AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರದಲ್ಲಿ ಉಗ್ರರ ದಾಳಿ; ಐವರು ಯೋಧರ ಮರಣ, ಕಮಾಂಡಿಂಗ್ ಅಧಿಕಾರಿಯ ಪತ್ನಿ, ಪುತ್ರನೂ ಸಾವು

ಉಗ್ರ ದಾಳಿಯನ್ನು ಮಣಿಪುರ ಮುಖ್ಯಮಂತ್ರಿ ಎನ್​.ಬಿರನ್​ ಸಿಂಗ್​ ತೀವ್ರವಾಗಿ ಖಂಡಿಸಿದ್ದಾರೆ. ಟ್ವೀಟ್​ ಮಾಡಿರುವ ಅವರು, 46 ಅಸ್ಸಾಂ ರೈಫಲ್ಸ್​ ಮೇಲೆ ಉಗ್ರರು ಹೇಡಿತನದಿಂದ, ಹೊಂಚು ಹಾಕಿ ದಾಳಿ ಮಾಡಿದ್ದು ಖಂಡನೀಯ ಎಂದು ಹೇಳಿದ್ದಾರೆ.

ಮಣಿಪುರದಲ್ಲಿ ಉಗ್ರರ ದಾಳಿ; ಐವರು ಯೋಧರ ಮರಣ, ಕಮಾಂಡಿಂಗ್ ಅಧಿಕಾರಿಯ ಪತ್ನಿ, ಪುತ್ರನೂ ಸಾವು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Nov 13, 2021 | 3:52 PM

Share

ಉಗ್ರರು ಹೊಂಚು ಹಾಕಿ ನಡೆಸಿದ ದಾಳಿಯಲ್ಲಿ ಭಾರತೀಯ ಸೇನೆಯ ನಾಲ್ವರು ಯೋಧರು, ಅಸ್ಸಾಂ 46 ರೈಫಲ್​​ನ ಕಮಾಂಡಿಂಗ್​ ಅಧಿಕಾರಿ, ಅವರ ಮಗ, ಪತ್ನಿ ಸೇರಿ ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ. ಮಣಿಪುರ ಸಿಂಘಾತ್​​ನಲ್ಲಿ ಇಂದು ಘಟನೆ ನಡೆದಿದ್ದು, ಮೂವರು ಯೋಧರು ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಇವರನ್ನೆಲ್ಲ ಬೆಹಿರಂಗ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಮಣಿಪುರ ಮೂಲದ ಬಂಡುಕೋರರ ಗುಂಪು ಪೀಪಲ್ಸ್​ ಲಿಬರೇಶನ್​ ಆರ್ಮಿ ಈ ದಾಳಿ ನಡೆಸಿದ್ದಾಗಿ ಮಾಹಿತಿ ಸಿಕ್ಕಿದೆ. ಹುತಾತ್ಮರಾದ ಕಮಾಂಡಿಂಗ್​ ಆಫೀಸರ್​​ನ್ನು ಕರ್ನಲ್​ ವಿಪ್ಲವ್​ ತ್ರಿಪಾಠಿ ಎಂದು ಗುರುತಿಸಲಾಗಿದೆ.  ಇವರು ಮಯನ್ಮಾರ್ ಗಡಿಯಲ್ಲಿ ಇದ್ದವರು, ದಾಳಿ ನಡೆಯುವ ಸಂದರ್ಭದಲ್ಲಿ ಅಲ್ಲಿಂದ ಕುಟುಂಬದೊಂದಿಗೆ ಹಿಂತಿರುಗುತ್ತಿದ್ದರು. 

ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಅವರು ಯೋಧರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಉಗ್ರರ ಈ ಹೇಡಿತನದ ದಾಳಿ ನಿಜಕ್ಕೂ ನೋವು ತಂದಿದೆ ಮತ್ತು ಖಂಡನೀಯವಾಗಿದೆ. ಐವರು ವೀರ ಯೋಧರನ್ನು ಈ ದೇಶ ಇಂದು ಕಳೆದುಕೊಂಡಿದೆ. ಅದರಲ್ಲೂ ಕಮಾಂಡಿಂಗ್ ಅಧಿಕಾರಿಯ ಕುಟುಂಬವನ್ನು ಟಾರ್ಗೆಟ್​ ಮಾಡಿದ್ದು ನಿಜಕ್ಕೂ ದುರಂತ.  ಈ ಸಾವಿಗೆ ನ್ಯಾಯ ಒದಗಿಸದೆ ಸುಮ್ಮನಾಗುವುದಿಲ್ಲ ಎಂದಿದ್ದಾರೆ.

ಮುಖ್ಯಮಂತ್ರಿ ಖಂಡನೆ ಈ ಉಗ್ರ ದಾಳಿಯನ್ನು ಮಣಿಪುರ ಮುಖ್ಯಮಂತ್ರಿ ಎನ್​.ಬಿರನ್​ ಸಿಂಗ್​ ತೀವ್ರವಾಗಿ ಖಂಡಿಸಿದ್ದಾರೆ. ಟ್ವೀಟ್​ ಮಾಡಿರುವ ಅವರು, 46 ಅಸ್ಸಾಂ ರೈಫಲ್ಸ್​ ಮೇಲೆ ಉಗ್ರರು ಹೇಡಿತನದಿಂದ, ಹೊಂಚು ಹಾಕಿ ದಾಳಿ ಮಾಡಿದ್ದು ಖಂಡನೀಯ. ಸಿಸಿಪುರ ಎಂಬಲ್ಲಿ ನಡೆದ ಈ ದಾಳಿಯಲ್ಲಿ ಕಮಾಂಡಿಂಗ್​ ಅಧಿಕಾರಿ ಮತ್ತವರ ಕುಟುಂಬವೂ ಹತ್ಯೆಗೀಡಾಗಿದೆ. ಯೋಧರು ಹುತಾತ್ಮರಾಗಿದ್ದಾರೆ. ಉಗ್ರರನ್ನು ಸೆರೆಹಿಡಿಯಲು ರಾಜ್ಯದ ಭದ್ರತಾ ಪಡೆಗಳು ಮತ್ತು ಪ್ಯಾರಾಮಿಲಿಟರಿ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆ ಖಂಡಿತ ಆಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಅಪ್ಪುಗೆ ಅವಮಾನ ಮಾಡಲು ಯಾರಿಂದಲೂ ಸಾಧ್ಯವಿಲ್ಲ’: ಶಾಂಪೇನ್​ ಅಚಾತುರ್ಯಕ್ಕೆ ರಕ್ಷಿತಾ ಪ್ರೇಮ್​ ಕ್ಷಮೆ

Published On - 3:03 pm, Sat, 13 November 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!