AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್​​-ಸಿಆರ್​ಪಿಎಫ್​ ತುಕಡಿಗಳ ಮೇಲೆ ಉಗ್ರರ ದಾಳಿ

ದಾಳಿ ವೇಳೆ ಓರ್ವ ಪೋಲಿಸ್ ಸಿಬ್ಬಂದಿ ಮತ್ತು ಓರ್ವ ನಾಗರಿಕ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್​​-ಸಿಆರ್​ಪಿಎಫ್​ ತುಕಡಿಗಳ ಮೇಲೆ ಉಗ್ರರ ದಾಳಿ
ಸಾಂದರ್ಭಿಕ ಚಿತ್ರ
preethi shettigar
| Edited By: |

Updated on: Dec 06, 2020 | 5:28 PM

Share

ಶ್ರೀನಗರ: ಪೊಲೀಸ್ ಮತ್ತು ಸಿಆರ್​ಪಿಎಫ್​ ಸಿಬ್ಬಂದಿಯಿದ್ದ ಜಂಟಿ ಕಾರ್ಯಾಚರಣೆ ತುಕಡಿಯ ಮೇಲೆ ಭಾನುವಾರ ಮುಂಜಾನೆ ಭಯೋತ್ಪಾದಕರು ದಾಳಿ ಮಾಡಿದ್ದಾರೆ. ದಾಳಿ ವೇಳೆ ಓರ್ವ ಪೋಲಿಸ್ ಸಿಬ್ಬಂದಿ ಮತ್ತು ಓರ್ವ ನಾಗರಿಕ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹವಾಲ್ ಪ್ರದೇಶದ ಸಜ್ಗಾರಿಪುರದಲ್ಲಿ ಈ ಘಟನೆ ನಡೆದಿದ್ದು, ಪೊಲೀಸರ ಮೇಲೆ ಭಯೋತ್ಪಾದಕರು ನಿರ್ದಾಕ್ಷಿಣ್ಯವಾಗಿ ಗುಂಡು ಹಾರಿಸಿದರು. ಈ ಸಂದರ್ಭ ಪೊಲೀಸ್ ಸಿಬ್ಬಂದಿ ಫಾರೂಕ್ ಅಹ್ಮದ್ ಚೋಪನ್ ಮತ್ತು ನಾಗರಿಕ ಮುನೀರ್ ಅಹ್ಮದ್ ಗಾಯಗೊಂಡರು. ಸದ್ಯ ಈ ಪ್ರದೇಶವನ್ನು ರಕ್ಷಣಾ ಸಿಬ್ಬಂದಿ ಸುತ್ತುವರಿದಿದ್ದು, ಭಯೋತ್ಪಾದಕರಿಗಾಗಿ ಶೋಧಕಾರ್ಯ ನಡೆದಿದೆ ಎಂದು ಕಾಶ್ಮೀರ ವಲಯದ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರವು ಹಿಂಪಡೆದ ನಂತರ ಕಾಶ್ಮೀರದ ಶಾಂತಿ ಹಾಳುಮಾಡುವ ಪ್ರಯತ್ನಗಳು ನಡೆಯುತ್ತಿದ್ದವು. ಗಡಿದಾಟಿ ಬರುವ ಯತ್ನವೂ ಸೇರಿದಂತೆ ಭಯೋತ್ಪಾದಕ ಸಂಘಟನೆಗಳ ಹಲವು ಹುನ್ನಾರಗಳನ್ನು ಭದ್ರತಾಪಡೆಗಳ ವಿಫಲಗೊಳಿಸಿದ್ದವು.

ಮತ್ತೆ ಮತಿಗೇಡಿ ಉಗ್ರರ ಅಟ್ಟಹಾಸ, ಮೂವರು CRPF ಯೋಧರು ಹುತಾತ್ಮ

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ