಮೊಹಮ್ಮದ್ (JeM) ಸಂಘಟನೆಯ ಮುಖ್ಯ ಕಮಾಂಡರ್​ನನ್ನು ಹತ್ಯೆ ಮಾಡಲಾಗಿದೆ. ಉಗ್ರರು ಮತ್ತು ಭದ್ರತಾ ಪಡೆಯ ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಜೈಷ್ ಕಮಾಂಡರ್​ನನ್ನು ಹೊಡೆದುರುಳಿಸಲಾಗಿದೆ.

ಈ ಬಗ್ಗೆ ಕಾಶ್ಮೀರದ ಪೊಲೀಸರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಜೈಷ್-ಇ-ಮೊಹಮ್ಮದ್ ಸಂಘಟನೆಯ ಕಮಾಂಡರ್ ಶ್ಯಾಮ್ ಸೋಫಿಯನ್ನು ಎನ್​ಕೌಂಟರ್​ನಲ್ಲಿ ಕೊಲ್ಲಲಾಗಿದೆ ಎಂದು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.

ತ್ರಾಲ್ ಸುತ್ತಮುತ್ತಲೂ ಇನ್ನೂ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಜಮ್ಮು ಕಾಶ್ಮೀರದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಎನ್​ಕೌಂಟರ್ ಕಾರ್ಯಾಚರಣೆ ನಡೆಯುತ್ತಿದೆ. ನಿನ್ನೆ ಎಲ್​ಇಟಿ ಸಂಘಟನೆಯ ಐವರು ಉಗ್ರರನ್ನು ಶೋಪಿಯಾನ್​ನಲ್ಲಿ ನಡೆದ ಎನ್​ಕೌಂಟರ್ ವೇಳೆ ಹತ್ಯೆ ಮಾಡಲಾಗಿತ್ತು. ಭಾರತೀಯ ಸೇನಾಪಡೆ ಉಗ್ರರ ಸದ್ದಡಗಿಸಲು ಪಣ ತೊಟ್ಟಿದ್ದು, ಕಾಶ್ಮೀರದ ಸುತ್ತಮುತ್ತ ಉಗ್ರರನ್ನು ಬೇಟೆಯಾಡುತ್ತಿದ್ದಾರೆ.

ಇದನ್ನೂ ಓದಿ: Terrorist Encounter: ಜಮ್ಮು ಕಾಶ್ಮೀರದಲ್ಲಿ ಪೊಲೀಸರಿಂದ ಎಲ್​ಇಟಿ ಉಗ್ರನ ಎನ್​ಕೌಂಟರ್

ಕಾಶ್ಮೀರದಲ್ಲಿ ಮುಂಜಾನೆ ನಡೆದ ಎನ್​ಕೌಂಟರ್​​; ಇಬ್ಬರು ಉಗ್ರರ ಹತ್ಯೆ, ಮೂವರು ಯೋಧರಿಗೆ ಗಾಯ

Published On - 4:07 pm, Wed, 13 October 21

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ