AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರದಲ್ಲಿ ಉಗ್ರರ ದಾಳಿ; ಐವರು ಯೋಧರ ಮರಣ, ಕಮಾಂಡಿಂಗ್ ಅಧಿಕಾರಿಯ ಪತ್ನಿ, ಪುತ್ರನೂ ಸಾವು

ಉಗ್ರ ದಾಳಿಯನ್ನು ಮಣಿಪುರ ಮುಖ್ಯಮಂತ್ರಿ ಎನ್​.ಬಿರನ್​ ಸಿಂಗ್​ ತೀವ್ರವಾಗಿ ಖಂಡಿಸಿದ್ದಾರೆ. ಟ್ವೀಟ್​ ಮಾಡಿರುವ ಅವರು, 46 ಅಸ್ಸಾಂ ರೈಫಲ್ಸ್​ ಮೇಲೆ ಉಗ್ರರು ಹೇಡಿತನದಿಂದ, ಹೊಂಚು ಹಾಕಿ ದಾಳಿ ಮಾಡಿದ್ದು ಖಂಡನೀಯ ಎಂದು ಹೇಳಿದ್ದಾರೆ.

ಮಣಿಪುರದಲ್ಲಿ ಉಗ್ರರ ದಾಳಿ; ಐವರು ಯೋಧರ ಮರಣ, ಕಮಾಂಡಿಂಗ್ ಅಧಿಕಾರಿಯ ಪತ್ನಿ, ಪುತ್ರನೂ ಸಾವು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Nov 13, 2021 | 3:52 PM

Share

ಉಗ್ರರು ಹೊಂಚು ಹಾಕಿ ನಡೆಸಿದ ದಾಳಿಯಲ್ಲಿ ಭಾರತೀಯ ಸೇನೆಯ ನಾಲ್ವರು ಯೋಧರು, ಅಸ್ಸಾಂ 46 ರೈಫಲ್​​ನ ಕಮಾಂಡಿಂಗ್​ ಅಧಿಕಾರಿ, ಅವರ ಮಗ, ಪತ್ನಿ ಸೇರಿ ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ. ಮಣಿಪುರ ಸಿಂಘಾತ್​​ನಲ್ಲಿ ಇಂದು ಘಟನೆ ನಡೆದಿದ್ದು, ಮೂವರು ಯೋಧರು ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಇವರನ್ನೆಲ್ಲ ಬೆಹಿರಂಗ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಮಣಿಪುರ ಮೂಲದ ಬಂಡುಕೋರರ ಗುಂಪು ಪೀಪಲ್ಸ್​ ಲಿಬರೇಶನ್​ ಆರ್ಮಿ ಈ ದಾಳಿ ನಡೆಸಿದ್ದಾಗಿ ಮಾಹಿತಿ ಸಿಕ್ಕಿದೆ. ಹುತಾತ್ಮರಾದ ಕಮಾಂಡಿಂಗ್​ ಆಫೀಸರ್​​ನ್ನು ಕರ್ನಲ್​ ವಿಪ್ಲವ್​ ತ್ರಿಪಾಠಿ ಎಂದು ಗುರುತಿಸಲಾಗಿದೆ.  ಇವರು ಮಯನ್ಮಾರ್ ಗಡಿಯಲ್ಲಿ ಇದ್ದವರು, ದಾಳಿ ನಡೆಯುವ ಸಂದರ್ಭದಲ್ಲಿ ಅಲ್ಲಿಂದ ಕುಟುಂಬದೊಂದಿಗೆ ಹಿಂತಿರುಗುತ್ತಿದ್ದರು. 

ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಅವರು ಯೋಧರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಉಗ್ರರ ಈ ಹೇಡಿತನದ ದಾಳಿ ನಿಜಕ್ಕೂ ನೋವು ತಂದಿದೆ ಮತ್ತು ಖಂಡನೀಯವಾಗಿದೆ. ಐವರು ವೀರ ಯೋಧರನ್ನು ಈ ದೇಶ ಇಂದು ಕಳೆದುಕೊಂಡಿದೆ. ಅದರಲ್ಲೂ ಕಮಾಂಡಿಂಗ್ ಅಧಿಕಾರಿಯ ಕುಟುಂಬವನ್ನು ಟಾರ್ಗೆಟ್​ ಮಾಡಿದ್ದು ನಿಜಕ್ಕೂ ದುರಂತ.  ಈ ಸಾವಿಗೆ ನ್ಯಾಯ ಒದಗಿಸದೆ ಸುಮ್ಮನಾಗುವುದಿಲ್ಲ ಎಂದಿದ್ದಾರೆ.

ಮುಖ್ಯಮಂತ್ರಿ ಖಂಡನೆ ಈ ಉಗ್ರ ದಾಳಿಯನ್ನು ಮಣಿಪುರ ಮುಖ್ಯಮಂತ್ರಿ ಎನ್​.ಬಿರನ್​ ಸಿಂಗ್​ ತೀವ್ರವಾಗಿ ಖಂಡಿಸಿದ್ದಾರೆ. ಟ್ವೀಟ್​ ಮಾಡಿರುವ ಅವರು, 46 ಅಸ್ಸಾಂ ರೈಫಲ್ಸ್​ ಮೇಲೆ ಉಗ್ರರು ಹೇಡಿತನದಿಂದ, ಹೊಂಚು ಹಾಕಿ ದಾಳಿ ಮಾಡಿದ್ದು ಖಂಡನೀಯ. ಸಿಸಿಪುರ ಎಂಬಲ್ಲಿ ನಡೆದ ಈ ದಾಳಿಯಲ್ಲಿ ಕಮಾಂಡಿಂಗ್​ ಅಧಿಕಾರಿ ಮತ್ತವರ ಕುಟುಂಬವೂ ಹತ್ಯೆಗೀಡಾಗಿದೆ. ಯೋಧರು ಹುತಾತ್ಮರಾಗಿದ್ದಾರೆ. ಉಗ್ರರನ್ನು ಸೆರೆಹಿಡಿಯಲು ರಾಜ್ಯದ ಭದ್ರತಾ ಪಡೆಗಳು ಮತ್ತು ಪ್ಯಾರಾಮಿಲಿಟರಿ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆ ಖಂಡಿತ ಆಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಅಪ್ಪುಗೆ ಅವಮಾನ ಮಾಡಲು ಯಾರಿಂದಲೂ ಸಾಧ್ಯವಿಲ್ಲ’: ಶಾಂಪೇನ್​ ಅಚಾತುರ್ಯಕ್ಕೆ ರಕ್ಷಿತಾ ಪ್ರೇಮ್​ ಕ್ಷಮೆ

Published On - 3:03 pm, Sat, 13 November 21

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ