AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Poonch Terror Attack: ಜಮ್ಮು ಕಾಶ್ಮೀರದ ಪೂಂಚ್​ನಲ್ಲಿ ಉಗ್ರರ ಗುಂಡೇಟಿಗೆ ಸೇನಾಧಿಕಾರಿ, ಯೋಧ ಸಾವು

Jammu Kashmir Encounter: ಪೂಂಚ್-ರಾಜೌರಿ ಅರಣ್ಯದಲ್ಲಿ ಸೇನೆ ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಸೇನಾ ಅಧಿಕಾರಿ, ಸೈನಿಕ ಹುತಾತ್ಮರಾಗಿದ್ದಾರೆ. ನಾಲ್ಕು ದಿನಗಳ ಹಿಂದೆ ಇದೇ ಪ್ರದೇಶದಲ್ಲಿ ಐವರು ಸೇನಾ ಸಿಬ್ಬಂದಿಗಳನ್ನು ಉಗ್ರರು ಹತ್ಯೆ ಮಾಡಿದ್ದರು.

Poonch Terror Attack: ಜಮ್ಮು ಕಾಶ್ಮೀರದ ಪೂಂಚ್​ನಲ್ಲಿ ಉಗ್ರರ ಗುಂಡೇಟಿಗೆ ಸೇನಾಧಿಕಾರಿ, ಯೋಧ ಸಾವು
ಭಾರತೀಯ ಯೋಧರು
TV9 Web
| Edited By: |

Updated on: Oct 15, 2021 | 8:54 AM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗುರುವಾರ ತಡರಾತ್ರಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಸೇನಾಧಿಕಾರಿ ಮತ್ತು ಓರ್ವ ಯೋಧ ಹುತಾತ್ಮರಾಗಿದ್ದಾರೆ. ಪೂಂಚ್-ರಾಜೌರಿ ಅರಣ್ಯದಲ್ಲಿ ಸೇನೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಕಾಳಗ ನಡೆಯಿತು. ನಾಲ್ಕು ದಿನಗಳ ಹಿಂದೆ ಇದೇ ಪ್ರದೇಶದಲ್ಲಿ ಐವರು ಸೇನಾ ಸಿಬ್ಬಂದಿಗಳನ್ನು ಉಗ್ರರು ಹತ್ಯೆ ಮಾಡಿದ್ದರು.

ಉಗ್ರರ ಗುಂಡೇಟಿನಿಂದ ಸೇನಾಧಿಕಾರಿ ಮತ್ತು ಓರ್ವ ಯೋಧ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರಿಬ್ಬರೂ ಸಾವನ್ನಪ್ಪಿದ್ದಾರೆ. ಪೂಂಚ್-ರಾಜೌರಿ ಕಾಡಿನಲ್ಲಿ ಉಗ್ರರು ಮತ್ತು ಸೇನಾ ಪಡೆಯ ನಡುವೆ ನಡೆದ ಕಾರ್ಯಾಚರಣೆ ವೇಳೆ ಸೇನಾ ಅಧಿಕಾರಿ ಮತ್ತು ನಾಲ್ವರು ಸೈನಿಕರು ಸಾವನ್ನಪ್ಪಿದ್ದರು. ಅದಾದ ಬಳಿ ಆ ಪ್ರದೇಶದಲ್ಲಿ ಹೆಚ್ಚಿನ ಸೇನಾಪಡೆಯನ್ನು ನಿಯೋಜನೆ ಮಾಡಲಾಗಿತ್ತು. ನಿನ್ನೆ ಗುಂಡೇಟಿನಿಂದ ಸೇನಾ ಅಧಿಕಾರಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಜಮ್ಮು-ಪೂಂಚ್-ರಾಜೌರಿ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ.

ಅಕ್ಟೋಬರ್ 10ರಂದು ತಡರಾತ್ರಿ ಭದ್ರತಾ ಸಿಬ್ಬಂದಿಯ ಮೇಲೆ ಗುಂಡಿನ ದಾಳಿ ನಡೆಸಿದ ಭಯೋತ್ಪಾದಕರ ಗುಂಪಿನೊಂದಿಗೆ ಮತ್ತೆ ನಿನ್ನೆ ಎನ್​ಕೌಂಟರ್ ಕಾರ್ಯಾಚರಣೆ ನಡೆಸಲಾಗಿತ್ತು. ಈ ವೇಳೆ ಸೇನಾಧಿಕಾರಿ ಹಾಗೂ ಯೋಧನೋರ್ವ ಸಾವನ್ನಪ್ಪಿದ್ದಾರೆ. ಗುರುವಾರ ಸಂಜೆ ಸೇನಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇನ್ನೂ ಕಾರ್ಯಾಚರಣೆ ಮುಂದುವರೆದಿದೆ.

ಇದನ್ನೂ ಓದಿ: Tral Encounter: ಕಾಶ್ಮೀರದ ತ್ರಾಲ್​ನಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಜೈಷ್ ಉಗ್ರ ಸಂಘಟನೆಯ ಕಮಾಂಡರ್ ಹತ್ಯೆ

Poonch Encounter: ಜಮ್ಮು ಕಾಶ್ಮೀರದ ಪೂಂಚ್​ನಲ್ಲಿ ಉಗ್ರರ ಗುಂಡೇಟಿನಿಂದ ಸೇನಾ ಅಧಿಕಾರಿ, ನಾಲ್ವರು ಯೋಧರು ಸಾವು

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ